Ad Widget

ಸಂಪಾಜೆ : ಮುಸ್ಲಿಮ್ ಒಕ್ಕೂಟದಿಂದ “ನನ್ನ ಕನಸಿನ ಭಾರತ” ಭಾಷಣ ಸ್ಪರ್ಧೆ

75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 15 ಆಗಸ್ಟ್ 2021 ರಂದು ಮುಸ್ಲಿಮ್ ಒಕ್ಕೂಟ ಸಂಪಾಜೆ ವಾಟ್ಸಪ್ ಗ್ರೂಪ್ ನಲ್ಲಿ "ನನ್ನ ಕನಸಿನ ಭಾರತ" ವಿಷಯದಲ್ಲಿ ನಡೆದ ಕನ್ನಡ ಭಾಷಣ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸ್ವಾದಿಕ್ ಸಂಪಾಜೆ, ದ್ವಿತೀಯ ಸ್ಥಾನವನ್ನು ಮೊಹಮ್ಮದ್ ಹಾಸಿಮ್, ತೃತೀಯ ಶಮೀರ್ ಮೌಲವಿ ಪಡೆದರು.

ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ – ಎಸ್ ಡಿ ಪಿ ಐ ಸಂಘಟನೆ ನಿಷೇಧಿಸಲು ಒತ್ತಾಯ

ಲವ್ ಜಿಹಾದ್ ಮತ್ತು ಉಗ್ರಗಾಮಿ ಚಟುವಟಿಕೆಗಳನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಗಾಮಿ ಕೃತ್ಯಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು‌.ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಮತ್ತು ನಗರ...
Ad Widget

ಅಚ್ರಪ್ಪಾಡಿ : ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಅಚ್ರಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆ.11ರಂದು ರಚನೆ ಮಾಡಲಾಯಿತು. 2021-22 ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಜನಾರ್ಧನ , ಉಪಾಧ್ಯಕ್ಷೆಯಾಗಿ ಶ್ರೀಮತಿ ಕುಮುದ, ಸದಸ್ಯರುಗಳಾಗಿ ಶ್ರೀಮತಿ ಶ್ಯಾಮಲಾ, ಶ್ರೀಮತಿ ರಶ್ಮಿ , ಶ್ರೀಮತಿ ಜಯಶ್ರೀ ಪರಶುರಾಮ , ಶ್ರೀಮತಿ ಸೌಮ್ಯ ಗೋವರ್ಧನ,...

ಕೆ. ಪಿ. ಸಿ. ಸಿ ಸಂಯೋಜಕ ನಂದಕುಮಾರ್ ರಿಂದ ಆಹಾರ ಕಿಟ್ ವಿತರಣೆ

ಸುಬ್ರಮಣ್ಯ ಗ್ರಾಮ ಕಾಂಗ್ರೆಸ್ ವತಿಯಿಂದ ಸುಬ್ರಮಣ್ಯದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಇಂದು ಕುಕ್ಕೆ ಸುಬ್ರಹ್ಮಣ್ಯದ ವೆಲಂಕಣಿ ಸಭಾಭವನದಲ್ಲಿ ಇಂದು ನಡೆಯಿತು. ಕೆಪಿಸಿಸಿ ಸಂಯೋಜಕ, ಕಡಬ ಬ್ಲಾಕ್ ಉಸ್ತುವಾರಿಗಳಾದ ನಂದಕುಮಾರ್ ಮಡಿಕೇರಿ ಯವರು ಆಹಾರ ಕಿಟ್ ಪ್ರಾಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಇಂಜಾಡಿ, ಕೆಪಿಸಿಸಿ ಸದಸ್ಯರಾದ ಡಾ. ಬಿ...

ಸಾಮಾಜಿಕ ಸಾಮರಸ್ಯದ ಉದ್ದೇಶ ಲಡಾಕ್ ಗೆ ಕಾಲ್ನಡಿಗೆ – ಕಡಬದಿಂದ ನಡಿಗೆ ಆರಂಭಿಸಿದ ಮೂವರು ಯುವಕರು

ಚೀನಾ, ಟಿಬೆಟ್ ಹಾಗೂ ಪಾಕಿಸ್ತಾನಗಳಿಂದ ಸುತ್ತುವರೆದಿರುವ ಕೇಂದ್ರಾಡಳಿತ ಪ್ರದೇಶವಾದ ಲಡಾಕ್ ಗೆ ಕಾಲ್ನಡಿಗೆಯಲ್ಲಿ ತಲುಪುವ ಸಾಹಸದ ಕೆಲಸಕ್ಕೆ ಮುಂದಾಗಿರುವ ಕಡಬದ ಮೂವರು ಯುವಕರು ಸೋಮವಾರ ತಮ್ಮ ನಡಿಗೆಯನ್ನು ಕಡಬದಿಂದ ಆರಂಭಿಸಿದ್ದಾರೆ.ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿಯ ಸಂಪ್ರೀತ್, ಐತ್ತೂರು ಗ್ರಾಮದ ಬೆತ್ತೋಡಿಯ ಸೆಬಾಸ್ಟಿಯನ್, ಕೋಣಾಜೆಯ ನಿಶಾಂತ್ ಎಂಬ ಮೂವರು ಯುವಕರು ಈ ಸಾಹಸಕ್ಕೆ ಕೈ ಹಾಕಿದವರು....

