- Sunday
- March 15th, 2026
ಮರ್ಕಂಜದ ಬಿಎಸ್ಎನ್ಎಲ್ ಕೇಂದ್ರವು ಕಳೆದ ಕೆಲವು ವರ್ಷಗಳಿಂದ ಸ್ವಚ್ಚಗೊಳಿಸದೆ ಅರಣ್ಯ ಪ್ರದೇಶದ ಮಧ್ಯೆ ಇದ್ದಂತ್ತಿತ್ತು. ಇದನ್ನು ಮರ್ಕಂಜ ಗ್ರಾ.ಪಂ. ಸದಸ್ಯರಾದ ರಾಜೇಂದ್ರ ಕೊಚ್ಚಿ ನೇತೃತ್ವದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಡಿಲ್ಲಿಕುಮಾರ ಕಾಯರ,ಪುಂಡರೀಕ ನಾಯಕ್ ಗೂಡಂಬೆ,ಚೆನ್ನಕೇಶವ ದೋಳ,ಯತೀಶ್ ಕಂಜಿಪಿಲಿ,ಹರೀಶ್ ಕಾಯಿಪಳ್ಳ,ಗಗನ್ ಅಲ್ಪೆ,ಸೋಮಶೇಖರ್ ಅಡಿಗೈ ದೋಳ ಮೊದಲಾದವರು ಬೆಳೆದಿದ್ದ ಗಿಡ ಗಂಟೆ ಕಡಿದು ಸ್ವಚ್ಚ ಮಾಡಿದರು. ಗಿರಿಜಾ ಅಡಿಗೈ...
ಗುತ್ತಿಗಾರು : ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಮುನ್ನೆಚ್ಚರಿಕೆಯ ವ್ಯವಸ್ಥೆಗಳೊಂದಿಗೆ ಆರಂಭಗೊಂಡಿದೆ. ಗುತ್ತಿಗಾರು ಸ.ಪ.ಪೂ ಕಾಲೇಜಿನ ಪರೀಕ್ಷಾ ಕೊಠಡಿಗಳ ಸ್ಯಾನಿಟೈಷಿಂಗ್ ಮಾಡಿ ಪ್ರತಿ ವಿದ್ಯಾರ್ಥಿಗಳ ಟೆಂಪರೇಷರ್ ಪರೀಕ್ಷಿಸಿ,ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಯಿತು.
ಸವಣೂರಿನ ಚಂದ್ರನಾಥ ಬಸದಿಯ ಸಮೀಪದ ಗದ್ದೆಯೊಂದು ಹಲವು ವರ್ಷಗಳಿಂದ ಬೇಸಾಯ ಮಾಡದೇ ಹಡೀಲು ಬಿದ್ದಿದ್ದು, ಸವಣೂರಿನ ಸಮಾನ ಮನಸ್ಕ ಯುವಕರ ತಂಡ ಅಂಬಾ ಬ್ರದರ್ಸ್ ಇದರ ವತಿಯಿಂದ ಈ ಗದ್ದೆಯಲ್ಲಿ ಈ ಬಾರಿ ಬೇಸಾಯ ಆರಂಭವಾಗಿದೆ.ಅಂಬಾ ಬ್ರದರ್ಸ್ ತಂಡವು ಈಗಾಗಲೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಹಡೀಲು ಬಿದ್ದ ಗದ್ದೆಯಲ್ಲಿ ಭತ್ತದ ಬೇಸಾಯಕ್ಕೆ ಮುಂದಾಗಿದ್ದು ಈ...
ದ.ಕ. ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಗುತ್ತಿಗಾರು, ಗ್ರಾಮಪಂಚಾಯತ್ ದೇವಚಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಜು.17 ರಂದು ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಅಪೌಷ್ಟಿಕ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿಶ್ವ ಜನಸಂಖ್ಯಾ...
ದೇವಚಳ್ಳ ಗ್ರಾಮದ ಸುಬ್ರಹ್ಮಣ್ಯ ಕರಂಗಲ್ಲು ಎಂಬುವವರ ಮನೆಯ ಹಿಂಬದಿಯ ಬರೆ ಜು.17ರ ರಾತ್ರಿ ಕುಸಿದಿದ್ದು, ಜು.18 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸ್ಥಳಿಯರು ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಸಹಕರಿಸಿದರು. ✍ವರದಿ :- ಉಲ್ಲಾಸ್ ಕಜ್ಜೋಡಿ
ಕೊಲ್ಲಮೊಗ್ರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು ವಾಹನಗಳು ಹೋಗಲು ಕಷ್ಟವಾಗುತ್ತಿತ್ತು. ಇದನ್ನು ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಜು.17 ರಂದು ಶ್ರಮದಾನದ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯ ಗುಂಡಿಗಳಿಗೆ ಮಣ್ಣು ಹಾಗೂ ಕಲ್ಲುಗಳನ್ನು ಹಾಕಿ ರಸ್ತೆಯನ್ನು ಸರಿಪಡಿಸಿದರು.ಈ ಸಂದರ್ಭದಲ್ಲಿ...
ಹರಿಹರ ಪಲ್ಲತ್ತಡ್ಕ ಗ್ರಾಮದ ಮಲ್ಲಾರ ಎಂಬಲ್ಲಿ ಜು.18 ರಂದು ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಕೆಲ ಗಂಟೆಗಳ ಸಮಯ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ನಂತರ ಸಾರ್ವಜನಿಕರು ಹಾಗೂ ಸ್ಥಳಿಯರ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು. ✍ವರದಿ :- ಉಲ್ಲಾಸ್ ಕಜ್ಜೋಡಿ
ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸೇವಾ ಭಾರತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಸುಮಾರು 25 ಜನ ಕಾರ್ಯಕರ್ತರು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಡು ಕಡಿಯುವುದು, ಕಸ ಹೆಕ್ಕುವುದು, ಬ್ಲೀಚಿಂಗ್ ಹಾಗೂ ಇತರ ಎಲ್ಲಾ ರೀತಿಯ ಕೆಲಸಗಳ ಮೂಲಕ ಪೂರ್ಣ ಪ್ರಮಾಣದ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಟ್ಟರು.ಸೇವಾ ಭಾರತಿ ಪ್ರಮುಖರಾದ...
ಐನೆಕಿದು ನಿಸರ್ಗ ವೃತ್ತದಿಂದ ನವಗ್ರಾಮದವರೆಗೆ ರಸ್ತೆ ಬದಿಯಲ್ಲಿರುವ ಕಾಡನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಜೂ.18 ರಂದು ಶ್ರಮದಾನ ಮಾಡಲಾಯಿತು. ಈ ಸಂದರ್ಭದಲ್ಲಿ ನಿಸರ್ಗ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು. ✍ವರದಿ :- ಉಲ್ಲಾಸ್ ಕಜ್ಜೋಡಿ
ಕೊಡಗು ಸಂಪಾಜೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜು. 17 ರಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ವಿಪತ್ತು ನಿರ್ವಹಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಭರತ್, ಸದಸ್ಯರುಗಳಾದ ಕುಮಾರ್ ಚೆದ್ಕಾರ್, ಶ್ರೀಮತಿ...
Loading posts...
All posts loaded
No more posts
