ಶಿಕ್ಷಕರ ಸಹಕಾರಿ ಸಂಘದ ನಿಂತಿಕಲ್ಲು ಶಾಖೆಯ ಉದ್ಘಾಟನಾ ಕಾರ್ಯಕ್ರಮ

ಶಿಕ್ಷಕರ ಸಹಕಾರ ಸಂಘ ಕಡಬ ಇದರ ನೂತನ ಶಾಖೆಯು ನಿಂತಿಕಲ್ಲಿನಲ್ಲಿ ಫೆ. 19 ರಂದು ನಿಂತಿಕಲ್ಲು ಸಾನಿಧ್ಯ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಯ ಸಂಚಾಲಕ ಹಾಗೂ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಯವರು ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಸಹಕಾರಿ ಸಂಘಗಳ ಬಗ್ಗೆ...

ಕೊಡಗು ಸಂಪಾಜೆ : ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ

ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮವು ಫೆ.19 ರಂದು ನಡೆಯಿತು. ಈ ಕ್ರಾರ್ಯಕ್ರಮದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ವಿರಾಜಪೇಟೆ ಕ್ಷೇತ್ರ ಶಾಸಕರಾದ ಕೆ ಜಿ ಬೋಪಯ್ಯನವರು, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ...
Ad Widget

ಕುಂಡಡ್ಕ : ಸ್ನೇಹ ಸೌಹಾರ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಕೂಟ

ಫ್ಯಾಮಿಲಿ ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ಪುರುಷರ 58 ಕೆ.ಜಿ.ವಿಭಾಗದ ಹೊನಲು-ಬೆಳಕಿನ ಕಬಡ್ಡಿ ಪಂದ್ಯಾಕೂಟ ಸ್ನೇಹ ಸೌಹಾರ್ದ ಟ್ರೋಫಿ- 2022 ಫೆ.19 ರಂದು ಕುಂಡಡ್ಕ ಶ್ರೀ ಬ್ರಹ್ಮ ಮೊಗೇರ್ಕಳ ದೈವಸ್ಥಾನದ ವಠಾರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಮುಖ್ಯ ಅತಿಥಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ ಕ್ರೀಡಾಕೂಟದ ಆಯೋಜನೆಯ ಹಿಂದೆ ಸಂಘಟಕರ ಪರಿಶ್ರಮ ಸಾಕಷ್ಟು ಇರುತ್ತದೆ....

ಕುಲ್ಕುಂದ : ಬಸವೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಬಸವೇಶ್ವರ ದೇವಸ್ಥಾನ ಬಸವನಮೂಲೆ ಕುಲ್ಕುಂದ ಇಲ್ಲಿ ಮಾ.01 ರಂದು ನಡೆಯುವ ಮಹಾಶಿವರಾತ್ರಿಯ ಆಮಂತ್ರಣ ಪತ್ರಿಕೆಯನ್ನು ಫೆ.19 ರಂದು ಶ್ರೀ ಬಸವೇಶ್ವರ ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಇದರ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಬಾಲಣ್ಣ ಗೌಡ ನಾಯರ್ ಹಿತ್ಲು ನಿಧನ

ಜಾಲ್ಸೂರು ಗ್ರಾಮದ ಸೋಣಂಗೇರಿ ನಾಯರ್ ಹಿತ್ಲು ಬಾಲಣ್ಣ ಗೌಡ ಫೆ. 17 ರಂದು ನಿಧನರಾದರು. ಮೃತರು ಪುತ್ರರಾದ ರುಕ್ಮಯ್ಯ ಗೌಡ, ಮೋಹನ್ ಗೌಡ, ಗಿರಿಧರ ಗೌಡ, ಪುತ್ರಿಯರಾದ ಚಿನ್ನಮ್ಮ, ಲೀಲಾವತಿ, ಭವಾನಿ, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಉಜಿರಡ್ಕ : ಸ್ವಾಮಿ ಕೊರಗಜ್ಜ ದೈವದ ನರ್ತನ ಸೇವೆ ಸಂಪನ್ನ – ಮಗುವನ್ನು ಹಿಡಿದು ಹರಕೆ ಸ್ವೀಕರಿಸಿದ ಅಜ್ಜನ ನರ್ತನದ ವಿಡಿಯೋ ವೈರಲ್

ನಾಲ್ಕೂರು ಗ್ರಾಮದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಫೆ.16 ಮತ್ತು 17 ರಂದು ಶ್ರೀ ಕೊರಗಜ್ಜ ದೈವದ ನರ್ತನ ಸೇವೆ ನಡೆಯಿತು.ಫೆ.16 ಬುಧವಾರ ಸಂಜೆ 5:00 ಗಂಟೆಯಿಂದ ಶ್ರೀ ಮಾತಾ ಅಮೃತ ಕುಟುಂಬ ಏನೆಕಲ್ಲು ಇವರಿಂದ ಭಜನಾ ಕಾರ್ಯಕ್ರಮಗಳು ನಡೆಯಿತು. ನಂತರ ಕಲ್ಲುರ್ಟಿ ದೈವದ ಭಂಡಾರ ತೆಗೆಯುವುದು ಹಾಗೂ ರಾತ್ರಿ ಕಲ್ಲುರ್ಟಿ ದೈವದ ನರ್ತನ...

