- Saturday
- August 15th, 2026
ಬಳ್ಪ ಗ್ರಾಮದ ಕೊರಪ್ಪಣೆ ಸತೀಶ್ ಪೂಜಾರಿಯವರ ಮದುವೆಯ ಪ್ರಯುಕ್ತ ನಡೆದ ಮದರಂಗಿ ಶಾಸ್ತ್ರ ಕಾರ್ಯಕ್ರಮದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮದರಂಗಿ ಶಾಸ್ತ್ರ ಮುಗಿದ ನಂತರ ಸಂಜೆ ಸ್ಥಳೀಯ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನೆರವೇರಿತು.
ಮರಕತ ಶ್ರೀ ದುರ್ಗಾಪರಮೇಶ್ವರಿ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ ಪ್ರತಿಯೊಬ್ಬರ ಹೃದಯದಲ್ಲಿ ಧರ್ಮದ ಪ್ರತಿಷ್ಠಾಪನೆ ಆಗಬೇಕಾಗಿದೆ. ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಧಾರ್ಮಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಸುಳ್ಯದ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಕಿ ನಳಿನಾಕ್ಷಿ ಆಚಾರ್ಯ ಅವರು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಏ. 23 ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ...
ಕಳಂಜ ಗ್ರಾಮದ ತಂಟೆಪ್ಪಾಡಿಯಲ್ಲಿರುವ "ನಿನಾದ" ಸಾಂಸ್ಕೃತಿಕ ಕೇಂದ್ರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿರಚಿತ "ಕೋವಿಡ್ ಕಥೆಗಳು" ಎಂಬ ಪುಸ್ತಕ ಬಿಡುಗಡೆಗೊಳಿಸಲಾಯಿತು. ಮಾಜಿ ವಿಧಾನಪರಿಷತ್ ಸದಸ್ಯರಾದ ಅಣ್ಣಾ ವಿನಯಚಂದ್ರರವರು ಸಾಂಕೇತಿಕವಾಗಿ ಪುಸ್ತಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಇಂದಾಜೆ, ಸಂಘದ ಪ್ರಧಾನಕಾರ್ಯದರ್ಶಿ...
ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿರುವ ಕೋಲ್ಚಾರ್ ದಿ. ಚಿನ್ನಪ್ಪ ಗೌಡರ ಪುತ್ರ ಮಹೇಶ್ ರವರ ವಿವಾಹವು ಕಾಸರಗೋಡು ತಾ. ದೇಲಂಪಾಡಿ ಗ್ರಾಮದ ವಾಲ್ತಾಜೆ ಮನೆ ಪದ್ಮಯ್ಯ ಗೌಡರ ಪುತ್ರಿ ಶ್ರುತಿಯವರೊಂದಿಗೆ ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಸಭಾಭವನದಲ್ಲಿ ಎ.24ರಂದು ನಡೆಯಿತು.
ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ "ಸಾಧನೆಯ ಸಂಭ್ರಮ", ಸಾಧಕರೊಂದಿಗೆ ಸಂವಾದ, ಸಾಧಕರಿಗೆ ಸನ್ಮಾನ ಹಾಗೂ "ಮುಖ್ಯಮಂತ್ರಿ" ನಾಟಕ ಪ್ರದರ್ಶನ ಏ.24 ಆದಿತ್ಯವಾರದಂದು ಜರುಗಿತು. ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಜನಪ್ರಿಯ ಚಲನಚಿತ್ರ, ಧಾರಾವಾಹಿ ಮತ್ತು ರಂಗಭೂಮಿ ನಟರಾದ ಶ್ರೀ ಮುಖ್ಯಮಂತ್ರಿ ಚಂದ್ರು ಹಾಗೂ ಡಾ.ಬಿ.ವಿ.ರಾಜಾರಾಂ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಾಧಕರ ಸನ್ಮಾನದ ಅಂಗವಾಗಿ ಏಕಲವ್ಯ ಪ್ರಶಸ್ತಿ ಪುರಸ್ಕೃತ...
ಕುಕ್ಕುಜಡ್ಕ: ಎಲ್ಲರೂ ಒಟ್ಟಾಗಿ ಸೇರಿ ಮಾಡುವ ದೈವಾರಾಧನೆಯಲ್ಲಿ ‘ವಸುದೈವ ಕುಟುಂಬಕಂ’ ಎಂಬ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ. ಇದರಿಂದ ಹಿಂದೂ ಧರ್ಮದ ಉನ್ನತಿ ಸಾಧ್ಯ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದ್ದಾರ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ವಿಷ್ಣುನಗರ ಶ್ರೀವಿಷ್ಣುಮೂರ್ತಿ, ಶ್ರೀ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮದ ಅಂಗವಾಗಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ವರ್ಗಾವಣೆಗೆ ಆದೇಶವಾಗಿದೆ. ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.
ವಯೋಸಹಜ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ಟಿ ಜಿ ಮೂಡೂರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ನಂತೂರಿನ ಭಾರತಿ ಕಾಲೇಜಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಶ್ರೀ ವಸಂತ ಕುಮಾರ್ ಪೆರ್ಲರವರು ಮಾತನಾಡಿ ಟಿ...
ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಎ.20 ರಂದು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಅವರ ನೇತೃತ್ವದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯಿತು.ಪೂರ್ವಾಹ್ನ ಗಣಪತಿ ಹವನ, ಶತರುದ್ರಾಭಿಷೇಕ, ಕಲಶಾಭೀಷೇಕ ನಡೆಯಿತು. ನಂತರ ಅಪರಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ದೀಪಾರಾಧನೆ, ತಾಯಂಬಿಕ, ರಂಗಪೂಜೆ, ಶ್ರೀ ಭೂತ ಬಲಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ...
ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ನಿಂದನೆ ಮಾಡಿದ ಪ್ರಕರಣದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರಿಗೆ ಸುಳ್ಯ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆ ತೀರ್ಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಸರಕಾರಿ ಅಧಿಕಾರಿಗಳು, ಸಾರ್ವಜನಿಕ ಸೇವೆಯಲ್ಲಿರುವವರನ್ನು ಪ್ರಶ್ನೆ ಮಾಡುವುದು ಅಪರಾಧವಲ್ಲ ಎಂಬ ಕಕ್ಷಿದಾರರ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ...
Loading posts...
All posts loaded
No more posts
