ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ ಸಂಸ್ಥೆಯಲ್ಲಿ “ಲಕ್ಕೀ ಡ್ರಾ” ಯೋಜನೆ ಆರಂಭ – ಮೇ.30ರಂದು ಪ್ರಥಮ ಡ್ರಾ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯು ವಿನೂತನ ಯೋಜನೆಗಳ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ ಗ್ರಾಹಕರ ಅಪೇಕ್ಷೆಯ ಮೇರೆಗೆ "ಲಕ್ಕೀ ಡ್ರಾ" ಎಂಬ ಹೊಸ ಯೋಜನೆಯನ್ನು ಆರಂಭಿಸುತ್ತಿದೆ. ಈ "ಲಕ್ಕೀ ಡ್ರಾ" ದಲ್ಲಿ 15 ದಿನಗಳಿಗೊಮ್ಮೆ ರೂ.500/- ರಂತೆ 12 ಕಂತುಗಳನ್ನು ಪಾವತಿಸಬೇಕಾಗಿದ್ದು,...

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಸತೀಶ್ ಕೊಯಿಂಗಾಜೆ

ಸುಳ್ಯದ ಕೊಡಿಯಾಲಬೈಲ್‌ನ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಸತೀಶ್ ಕುಮಾರ್ ಕೊಯಿಂಗಾಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ಅಚ್ಚುತ ಪೂಜಾರಿ ಅವರಿಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸತೀಶ್ ಕೊಯಿಂಗಾಜೆಯವರು ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 9 ವರ್ಷಗಳಿಂದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂಪಿಎಡ್ ಎಂಫಿಲ್...
Ad Widget

ಅಡಿಕೆ ಹಳದಿ ಎಲೆ ರೋಗ ಭಾದಿತ ಕೃಷಿಕರಿಗೆ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹ ಧನ ನೀಡುವ ಬಗ್ಗೆ ಮಾಹಿತಿ ಕಾರ್ಯಕ್ರಮ

2022-23 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಅಡಿಕೆ ಹಳದಿ ಎಲೆ ರೋಗದ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಮಾಹಿತಿ ಕಾರ್ಯಗಾರ ನಡೆಯಲಿದ್ದು, ಈ ಮಾಹಿತಿ ಕಾರ್ಯಾಗಾರದಲ್ಲಿ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಲಾಗುವುದು. ಅಡಿಕೆ ಬೆಳೆಗಾರರು ಇತರೆ ಬೆಳೆಗಳಾದ...

ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ರೂ.8000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಳ್ಪ ಗ್ರಾಮದ ಕುಂಜತ್ತಾಡಿ ನಿವಾಸಿಗಳಿಗೆ ರೂ 8000.00 ದಂಡ ವಿಧಿಸಿದ ಘಟನೆ ಮೇ.13 ರಂದು ನಡೆದಿದೆ. ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಮೇ.13 ರಂದು...

ಮೇ.19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ

2021-22 ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಅವರು ಇಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಗೆ 8.76 ಲಕ್ಷ ವಿದ್ಯಾರ್ಥಿಗಳು...

ಧಾರವಾಡ ಜಿಲ್ಲೆಯ ಬ್ಯಾಹಟ್ಟಿ ಗ್ರಾಮದಲ್ಲಿ ಗಮನ ಸೆಳೆದ ಕಪಿಲೇಶ್ವರ ಸಿಂಗಾರಿ ಮೇಳ ಚಾರ್ವಾಕ

ಕಡಬ ತಾಲೂಕಿನ ಚಾರ್ವಾಕ ಕಪಿಲೇಶ್ವರ ಸಿಂಗಾರಿ ಮೇಳವು ಕಳೆದ ಮೇ.7ರಿಂದ ಮೇ.10 ರವರೆಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಊರ ಜಾತ್ರೆಯಲ್ಲಿ ಭಾಗವಹಿಸಿ ಅಲ್ಲಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸುಮಾರು 1ಲಕ್ಷಕ್ಕೂ ಅಧಿಕ ಜನ ಸೇರಿದ ಜಾತ್ರೆಯಲ್ಲಿ ಊರ ಕಾಯುವ ದೇವಿಯ ಮೆರವಣಿಗೆ ಬಹಳ ವಿಜೃಂಭಣೆಯಿಂದ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ...

