ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ

ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಿ.ಜಿ ಮುಡೂರು(95) ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಡಿನ ಅಗ್ರಮಾನ್ಯ ಸಾಹಿತಿಯಾಗಿದ್ದ ಮುಡೂರುರವರು ತಮ್ಮ ಇಳಿವಯಸ್ಸಿನಲ್ಲೂ ಅತ್ಯಂತ ಲವಲವಿಕೆಯಿಂದ ಇದ್ದರು. ಅಧ್ಯಾಪಕರಾಗಿ, ಸಾಹಿತಿಯಾಗಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಮುಡೂರುರವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅರೆಭಾಷೆ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಕಾಡಮಲ್ಲಿಗೆ, ಹೊಸತು ಕಟ್ಟು, ಅಬ್ಬಿಯ ಮಡಿಲು ಸೇರಿದಂತೆ...

ಸಾಹಿತಿ ಭೀಮರಾವ್ ವಾಷ್ಠರ್ ಸಾಹಿತ್ಯದಲ್ಲಿ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ವಿಹಾರ ನೌಕೆಯಲ್ಲಿ ನಡೆದ ರಾಷ್ಟ್ರೀಯ ಸಾಹಿತ್ಯ ಸಮಾರಂಭದಲ್ಲಿ ಜ್ಯೋತಿಷಿ ಮತ್ತು ಸಾಹಿತಿ ಎಚ್ . ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಸಜ್ಜಲಾಂಬೆ ಶ್ರೀ ಶರಣಮ್ಮ ತಾಯಿ ವಿಡಿಯೋ ಭಕ್ತಿಗೀತೆಯನ್ನು ಕರ್ನಾಟಕ ಸರಕಾರದ ಅನಿವಾಸಿ ಕನ್ನಡಿಗರ ಕೋಶ ಇದರ ಮಾಜಿ ಉಪಾಧ್ಯಕ್ಷರಾದ ಕ್ಯಾ...
Ad Widget

ದಸರಾ ಕಾವ್ಯ ಪ್ರಶಸ್ತಿಗೆ ಭಾಜನರಾದ ಲೀಲಾಕುಮಾರಿ ತೊಡಿಕಾನ

ಅಖಿಲ ಭಾರತೀಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಿಷತ್ ಮತ್ತು ಪ್ರಗತಿಶೀಲ ಪ್ರಕಾಶನವು ಮೈಸೂರು ದಸರಾದ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಲೀಲಾಕುಮಾರಿ ತೊಡಿಕಾನರ ಕವನವು ಅತ್ಯುತ್ತಮ ಕವನವೆಂದು ಆಯ್ಕೆಯಾಗಿದ್ದು, ದಸರಾ ಕಾವ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಎ. ೧೭ರಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 'ದಸರ ಕಾವ್ಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.ನಂತರ ನಡೆದ ಕವಿಗೋಷ್ಟಿಯಲ್ಲಿ ವಿಜೇತ...

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ

ಸುಳ್ಯದ ಗಾಂಧಿನಗರದ ಮುಖ್ಯರಸ್ತೆಯಲ್ಲಿ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯುವಕನೋರ್ವ ಯತ್ನಿಸಿದ ಘಟನೆ ಇಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಆತನನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ. ಆತನನ್ನು ಉತ್ತರ ಕರ್ನಾಟಕ ಕೂಲಿ ಕಾರ್ಮಿಕ ಮಂಜುನಾಥ್ ಎಂದು ಗುರುತಿಸಲಾಗಿದೆ.

ಅರಂತೋಡು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಲಂಚಮುಕ್ತ ಅಭಿಯಾನ

ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ "ಶೀಲ ಮತ್ತು ಶಿಸ್ತಿ"ನ ತಳಹದಿಯಲ್ಲಿ ಹುಟ್ಟಿಕೊಂಡ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸುಳ್ಯ ತಾಲೂಕಿನ ಅರಂತೋಡು ಹಾಗೂ ತೊಡಿಕಾನ ಗ್ರಾಮಗಳಲ್ಲಿ "ಲಂಚಮುಕ್ತ ಅಭಿಯಾನ" ಕಾರ್ಯಕ್ರಮವನ್ನು ಏ.19ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 6.00 ಗಂಟೆಯ ತನಕ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ದಕ್ಷಿಣ ಕನ್ನಡ...

