Ad Widget

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆಯು ಜು.28 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಕೃಷಿ-ಬೆಳೆಗಳ ಸಮಸ್ಯೆ(ಹಳದಿರೋಗ) ಪರಿಹಾರದ ಚರ್ಚೆ, ಅರಣ್ಯ ಕಾನೂನು-ರೈತರ ಸಮಸ್ಯೆಗಳ ಪರಿಹಾರ ಮತ್ತು ಪ್ರತೀ ಗ್ರಾಮ ಬೇಟಿ ಮಾಡಿ ಜನಜಾಗೃತಿ ಮೂಡಿಸುವುದು ಹಾಗೂ ಇತರ...

ವಿದ್ವತ್ ಹೊಸೋಳಿಕೆ ಪ್ರಥಮ ಹುಟ್ಟುಹಬ್ಬ ಆಚರಣೆ

ಸಾಹಿತಿ, ಕಿರಣ ಸಂಸ್ಥೆಯ ಅಧ್ಯಕ್ಷ ಯೋಗೀಶ್ ಹೊಸೋಳಿಕೆ ಮತ್ತು ಸರ್ವೇಯರ್ ಜಯಶ್ರೀ ವೈ. ಹೊಸೋಳಿಕೆ ಯವರ ಪುತ್ರ ವಿದ್ವತ್.ವೈ. ಹೊಸೋಳಿಕೆ ಯವರ ಪ್ರಥಮ ವರ್ಷದ ಹುಟ್ಟುಹಬ್ಬದ ಸಂಭ್ರಮವನ್ನು ಸಂಪ್ರದಾಯದಂತೆ ದೀಪ ಉರಿಸಿ, ಮಗುವಿಗೆ ಆರತಿ ಎತ್ತಿ, ಸೋಬಾನೆ ಹಾಡಿನೊಂದಿಗೆ ಆಚರಿಸಲಾಯಿತು. ಪ್ರಥಮ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಕುಟುಂಬಸ್ಥರು, ಊರಿನವರು ಭಾಗವಹಿಸಿದ್ದರು. ಯೋಗೀಶ್ ಹೊಸೋಳಿಕೆ ಸ್ವಾಗತಿಸಿ,...
Ad Widget

ತೊಡಿಕಾನ : ದುಬಾರಿ ಬೆಲೆಯ ಬೈಕ್ ಹಾಗೂ ಕಾರು ಅಪಘಾತ – ಸವಾರನಿಗೆ ಗಂಭೀರ ಗಾಯ

ತೊಡಿಕಾನದಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ ಬೈಕ್ ಸವಾರ ಜಖಂಗೊಂಡ ಘಟನೆ ಇಂದು ನಡೆದಿದೆ.ತೊಡಿಕಾನ ದೇವಸ್ತಾನದ ಮ್ಯಾನೇಜರ್ ಆನಂದ ರವರ ಕಾರು ಹಾಗೂ ಕರುಣಾಕರ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಸವಾರ ಜಖಂಗೊಂಡ ಘಟನೆ ನಡೆದಿದೆ. ಗೆಳೆಯನ ದುಬಾರಿ ಬೆಲೆಯ ಬೈಕ್ (Benelli bike)ಅನ್ನು ಟ್ರಯಲ್ ನೋಡಲು ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುವಿಗೆ ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ...

ನೆಲ್ಲೂರು ಕೆಮ್ರಾಜೆ : ಕಂಬಳ ಗದ್ದೆಯಾದ ಜೀರ್ಮುಖಿ – ಮಂದ್ರಪ್ಪಾಡಿ ರಸ್ತೆ- ಪಂಚಾಯತ್ ನ ನಿರ್ಲಕ್ಷ್ಯಕ್ಕೆ ಜನರ ಶಾಪ

ಜೀರ್ಮುಖಿ- ಬೊಮ್ಮಾರು ಸಂಪರ್ಕಿಸುವ ರಸ್ತೆಯು ಮಂದ್ರಪ್ಪಾಡಿ ಬಳಿ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಗಟ್ಟಿಗಾರು ಶಾಲೆ ಸೇರಿದಂತೆ ಈ ರಸ್ತೆ ಸುಮಾರು ೫೦ ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು ಪ್ರತೀ ವರ್ಷ ರಸ್ತೆ ಕೆಸರುಮಯವಾಗಿರುವುದರಿಂದ ಇಲ್ಲಿನ ನಿವಾಸಿಗಳು ಸಂಕಷ್ಟ ಪಡುತ್ತಿದ್ದಾರೆ. ಸೇವಾಜೆ ರಸ್ತೆಗೆ ಪರ್ಯಾಯ ಮಾರ್ಗ: ಸದ್ಯ ಸೇವಾಜೆಯಲ್ಲಿ ಸೇತುವೆಯಾಗುತ್ತಿದ್ದು ಮರ್ಕಂಜ- ಅರಂತೋಡು ರಸ್ತೆ...

ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ಹಾಕಲಾದ ಬೀಗ ತೆರವುಗೊಳಿಸಲು ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ತಹಶೀಲ್ದಾರ್ ಗೆ ಮನವಿ

ಸುಳ್ಯ ತಾಲೂಕಿನ ಉಬರಡ್ಕ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲು ಹಿಂದು ರುದ್ರ ಭೂಮಿ ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿ ಸರಕಾರವು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿತ್ತು.. ನೂರಾರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದಿದ್ದರು.ಆದರೆ ಕೆಲವು ರಾಜಕೀಯ ಮುಖಂಡರು ರಾಜಕೀಯ ದುರುದ್ದೇಶದಿಂದ ಕಳೆದ ರಾತ್ರಿ ಅಪಘಾತದಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ತಂದು ಶವಸಂಸ್ಕಾರ ಮಾಡಲು ಮುಂದಾದಾಗ ಅದನ್ನು ವಿರೋಧಿಸಿ ಹಿಂದೂ...

ಮರ್ಕಂಜ : ಮುಖ್ಯ ಶಿಕ್ಷಕ ರಾಜೀವ್ ವರ್ಗಾವಣೆ

ರಾಜೀವ್ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಪಿ.ರಾಜೀವ್ ರವರಿಗೆ ಚಾಮರಾಜನಗರ ತಾಲೂಕಿಗೆ ಕ್ಷೇತ್ರಸಂಪನ್ಮೂಲ ಅಧಿಕಾರಿಯಾಗಿ ಭಡ್ತಿಗೊಂಡು ಜೂ.27ರಂದುವರ್ಗಾವಣೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರಾಜೀವ್ ರವರು ಮೂಲತಃಚಾಮರಾಜನಗರದವರಾಗಿದ್ದು, ಮುಖ್ಯೋಪಾಧ್ಯಾಯರಾಗಿಮರ್ಕಂಜ ಪ್ರೌಢಶಾಲೆಗೆ ನೇಮಕಗೊಂಡಿದ್ದರು.ಮರ್ಕಂಜ ಪ್ರೌಢಶಾಲೆಗೆಅಚ್ಚುತ ತೇರ್ಥಮಜಲು ರವರನ್ನು ಪ್ರಭಾರಮುಖ್ಯೋಪಾಧ್ಯಾಯರಾಗಿ ನೇಮಿಸಲಾಗಿದೆ.

ಸಂಪಾಜೆ : ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಮನೆ ದುರಸ್ತಿಗೆ ಸಹಾಯಧನ ವಿತರಣೆ

ಗೂನಡ್ಕ ಬೀಜದಕಟ್ಟೆ ನಿವಾಸಿ ರಾದಮ್ಮ ಪೂಜಾರಿಯವರಿಗೆ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿಯಲ್ಲಿ ಮನೆ ದುರಸ್ತಿಗೆ ರೂ 12500 ಸಹಾಯಧನ ಚೆಕ್ಕನ್ನು ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೊಯಿಂಗಾಜೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್, ಸದಸ್ಯರುಗಳಾದ ಜಗದೀಶ್ ರೈ, ಸುಮತಿ ಶಕ್ತಿವೇಲು, ಎಸ್ ಕೆ. ಹನೀಫ್, ಗ್ರಾಮ ಕರಣಿಕರಾದ ಮಿಯಾ ಶಾಬ್...

ನೂತನ ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಅಭಿನಂದಿಸಿದ ಸಚಿವ ಎಸ್. ಅಂಗಾರ

ಇಂದು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿಯವರನ್ನು ಸಚಿವ ಎಸ್. ಅಂಗಾರ ಅಭಿನಂದಿಸಿದರು‌.

ಕೊಡಿಯಾಲಬೈಲು ಸ್ಮಶಾನಕ್ಕೆ ಬೀಗ ಹಾಕಿದ್ದನ್ನು ಖಂಡಿಸಿ ವಿ ಹೆಚ್ ಪಿ, ಭಜರಂಗದಳ ವತಿಯಿಂದ ತಹಶೀಲ್ದಾರ್, ಇಒ ಗೆ ಮನವಿ

ಉಬರಡ್ಕ ಮಿತ್ತೂರು ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲಿನಲ್ಲಿರುವ ಸಾರ್ವಜನಿಕ ಮುಕ್ತಿಧಾಮ ಹಿಂದೂ ರುದ್ರ ಭೂಮಿಯ ಗೇಟಿಗೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸೇರಿ ಬೀಗ ಹಾಕಿರುವುದನ್ನು ಖಂಡಿಸಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯವರು ಸುಳ್ಯ ತಾಲೂಕು ತಹಶೀಲ್ದಾರರವರಿಗೆ ಹಾಗೂ ಇ.ಒ ರವರಿಗೆ ಜು 28 ರಂದು ಮನವಿ ಸಲ್ಲಿಸಿದರು.ಕೊಡಿಯಾಲಬೈಲಿನಲ್ಲಿರುವ ಹಿಂದೂ...

ಕಮಲಾಕ್ಷ ಕುಂಟಿಕಾನ ನಿಧನ

ಪೆರಾಜೆ ಗ್ರಾಮದ ಕುಂಟಿಕಾನ ಕಮಲಾಕ್ಷ ಅವರು ಅಲ್ಪಕಾಲದ ಅಸೌಖ್ಯದಿಂದ ಜು. 27ರಂದು ನಿಧನರಾದರು.ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಜಾನಕಿ, ಪುತ್ರರಾದ ಯತೀಶ, ರಾಮಚಂದ್ರ, ಪುತ್ರಿ ಲೀಲಾವತಿ ಹಾಗೂ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!