ಗುತ್ತಿಗಾರು :- ಅಮರ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪಿ.ಎಂ.ಎಫ್.ಎಂ.ಇ ಚೆಕ್ ವಿತರಣಾ ಕಾರ್ಯಕ್ರಮವು ಮೇ.10 ರಂದು ನಡೆಯಿತು.ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಅಧ್ಯಕ್ಷರಾಗಿ ದಿವ್ಯಾ ಸುಜನ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಸವಿತಾ ಕುಳ್ಳಂಪಾಡಿ, ಕಾರ್ಯದರ್ಶಿಯಾಗಿ ಯಮಿತಾ ಪೂರ್ಣಚಂದ್ರ, ಜೊತೆ ಕಾರ್ಯದರ್ಶಿಯಾಗಿ ಗೀತಾ,...

ಮರ್ಕಂಜ: ವಿಶೇಷ ಚೇತನ ಬಾಲಕನಿಗೆ ಸೋಲಾರ್ ಲ್ಯಾಂಪ್ ಹಸ್ತಾಂತರ

ಮರ್ಕಂಜ ಗ್ರಾಮದ ವಿಶೇಷ ಚೇತನ ಬಾಲಕನಿಗೆ ಸೆಲ್ಕೋ ಸೋಲರ್ ವತಿಯಿಂದ 10 ಸಾವಿರ ಮೌಲ್ಯದ 2 ದೀಪದ ಸೋಲರ್ ಲ್ಯಾಂಪ್ ಹಸ್ತಾಂತರಿಸಲಾಯಿತು. ಅದರಲ್ಲಿ 5 ಸಾವಿರ ಸೆಲ್ಕೋ ಸೋಲರ್ ಸಂಸ್ಥೆಯ ವತಿಯಿಂದ ಉಚಿತವಾಗಿದ್ದು ಉಳಿದ 5 ಸಾವಿರ ಊರಿನ ಸಹೃದಯಿ ಬಂದುಗಳು ನೀಡಿ ಸಹಕರಿಸುವಂತೆ ಮಿತ್ತಡ್ಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಸಂದ್ಯಾದೋಳ ಇವರಲ್ಲಿ ತಿಳಿಸಿದಾಗ ಇವರು...

ಕೊಲ್ಲಮೊಗ್ರು :- ಬೃಹತ್ ನದಿ ಸ್ವಚ್ಛತಾ ಅಭಿಯಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮೇ.08 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ನದಿ ಸ್ವಚ್ಚತಾ ಅಭಿಯಾನ ನಡೆಯಿತು.ಬೆಳಿಗ್ಗೆ 9:00 ಗಂಟೆಗೆ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ...

ಶ್ರೀ ಕೇಶವಕೃಪಾದಲ್ಲಿ ಸಂಸ್ಕಾರ ವಾಹಿನಿ ಶಿಬಿರ ಸಮಾರೋಪ

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಸಂಸ್ಕಾರ ವಾಹಿನಿ ಶಿಬಿರದಸಮಾಪನಾ ಸಮಾರಂಭವು ದಿನಾಂಕ ೦೯-೦೫-೨೦೨೨ ರಂದು ಸುಳ್ಯದ ಹಳೆಗೇಟಿನ ವಿದ್ಯಾನಗರದ ಶ್ರೀ ಕೇಶವಕೃಪಾ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ಭಟ್ಶಿವನಿವಾಸ ವಹಿಸಿದ್ದರು. ಸಪಾಮನಾ ಮುಖ್ಯ ಭಾಷಣವನ್ನು ವೇ| ಮೂ| ಅಭಿರಾಮ ಭಟ್ ಸರಳಿಕುಂಜ ಮಾತನಾಡುತ್ತಾ ಹಣ ಸಂಪಾದನೆಯೊಂದೇ ಜೀವನದ...
Loading posts...

All posts loaded

No more posts

error: Content is protected !!