ಹಾಲೆಮಜಲು ಅಂಗಡಿಯಲ್ಲಿ ಕಳ್ಳತನ

ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆ ಅವರ ಚಿಕನ್ ಸೆಂಟರ್ ಕಳೆದ ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿ ನಗದು ಹಾಗೂ ಸಿಸಿ ಕ್ಯಾಮರ ಕೊಂಡೊಯ್ದಿದ್ದಾರೆ.‌ ಈ ಬಗ್ಗೆ ಅಂಗಡಿ ಮಾಲಕ ಸುಪ್ರೀತ್ ರವರು ಸುಬ್ರಹ್ಮಣ್ಯ ಪೋಲೀಸರಿಗೆ ದೂರು ನೀಡಿದ್ದಾರೆ.

ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಿತ್ರದೇವ ಮಡಪ್ಪಾಡಿ ಆಯ್ಕೆ

ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಐ) ಇಂಡಿಯಾ ಸಂಘಟನೆಯವರು ನೀಡುವ 2022 ನೇ ಸಾಲಿನ ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಡಪ್ಪಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಅವರು ಆಯ್ಕೆ ಆಗಿದ್ದಾರೆ . ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ನೌಕೆಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಸಮಾರಂಭದಲ್ಲಿ ವಿಶೇಷ ಗಣ್ಯರ...
Ad Widget

ದೇವರಗುಂಡ : ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ

ಮಂಡೆಕೋಲು ಗ್ರಾಮದ ದೇವರಗುಂಡ ಡಿ.ವಿ. ಸದಾನಂದ ಗೌಡರ ಸಹೋದರ ದಿ. ಬಾಸ್ಕರ ಗೌಡರ ಮನೆ ಮೇಲೆ ಕಳೆದ ರಾತ್ರಿ ತೆಂಗಿನ ಮರ ಬಿದ್ದು ಮನೆಯ ಮಾಡು ಕುಸಿದಿದೆ. ಮನೆಯವರಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಂಬಳಚೇರಿಯಲ್ಲಿ ಬೈಕ್ ಜೀಪು ಅಪಘಾತ : ಓರ್ವ ಸಾವು – ಇನ್ನೋರ್ವ ಗಂಭೀರ

ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು...

ಬಾಳಿಲ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿದಾಯ ಸಮಾರಂಭ

ವಿದ್ಯಾಬೋಧಿನೀ ಪ್ರೌಢ ಶಾಲೆಯಲ್ಲಿ 2021-22ನೆಯ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಸಮಾರಂಭವು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವೆಂಕಟ್ರಮಣ ಭಟ್ ನೆಟ್ಟಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಬಾಳಿಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕೆ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ, ಬಾಳಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹೂವಪ್ಪ ಗೌಡ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...

ಮಹಶೀರ್ ಮತ್ಸ್ಯ ರೈತ ಉತ್ಪಾದಕ ಸಂಸ್ಥೆಯ ಸಭೆ

ರಾಜ್ಯ ಸರ್ಕಾರದ ಮಹಶೀರ್ ಮತ್ಸ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕರುಗಳ ಸಭೆಯು ಸುಳ್ಯದ ತಾಲೂಕು ಪಂಚಾಯತ್ ನ ಸಚಿವ ಎಸ್. ಅಂಗಾರರವರ ಕಚೇರಿಯಲ್ಲಿ ಮಾ.21ರಂದು ನಡೆಯಿತು.ಮಹಶೀರ್ ಮತ್ಯ ರೈತ ಉತ್ಪದಕರ ಸಂಸ್ಥೆಯ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸುರೇಶ್ ಕಣೆಮರಡ್ಕ ನಿರ್ದೇಶಕರುಗಳಾದ ಸುಪ್ರೀತ್ ಮೋಂಟಡ್ಕ, ಚನಿಯ ಕಲ್ತಡ್ಕ, ಅಶೋಕ ಅಡ್ಕಾರು, ಚಂದ್ರಶೇಖರ ನೆಡಿಲು,...

ಬಾಕಿಲ : ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ

ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾ. 21ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ, ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ, ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ...

ಸುಬ್ರಹ್ಮಣ್ಯ :- ದಿ.ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಸುಮಾರು 40 ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥವಾಗಿ ಮಾ.19 ಮತ್ತು ಮಾ.20 ರಂದು 2 ದಿನಗಳ ಕಾಲ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಪ್ರತಿಷ್ಠಿತ ಆಯ್ದ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಿತು.ಗಾಂಗೇಯ ತಂಡದ...

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಮಾ.19 ರಂದು 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ನಾಮಫಲಕ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಾವಿತ್ರಿ ಕಜ್ಜೋಡಿ ಹಾಗೂ ಸಹ ಶಿಕ್ಷಕರಾದ ದೇವಕಿ.ಸಿ, ಶರಣಪ್ಪ ಡೋಣಿ, ಸುವರ್ಣ, ಹರ್ಷಿತಾ.ಪಿ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ...

ರಾಜ್ಯದ 224 ಕ್ಷೇತ್ರಗಳಿಗೆ ಆಪ್ ಸ್ಪರ್ಧೆ- ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ- ಹಲವಾರು ಮಂದಿ ಪಕ್ಷ ಸೇರ್ಪಡೆ

ಮುಂದಿನ ರಾಜ್ಯ ವಿಧಾನ ಸಭೆ‌ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ನಡೆಸಲಿದ್ದು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ‌ ಮಾತನಾಡಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಆಯ್ಕೆ...
Loading posts...

All posts loaded

No more posts

error: Content is protected !!