ಡ್ಯಾನ್ಸ್ ರಿಯಾಲಿಟಿ ಶೋ ಗೆ ಮೋನಿಷಾ ಅಳಂಕಲ್ಯ ಆಯ್ಕೆ

ಸುವರ್ಣ ಚಾನಲ್ ನಲ್ಲಿ ಆಗಸ್ಟ್ 30 ರಿಂದ ಆರಂಭವಾಗಲಿರುವ ಡ್ಯಾನ್ಸ್ ರಿಯಾಲಿಟಿ ಶೋ ಗೆ ಮೋನಿಷಾ ಅಳಂಕಲ್ಯ ಆಯ್ಕೆಯಾಗಿದ್ದಾರೆ. ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿಯಾಗಿರುವ ಮೋನಿಷಾ ಮಂಡೆಕೋಲು ಗ್ರಾಮದ ಅಳಂಕಲ್ಯ ಕುಸುಮಾ ಚಂದ್ರಶೇಖರ್ ದಂಪತಿಗಳ ಪುತ್ರಿ.

ಬಾಬು ಪೂಜಾರಿ ಕಳಂಜ ನಿಧನ

ಕಳಂಜ ನಿವಾಸಿ ಬಾಬು ಪೂಜಾರಿ ಕಳಂಜ ಹೃದಯಾಘಾತದಿಂದ ಆ.15ರಂದು ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಭವಾನಿ, ಪುತ್ರ ಸುಧೀರ್, ಪುತ್ರಿಯರಾದ ಶ್ರೀಮತಿ ಜಯಶ್ರೀ, ಶ್ರೀಮತಿ ಸುಜಾತ ಈಶ್ವರಮಂಗಲ, ಶ್ರೀಮತಿ ವಿಜಯಶ್ರೀ ಬೆಂಗಳೂರು ಹಾಗೂ ಸಹೋದರರಾದ ಆನಂದ ಪೂಜಾರಿ ಕಳಂಜ, ಐತ್ತಪ್ಪ ಪೂಜಾರಿ ಕಳಂಜ, ಸುಂದರ ಪೂಜಾರಿ ಸಜೀಪ ಮೇಲ್ಕಾರ್, ಸಹೋದರಿಯರಾದ...

ಕಾಣಿಯೂರು: ವಿನೂತನ ಹುಟ್ಟು ಹಬ್ಬಕ್ಕೆ ಸಾಕ್ಷಿಯಾದ ಚಾರ್ವಾಕದ ಯುವಕ

ಕಡಬ ತಾಲೂಕಿನ ಕಾಣಿಯೂರಿನ ಚಾರ್ವಾಕದ ಯುವಕ ರಾಜೇಶ್ ತನ್ನ ಹುಟ್ಟು ಹಬ್ಬವನ್ನು ವಿನೂತನ ರೀತಿಯಲ್ಲಿ ಆಚರಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಪ್ರತಿಯೊಬ್ಬರೂ ಹುಟ್ಟು ಹಬ್ಬವನ್ನು ಒಂದು ರೀತಿಯಲ್ಲಿ ಮೋಜು ಮಸ್ತಿಯೊಂದಿಗೆ ಆಚರಿಸುತ್ತಾರೆ. ಆದರೆ ಅದಕ್ಕೆ ಅಪವಾದವೆಂಬಂತೆ ಚಾರ್ವಾಕದ ಯುವಕ ಶ್ರೀ ದುರ್ಗಾ ಅರ್ಥ್ ಮೂವರ್ಸ್ ಮಾಲೀಕ ರಾಜೇಶ್ ಚಾರ್ವಾಕ ತೀರ ಬಡಕುಟುಂಬದ ಶೇಖರ ಪೂಜಾರಿ ಅವರ...

ಬೆಳ್ಳಾರೆ :ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಹಿಂದೂ ಸಂಘಟನೆಯಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದ ಇಂದು ಬೆಳಿಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಬಳಿಕ...

ಸುಬ್ರಹ್ಮಣ್ಯ: ಶಾಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

ಈ ಸಲದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಅನನ್ಯ.ಎಂ.ಡಿ ಹಾಗೂ ವೆನೆಸ್ಸಾ ಶರೀನಾ ಡಿ'ಸೋಜ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಈ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ 'ಎ ಪ್ಲಸ್'...
Loading posts...

All posts loaded

No more posts

error: Content is protected !!