ನಡುಗಲ್ಲು : ವಲಯ ಮೇಲ್ವಿಚಾರಕರಿಗೆ ಬೀಳ್ಕೊಡುಗೆ

ನಾಲ್ಕೂರು ಒಕ್ಕೂಟದ ವತಿಯಿಂದ ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿ ಗುಂಡ್ಲುಪೇಟೆ ಗೆ ವರ್ಗಾವಣೆ ಗೊಂಡಿರುವ ಮುರಳೀಧರ ರವರ ಬೀಳ್ಕೊಡುಗೆ ಸಮಾರಂಭ ನಡುಗಲ್ಲು ಶಾಲೆಯಲ್ಲಿ ಏ.18 ರಂದು ನಡೆಯಿತು. ತಾಲೂಕು ಜನಜಾಗೃತಿ ಸದಸ್ಯ ವಿಜಯಕುಮಾರ್ ಚಾರ್ಮಾತ ಮುಖ್ಯ ಅತಿಥಿಗಳಾಗಿ ಶುಭಹಾರೈಸಿದರು. ಒಕ್ಕೂಟದ ಅಧ್ಯಕ್ಷರಾದ ಶಾಂತಪ್ಪ ಉತ್ರಂಬೆ, ಸತೀಶ್ ಬೊಂಬುಳಿ, ಗ್ರಾ.ಪ. ಸದಸ್ಯ ಹರೀಶ್ ಕೊಯಿಲ, ಶಾಲಾ...

ಅರಂತೋಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಅರಂತೋಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜನ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ತೆಕ್ಕಿಲ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ತೆಕ್ಕಿಲ್ ಸಮುದಾಯ ಭವನ ಆರಂತೋಡು ನಲ್ಲಿ ನಡೆಯಿತು. ನೂತನ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಂಚಾಯತ್ ಸದಸ್ಯರು ಎದುರಿಸುತ್ತಿರುವ ಸಮಸ್ಯೆ,...

ಏ.22: ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರವಣದೋಷ ತಪಾಸಣಾ ಶಿಬಿರ

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರವಣದೋಷ ತಪಾಸಣಾ ಶಿಬಿರವು ಏ.22ರಂದು ನಡೆಯಲಿದೆ. ಶಿಬಿರವು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರ ತನಕ ಜರುಗಲಿದ್ದು, 5 ವರ್ಷ ಮೇಲ್ಪಟ್ಟ ಶ್ರವಣದೋಷ ಇರುವವರು ಈ ಶಿಬಿರಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಂಗಮನೆ ಚಿಣ್ಣರಮೇಳಕ್ಕೆ ಸಂಭ್ರಮದ ತೆರೆ -ವೇದಿಕೆಯೇರಿದ 300 ಮಕ್ಕಳಿಂದ ಸಾಂಸ್ಕೃತಿಕ ವೈಭವ

    ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ನಡೆದ ಚಿಣ್ಣರಮೇಳ 2022  ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರವು ಮಕ್ಕಳ ಸಾಂಸ್ಕೃತಿಕ ಸಂಭ್ರಮದೊಂದಿಗೆ ತೆರೆ ಕಂಡಿತು.   ಸಮಾರೋಪ ಭಾಷಣ ಮಾಡಿದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ವಿ.ಸೂರ್ಯನಾರಾಯಣ ಇವರು ಮಾತಾನಾಡಿ" ಮಕ್ಕಳ ಶೈಕ್ಷಣಿಕ, ಮಾನಸಿಕ ಮತ್ತು ಬೌದ್ಧಿಕ  ಬೆಳವಣಿಗೆಯಲ್ಲಿ ಇಂತಹ ಬೇಸಿಗೆ ಶಿಬಿರಗಳು ಬಹುಮುಖ್ಯ...

ಕರೆಂಟ್ ಇಲ್ಲ ಎಂದು ಇಂಧನ ಸಚಿವರಿಗೆ ಬೈದ ಪ್ರಕರಣದ ತೀರ್ಪು ಪ್ರಕಟ : ಡಿಕೆಶಿ ಗೆ ಫೋನ್ ಮಾಡಿದ್ದ ಬೆಳ್ಳಾರೆಯ ಗಿರಿಧರ ರೈಗೆ ಜೈಲು ಶಿಕ್ಷೆ

ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್...
Loading posts...

All posts loaded

No more posts

error: Content is protected !!