ಎ.21 – 22: ಸುಳ್ಯದ ಶ್ರೀ ಗುರುರಾಘವೇಂದ್ರ ಮಠದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ – ಈ ಬಾರಿ ಡಾ. ಕೆ.ವಿ ಚಿದಾನಂದ ಅವರಿಗೆ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ” ಪ್ರದಾನ ; ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪತ್ರಿಕಾಗೋಷ್ಠಿ

ಸುಳ್ಯದ ಶ್ರೀ ಗುರುರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕೋತ್ಸವವು ಎ.21 ಮತ್ತು 22ರಂದು ನಡೆಯಲಿದ್ದು, ಈ ಬಾರಿ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ”ಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರಿಗೆ ಪ್ರದಾನ ಮಾಡಲಾಗುವುದು. ಎಂದು ಶ್ರೀ ಗುರುರಾಘವೇಂದ್ರ ಮಠದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ....

ಬೆಳ್ಳಾರೆ : ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು – ಸ್ಥಳದಲ್ಲಿದ್ದ ಕಾರ್ಮಿಕರಿಗೆ ಗಂಭೀರ ಗಾಯ

ಬೆಳ್ಳಾರೆ ಸಮೀಪದ ಕೊಡಿಯಾಲ ಕಲ್ಪಣೆ ಎಂಬಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿದ್ದ ಪಂಚಾಯತ್ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Ad Widget

ಸುಬ್ರಹ್ಮಣ್ಯ : ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಸೇತುವೆ ಹಾಗೂ ಕುಲ್ಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಏಪ್ರಿಲ್ 14 : ಕುಕ್ಕೆ ಸುಬ್ರಹ್ಮಣ್ಯದ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಏ.12 ರವಿವಾರದಂದು 530ನೇ ವಾರದ ಸ್ವಚ್ಚತಾ ಅಭಿಯಾನವು ಕುಲ್ಕುಂದ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಕುಮಾರಧಾರ ಸೇತುವೆ ಯವರೆಗೆ ಇದ್ದಂತಹ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲ್‌ಗಳು, ಕಸ-ಕಡ್ಡಿ, ಪ್ಲಾಸ್ಟಿಕ್ ಚೀಲ ಹಾಗೂ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.ರವಿ...

ಮೆದಿನಡ್ಕ : ಮುತ್ತುಮಾರಿಯಮ್ಮ ದೇವಾಲಯದಲ್ಲಿ  ನಿರ್ಮಾಣವಾದ  ಇಂಟರ್ ಲಾಕ್ ಉದ್ಘಾಟನೆ

ಅಜ್ಜಾವರ ಗ್ರಾಮದ ಮೆದಿನಡ್ಕ ಮುತ್ತುಮಾರಿಯಮ್ಮ ದೇವಾಲಯದಲ್ಲಿ  ರೂ 3.50ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ  ನೆಲಹಾಸು (ಇಂಟರ್ ಲಾಕ್)  ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ  ಸುಭೋದ್ ಶೆಟ್ಟಿ ಮೇನಾಲ,ರಾಜೇಶ್ ರೈ ಮೇನಾಲ, ವಿಕ್ರಂ ಅಡ್ಪಂಗಾಯ, ವಸಂತ ನಡುಬೈಲು,‌ ಕಿಟ್ಟಣ್ಣ ರೈ‌ ಮೇನಾಲ, ನಯನ ರೈ ಮೇನಾಲ, ಚಂದ್ರಶೇಖರ ಕೇರ್ಪಳ, ಚಂದ್ರಶೇಖರ ನೆಡಿಲು, ದೇವಸ್ಥಾನದ ಅಧ್ಯಕ್ಷರಾದ ನಾಚಿಮುತ್ತು,...

