- Sunday
- March 15th, 2026
ಬಾಳುಗೋಡು ಗ್ರಾಮದ ಅಯ್ಯಪ್ಪ ಯುವಕ ಮಂಡಲ ಉಪ್ಪುಕಳ ಇದರ ಸದಸ್ಯರಿಂದ ವನ್ಯಜೀವಿಗಳಿಗಾಗಿ ಹಣ್ಣಿನ ಗಿಡ ಬೆಳೆಸಿ ಅಭಿಯಾನ ಜೂ. 6 ರಂದು ಆರಂಭಿಸಲಾಯಿತು. ಅಭಿಯಾನದಲ್ಲಿ ಬಾಳುಗೋಡು ಉಪ್ಪುಕಳ ಸಂಪರ್ಕ ರಸ್ತೆಯ ಮಾನಡ್ಕ ಎಂಬಲ್ಲಿಂದ ಕೊತ್ನಡ್ಕವರೆಗೆ ರಸ್ತೆಯ ಬದುಗಳಲ್ಲಿ ಮಾವಿನ ಸಸಿ, ಪೇರಳೆ ಸಸಿ, ನಕ್ಷತ್ರ ಹಣ್ಣಿನ ಸಸಿ, ಗೇರುಬೀಜ ಸಸಿ, ಕಾಳುಮೆಣಸು ಬಳ್ಳಿಗಳನ್ನು ನೆಡಲಾಯಿತು. ವಿಶೇಷವಾಗಿ...
ಕೇನ್ಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೇನ್ಯ ಗ್ರಾಮದ ಕಾರ್ಯತಡ್ಕದಿಂದ ಪೇರ್ಬಂಡ ಕೆರೆಕೋಡಿ ನೇಲ್ಯಡ್ಕ ರಸ್ತೆಗಳಿಗೆ ಚರಂಡಿ ವ್ಯವಸ್ಥೆ ಮತ್ತು ರಸ್ತೆ ದುರಸ್ತಿ ಮಾಡುವ ಮುಖಾಂತರ ಜೂ.6ರಂದು ಶ್ರಮದಾನ ಮಾಡಲಾಯಿತು.ಈ ಶ್ರಮದಾನದಲ್ಲಿ ಜಾಗರಣ ಕಾರ್ಯಕರ್ತರು ಭಾಗವಹಿಸಿದರು.
ಶೇಣಿ ಕುಳ್ಳಾಜೆಯ ಎಂ.ಎಸ್.ಕೆ. ತಂಡದ ಸದಸ್ಯರಿಂದ ಶೇಣಿ ಪಾಡಾಜೆ ರಸ್ತೆಯಲ್ಲಿದ್ದ ಗುಂಡಿಯನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಸುಬ್ರಾಯ ಸೂರೆಂಗಿ, ವಿಜಯ ಕುಳ್ಳಾಜೆ, ಸುಬ್ರಮಣ್ಯ ಸೂರೆಂಗಿ, ದಿನೇಶ್ ಕುಳ್ಳಾಜೆ, ವಿಶ್ವನಾಥ ಕುಳ್ಳಾಜೆ, ದೀಕ್ಷಿತ್ ಶೇಣಿ, ಕೃತಿಕ್ ಕುಳ್ಳಾಜೆ, ಜಗದೀಶ್ ಕುಳ್ಳಾಜೆ, ನಿತೀನ್ ಕುಳ್ಳಾಜೆ, ಯಶೋಧರ ಕುಳ್ಳಾಜೆ, ರಾಮಚಂದ್ರ ಕುಳ್ಳಾಜೆ ಉಪಸ್ಥಿತರಿದ್ದರು.
ಉತ್ತರಾಖಂಡ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ ಎನ್.ಎಂ.ಸಿ ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ
ಸುಳ್ಯದ ಎನ್ ಎಂ ಸಿ ಪ್ರಥಮ ಬಿ ಕಾಂ ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ ಪಿ ಯವರು ಉತ್ತರಕಾಶಿ ಉತ್ತರಖಾಂಡ್ ನಲ್ಲಿ ಎನ್ ಸಿ ಸಿ ವತಿಯಿಂದ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. 19 ಕೆಎಆರ್ ಬೆಟಾಲಿಯನ್ , ಎನ್ ಸಿ ಸಿ ಮಡಿಕೇರಿಯಿಂದ ಆಯ್ಕೆ ಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. 2021 ಜೂನ್ 6...
ಕಳಂಜ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣಿಮಜಲು, ಆದಳ, ಕಳಂಜ ಜನತಾ ಕಾಲೋನಿ, ಕಳಂಜ ವಿಷ್ಣುನಗರ, ಪಟ್ಟೆ ಪರಿಸರದಲ್ಲಿ ಡೆಂಗ್ಯೂ ಮುಂಜಾಗೃತ ಕ್ರಮವಾಗಿ ಜೂ.5ರಂದು ಫಾಗಿಂಗ್ ನಡೆಸಲಾಯಿತು. ಈ ಸಂದರ್ಭದಲ್ಲಿ ಫಾಗಿಂಗ್ ನಿರ್ವಾಹಕ ಶರೀಫ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ರೈ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಪ್ರೇಮಲತಾ...
ಲಾಕ್ ಡೌನ್ ಹಿನ್ನೆಲೆಯಲ್ಲಿ ಕೊರೋನಾ ವಾರಿಯರ್ಸ್ ