Ad Widget

ಬಿಜೆಪಿ ಮಹಿಳಾ ಮೋರ್ಚಾದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸನ್ಮಾನ

ಸುಳ್ಯ ಬಿಜೆಪಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರಿಗೆ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ, ಕಾರ್ಯದಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಬಾರ್ ತೆರೆಯಬಾರದೆಂದು ಹರ್ಷಿತ್ ಅವರು ಅಕ್ರಮ ಗಣಿಗಾರಿಕೆ ಹಣೆಪಟ್ಟಿ ಕಟ್ಟಿ ನಮ್ಮನ್ನು ಮಣಿಸಲು ಯತ್ನಿಸುತ್ತಿದ್ದಾರೆ – ದೇವಿಪ್ರಸಾದ್ ಚಿಕ್ಮುಳಿ

ನಾವು ನಮ್ಮ ಕಟ್ಟಡದಲ್ಲಿ ಬಾರ್ ತೆರೆದರೆ ತಮ್ಮ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಕ್ರಮ ಗಣಿಗಾರಿಕೆ ಎಂಬ ಹಣೆಪಟ್ಟಿ ನೀಡಿ ಹರ್ಷಿತ್ ಕೊರಂಬಟ ಮತ್ತು ನಿವೃತ್ತ ಪಿಡ್ಲ್ಯೂಡಿ ಇಂಜಿನಿಯರ್ ಗಿರೀಶ್ ಕೊರಂಬಟ ಎಂಬವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಸಾಮಾಜಿಕ ಕಾರ್ಯಕರ್ತ ಎಂದು ಬಿಂಬಿಸಿಕೊಂಡಿರುವ ಅಡ್ಕಾರು ವಿನೋಬನಗರದ ಭೋಜಪ್ಪ ನಾಯ್ಕ ಅವರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ದೇವಿಪ್ರಸಾದ್...
Ad Widget

ಸುಳ್ಯ : ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ

ಸುಳ್ಯ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಪಕ್ಷದ ಕಚೇರಿಯಲ್ಲಿ ಆ.23 ರಂದು ನಡೆಯಿತು.‌ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಓಬಿಸಿ ಸುಳ್ಯ ಮಂಡಲ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ...

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನುತುಪ್ಪ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ

ಪುತ್ತೂರಿನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಯವರು ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನುತುಪ್ಪವನ್ನು ಇಂದು ಉದ್ಘಾಟಿಸಿ ಮಾರುಕಟ್ಟೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಪುತ್ತೂರಿನ ಶಾಸಕರಾದ ಮಾನ್ಯ ಸಂಜೀವ ಮಠಂದೂರು, ಗ್ರಾಮಜನ್ಯದ ಅಧ್ಯಕ್ಷರಾದ ರಾಮಕೃಷ್ಣ ಭಟ್ ಕುರುಂಬುಡೆಲು, ನಿರ್ದೇಶಕರಾದ ಮೂಲಚಂದ್ರ ಕೆ., ಶಂಕರ ಭಾರದ್ವಾಜ್, ರಾಮಪ್ರತೀಕ ಕರಿಯಾಲ,...

ತಾಳೆ ಬೆಳೆಗಾರರ ಸಂಘದ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ರೈತರಿಗೆ ಬೆಂಬಲ ಬೆಲೆ ಹಾಗೂ ಕೃಷಿಗೆ ವಿಸ್ತರಣೆಗೆ ಪ್ರೋತ್ಸಾಹ ನೀಡಲು ಒತ್ತಾಯ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ಸುಳ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ ತಾಳೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಅಂತರ ರಾಷ್ಟ್ರೀಯ ಪಾಮ್ ಎಣ್ಣೆ ದರ ಆಧರಿಸಿ ಎಣ್ಣೆ ಹಾಗೂ ತಾಳೆ ಹಣ್ಣಿನ ಖರೀದಿ ದರ ನಿರ್ಧರಿಸಲಾಗುತ್ತದೆ.ಆ ಬೆಲೆ ಇಲ್ಲಿನ ಉತ್ಪಾದಕ ವೆಚ್ಚದ ಅನ್ವಯ ಲಾಭದಾಯಕವಾಗುವುದಿಲ್ಲ...