ಕಲ್ಮಡ್ಕ : ಅಂಗವಿಕಲರಿಗೆ ಸೌಲಭ್ಯ ವಿತರಣೆ

ಕಲ್ಮಡ್ಕ ಗ್ರಾಮ ಪಂಚಾಯತ್ ನಿಂದ ಅಂಗವಿಕಲ ಯೋಜನೆಯಡಿ ಮಂಚ ಸೌಲಭ್ಯವನ್ನು ಕಲ್ಮಡ್ಕ ಗ್ರಾಮದ ಮುಚ್ಚಿಲ ಯೂನುಸ್ ಬಿನ್ ಇಸುಬು ಮತ್ತು ಜೈನಾಬಿ ಬಿನ್ ಮೂಸೆ ಬ್ಯಾರಿ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಹಾಜಿರಾ ಗಫೂರ್ ಮತ್ತು ಸದಸ್ಯ ಲೋಕೇಶ್ ಆಕ್ರಿಕಟ್ಟೆ ಹಾಗೂ ಕಾರ್ಯದರ್ಶಿ ಉಪಸ್ಥಿತರಿದ್ದರು.

ರೈತರ ಪಹಣಿ ಪತ್ರಗಳಲ್ಲಿ ಬೆಳೆಗಳ ವಿವರ ದಾಖಲೀಕರಣವಾಗದೇ ರೈತರಿಗೆ ತೊಂದರೆ – ಶೀಘ್ರ ಸರಿಪಡಿಸುವಂತೆ ಕಂದಾಯ ಸಚಿವರಿಗೆ ಎ.ಪಿ.ಎಂ.ಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಮನವಿ

ರೈತರ ಪಹಣಿ ಪತ್ರಗಳಲ್ಲಿ ಬೆಳೆಗಳ ವಿವರ ದಾಖಲೀಕರಣವಾಗದೇ ರೈತರಿಗೆ ತೊಂದರೆ ಆಗಿದ್ದು ಶೀಘ್ರ ಸರಿಪಡಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಎ.ಪಿ.ಎಂ.ಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಮನವಿ ಸಲ್ಲಿಸಿದ್ದಾರೆ.‌ಮಡಪ್ಪಾಡಿ ಗ್ರಾಮದಲ್ಲಿ ಸುಮಾರು 650 ಜನಕ್ಕಿಂತಲೂ ಹೆಚ್ಚು ಪಹಣಿ ಖಾತೆಗಳನ್ನು ಹೊಂದಿ ಸುಮಾರು 1500 ರಷ್ಟು ಪಹಣಿ ಪತ್ರಗಳಿರುತ್ತವೆ. ಇದೀಗ ಬೆಳೆ ಸಮೀಕ್ಷೆ ಆ್ಯಪ್‌ಗಳ ಮುಖಾಂತರ...

ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಈಶ್ವರಪ್ಪ ಅಧಿಕಾರದಿಂದ ಕೆಳಗಿಳಿಯಲಿ- ಪಿ.ಸಿ ಜಯರಾಮ್

ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಗ್ರಾಮಿಣ ಅಭಿವೃದ್ಧಿ ಸಚಿವ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಫೆ. 21 ರಂದು ಬೆಳಗ್ಗೆ 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡಲಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಪಕ್ಷದ...

ಮಡಪ್ಪಾಡಿ : ಎಳುವೆ ಸೇತುವೆ ಕಾಮಗಾರಿಗೆ ಸಚಿವರಿಂದ ಗುದ್ದಲಿಪೂಜೆ

ಮಳೆಗಾಲದಲ್ಲಿ ದ್ವೀಪದಂತಾಗುತ್ತಿದ್ದ ಮಡಪ್ಪಾಡಿ ಗ್ರಾಮದ ಎಳುವೆ ಭಾಗದ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಎಸ್ ಅಂಗಾರ ಫೆ.17 ರಂದು ಚಾಲನೆ ನೀಡಿದರು. ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ಕಡ್ಯ ಹೊಳೆಗೆ ಎಳುವೆ ಬಳಿ ಸೇತುವೆ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಮಂಡಲ...
Loading posts...

All posts loaded

No more posts

error: Content is protected !!