ಮೆದಿನಡ್ಕ : ಮುತ್ತುಮಾರಿಯಮ್ಮ ದೇವಾಲಯದಲ್ಲಿ ನಿರ್ಮಾಣವಾದ ಇಂಟರ್ ಲಾಕ್ ಉದ್ಘಾಟನೆ

ಅಜ್ಜಾವರ ಗ್ರಾಮದ ಮೆದಿನಡ್ಕ ಮುತ್ತುಮಾರಿಯಮ್ಮ ದೇವಾಲಯದಲ್ಲಿ ರೂ 3.50ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೆಲಹಾಸು(ಇಂಟರ್ ಲಾಕ್) ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಭೋದ್ ಶೆಟ್ಟಿ ಮೇನಾಲ, ರಾಜೇಶ್ ರೈ ಮೇನಾಲ, ವಿಕ್ರಂ ಅಡ್ಪಂಗಾಯ, ವಸಂತ ನಡುಬೈಲು,‌ ಕಿಟ್ಟಣ್ಣ ರೈ‌ ಮೇನಾಲ, ನಯನ ರೈ ಮೇನಾಲ, ಚಂದ್ರಶೇಖರ ಕೇರ್ಪಳ, ಚಂದ್ರಶೇಖರ ನೆಡಿಲು, ದೇವಸ್ಥಾನದ ಅಧ್ಯಕ್ಷರಾದ...

ಕುಲ್ಕುಂದ : ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ ; ಏ.19 ಹಾಗೂ 20 ರಂದು “ವಾರ್ಷಿಕ ಜಾತ್ರಾ ಮಹೋತ್ಸವ”

ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಆದಿತ್ಯವಾರದಿಂದ ಏ.20 ಸೋಮವಾರದವರೆಗೆ “ವಾರ್ಷಿಕ ಜಾತ್ರಾ ಮಹೋತ್ಸವ”ವು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಏ.13ರಂದು ಗೊನೆ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು, ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ, ಜಾತ್ರೋತ್ಸವ ಸಮಿತಿ ಹಾಗೂ ಎಲ್ಲಾ ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು,...

ಕೆ.ಎಫ್.ಡಿ.ಸಿ ಫ್ರೆಂಡ್ಸ್ ನಾಗಪಟ್ಟಣ ವತಿಯಿಂದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಸುಳ್ಯ ನಾಗಪಟ್ಟಣ ಶಾಲಾ ಮೈದಾನದಲ್ಲಿ ದಿವಂಗತ ಜಯರಾಮ್ ಎ.ಎಸ್.ಐ ಇವರ ಸ್ಮರಣಾರ್ಥ ಅಂತರ್ ರಾಜ್ಯ ಮಟ್ಟದ ಹಗಲು ರಾತ್ರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ದೊಡ್ಡಣ್ಣ ಬರಮೇಲು ತೆಂಗಿನ ಕಾಯಿ ಒಡೆದು ಕ್ರೀಡಾಗಣ ಭೂಮಿ ಪೂಜೆ ನೆರವೇರಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು...

ಮೂಡುಬಿದಿರೆಯಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ನ ನೂತನ ಮಳಿಗೆ ಉದ್ಘಾಟನೆ

ಮೂಡುಬಿದಿರೆಯ ಬಸ್‌ ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಭಾನುವಾರ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, “ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು...

ಗುತ್ತಿಗಾರು : ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರ

ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಅರೆ ಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರವನ್ನು ಏರ್ಪಡಿಸಲಾಯಿತು. ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ಇವರು ಉದ್ಘಾಟಿಸಿ “ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ಭಾಷೆಯನ್ನು ಮಾತನಾಡುವವರಿಗೆ...

ಬೆಳ್ಳಾರೆ : ಗಂಗಾಧರ ಶೆಟ್ಟಿ ಮುಂಡೇಪು ನಿಧನ

ಬೆಳ್ಳಾರೆ ಗ್ರಾಮದ ಬೆಳ್ಳಾರೆ ನಿವಾಸಿ ಗಂಗಾಧರ ಶೆಟ್ಟಿ ಮುಂಡೇಪು (76 ) ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಏ.13 ರಂದು ನಿಧನರಾದರು.ಮೃತರು ಪತ್ನಿ ಯಮುನಾ, ಪುತ್ರರಾದ ರಾಘವ, ವೆಂಕಟ್ರಮಣ, ವಿಜಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!