ಎಲಿಮಲೆ : ರಕ್ಷಾಬಂಧನ

ಎಲಿಮಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಯೋಧ್ಯೆ ಶಾಖೆ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಆ 22 ರಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.ಶಾಖೆಯ ಪ್ರಮುಖ್ ಹಾಗೂ ಸದಸ್ಯರು ಮತ್ತು ಸ್ಥಳೀಯರು ಸಹೋದರತೆಯನ್ನು ಸಾರುವ ರಕ್ಷೆಯನ್ನು ಪರಸ್ಪರ ರಾಖಿ ಕಟ್ಟುವುದರೊಂದಿಗೆ ಆಚರಿಸಿದರು.

ರಕ್ಷಾಬಂಧನದ ಮಹತ್ವ ಮಕ್ಕಳಲ್ಲಿ ಮೂಡಿಸುವುದು ಶ್ಲಾಘನೀಯ : ದಯಾಕರ ಆಳ್ವ

ಕುಂಡಡ್ಕ : ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ರವಿವಾರ ಕುಂಡಡ್ಕ ದಲಿತ ಕಾಲನಿಯ ನಿವಾಸಿ ಶೇಷಪ್ಪ ಅವರ ನಿವಾಸದಲ್ಲಿ ನಡೆಯಿತು. ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು...

ಅಡಿಕೆ ಹಳದಿರೋಗದ ಪರಿಹಾರಕ್ಕೆ ವಿಶೇಷ ಅನುದಾನಕ್ಕೆ ಬದ್ದ- ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನೂ ಸಾಬೀತುಪಡಿಸಲು ಸೂಕ್ತ ಕ್ರಮದ ಭರವಸೆ – ಶೋಭಾ ಕರಂದ್ಲಾಜೆ

ಯುಪಿಎ ಅವಧಿಯಲ್ಲಿ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶದ ಕುರಿತ ಅರ್ಜಿ ಸದ್ಯ ಸುಪ್ರಿಂ ಕೋರ್ಟ್ ನಲ್ಲಿದೆ. ಅಡಿಕೆ ಎಂಬುದು ರಾಸಾಯನಿಕ ಬೆರೆಸದಿದ್ದರೆ ಹಾನಿಕಾರಕವಲ್ಲ. ಅದು ರೋಗ ನಿರೋಧಕ ಶಕ್ತಿ ಹೊಂದಿರುವ ಒಂದು ಉತ್ಪನ್ನ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಸುಪ್ರಿಂ ಕೋರ್ಟ್ ನಲ್ಲಿ ಸಾಬೀತು ಪಡಿಸಿ ಅಡಿಕೆ ಬೆಳೆಗಾರರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ...

ಬಳ್ಪ ಹಿಂಜಾವೇ ವತಿಯಿಂದ ರಕ್ಷಾಬಂಧನ

ಆ.22ರಂದು ಬಳ್ಪದ ವಿಕ್ರಮ ಯುವಕ ಮಂಡಲದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ ನಡೆಯಿತು.ರಾ.ಸ್ವಂ.ಸೇವಾ ಸಂಘದ ಪ್ರಕಾಶ್ ಆಚಾರ್ಯ ನರಿಯಂಗ ಇವರು ಭಗವ ಧ್ವಜಾರೋಹಣದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಪ ಹಿಂ.ಜಾ.ವೇ.ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಗೂನಡ್ಕ: ಎಸ್ ಡಿ ಪಿ ಐ ವತಿಯಿಂದ ಶೌಚಾಲಯ ಹಸ್ತಾಂತರ

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಎಸ್ ಡಿ ಪಿ ಐ ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿಎಸ್. ಡಿ. ಪಿ. ಐ. ಸಂಪಾಜೆ ವಲಯ ಕಾರ್ಯದರ್ಶಿಗಳಾದ ಫಾರೂಕ್ ಕಾನಕ್ಕೋಡ್, ಜತೆ ಕಾರ್ಯದರ್ಶಿಗಳಾದ ಓವೈಸ್ ಸಂಪಾಜೆ...
Loading posts...

All posts loaded

No more posts

error: Content is protected !!