Ad Widget

ಭಾರಿ ಮಳೆ – ಸುಬ್ರಹ್ಮಣ್ಯ ಪಂಜ ರಸ್ತೆ ಬಂದ್

ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರ ಬಳಿ ಸುಬ್ರಹ್ಮಣ್ಯ- ಏನೆಕಲ್ಲು - ಪಂಜ ರಸ್ತೆಯ ಮೇಲೆ ನೀರು ನಿಂತಿದ್ದು ಸಂಪರ್ಕ ಕಡಿತವಾಗಿದೆ.

ಶ್ರೀಧರ ಮೋಟುಕಾನ ನಿಧನ

ಅಮರಪಡ್ನೂರು ಗ್ರಾಮದ ಮೋಟುಕಾನ ಮಲ್ಲಣ್ಣ ನಾಯ್ಕರ ಪುತ್ರ ಶ್ರೀಧರ ಅಲ್ಪ ಕಾಲದ ಅನಾರೋಗ್ಯದಿಂದ ಅ. 5 ರಂದು ನಿಧನರಾದರು. ಇವರಿಗೆ 44ವರ್ಷ ವಯಸ್ಸಾಗಿತ್ತು.ಮೃತರು ತಂದೆ ಮಲ್ಲಣ್ಣ ನಾಯ್ಕ, ತಾಯಿ ದೇವಕಿ, ಸಹೋದರ ರಾಮಚಂದ್ರ, ಸಹೋದರಿ ಚಂದ್ರಾವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
Ad Widget

ಸುಳ್ಯ : ಏರಿಕೆಯಾಗುತ್ತಿರುವ ಸೋಂಕಿನ ಪ್ರಮಾಣ- ಸುಳ್ಯದಲ್ಲಿಂದು 57 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು ಇಂದು 57 ಕ್ಕೆ ಏರಿಕೆಯಾಗಿದೆ.‌

ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವೆ – ಕುಕ್ಕೆ ಕ್ಷೇತ್ರದಲ್ಲಿ ಸ್ವಾಗತ ಸ್ವೀಕರಿಸಿದ ಬಳಿಕ ನೂತನ ಸಚಿವ ಎಸ್.ಅಂಗಾರ ಅಭಿಮತ

ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ಸುಳ್ಯ ಸಿಎ ಬ್ಯಾಂಕ್ ನ ಸಿಬ್ಬಂದಿ ದಾಮೋದರ ರವರಿಗೆ ಬೀಳ್ಕೊಡುವ ಕಾರ್ಯಕ್ರಮ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 19 ವರ್ಷ ಸಿಬ್ಬಂದಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ದಾಮೋದರ ಇವರ ಬೀಳ್ಕೊಡುವ ಕಾರ್ಯಕ್ರಮ ಜುಲೈ 31 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ...

ಸುಳ್ಯದಲ್ಲಿಂದು 55 ಕೊರೊನ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 55 ಕೊರೊನಾ ಪಾಸಿಟಿವ್ ಬಂದಿದೆ. ತಾಲೂಕಿನಲ್ಲಿ ಒಟ್ಟು 417 ಸಕ್ರೀಯ ಪ್ರಕರಣಗಳಿವೆ.

ಸುಳ್ಯ : ನಗರದ ಸ್ವಚ್ಚತೆಗೆ ಹೊಸ ವಾಹನಗಳ ಹಸ್ತಾಂತರ

ಸುಳ್ಯ ನಗರ ಪಂಚಾಯತಿಗೆ ಸ್ವಚ್ಛತೆಯ ನಿರ್ವಹಣೆಗಾಗಿ ಇನ್ನೆರಡು ವಾಹನಗಳು ಆಗಮಿಸಿದ್ದು ಟಾಟಾ ಕಂಪೆನಿಯ ಪಿಕಪ್ ಮತ್ತು ಟಾಟಾ 407 ವಾಹನ ಇಂದು ಸುಳ್ಯ ನಗರ ಪಂಚಾಯಿತಿಗೆ ಹಸ್ತಾಂತರಗೊಂಡವು. ಟಾಟಾ ವಾಹನಗಳ ಅಧಿಕೃತ ಮಾರಾಟಗಾರರು ಆದ ಅರವಿಂದ್ ಮೋಟಾರ್ಸ್ ಸಂಸ್ಥೆಯ ಪ್ರತಿನಿಧಿಗಳು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹಾಗೂ ಮುಖ್ಯಾಧಿಕಾರಿ ಕುಮಾರಸ್ವಾಮಿ ಅವರಿಗೆ ವಾಹನದ...

ಹಗರಣದ ರೂವಾರಿಗೆ ಜೀರೋ ಟ್ರಾಫಿಕ್ ಸ್ವಾಗತ, ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ- ವೆಂಕಪ್ಪ ಗೌಡ ಟೀಕೆ

ಭಾರತೀಯ ಜನತಾಪಾರ್ಟಿ ಸರಕಾರದ ಪ್ರಮಾಣವಚನ ಸ್ವೀಕಾರ ಸಭೆಗೆ ಈ ಹಿಂದೆ ಗರ್ಭಿಣಿಯರಿಗೆ, ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ಹಗರಣ ಮಾಡಿದ ಆರೋಪ ಹೊತ್ತ ಶಶಿಕಲಾ ಜೊಲ್ಲೆಯವರು ಜೀರೋ ಟ್ರಾಫಿಕ್ ಮೂಲಕ ಆಗಮಿಸಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಈ ವಿಚಾರವಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಕಟುವಾಗಿ ಟೀಕಿಸಿದ್ದಾರೆ.ಭಾರತೀಯ ಜನತಾ ಪಾರ್ಟಿಯ ಅಂಧ ದರ್ಬಾರ್...

ಸಚಿವ ಅಂಗಾರರಿಗೆ ದ.ಕ.ಜಿಲ್ಲಾ ಉಸ್ತುವಾರಿ – ಕೊಡಗಿಗೆ ಕೋಟ, ಉಡುಪಿಗೆ ಸುನಿಲ್

ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ...

ಸುಳ್ಯ : ಹಿಂದು ಜಾಗರಣ ವೇದಿಕೆ ನೂತನ ಪದಾಧಿಕಾರಿಗಳ ಆಯ್ಕೆ

ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ಪದಾಧಿಕಾರಿಗಳ ಆಯ್ಕೆ ಪುತ್ತೂರಿನ 'ಪಂಚವಟಿ' ಕಾರ್ಯಾಲಯದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಿಕೇಶ್ ಉಬರಡ್ಕ, ಕಾರ್ಯದರ್ಶಿಗಳಾಗಿ ಹೇಮಂತ್ ಮಂಡೆಕೋಲು, ವಾಸುದೇವ ಕೆರೆಕ್ಕೋಡಿ, ಹಾಗೂ ಹಿಂದೂ ಯುವವಾಹಿನಿ ತಾಲೂಕು ಸಂಯೋಜಕರಾಗಿ ಅಭಿಷೇಕ್ ತೊಡಿಕಾನ ಆಯ್ಕೆಯಾದರು. ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಜಿಲ್ಲಾ ಬೈಠಕ್ ನಲ್ಲಿ, ಪ್ರಾಂತ ಸಂಘಟನಾ ಕಾರ್ಯದರ್ಶಿ...
Loading posts...

All posts loaded

No more posts

error: Content is protected !!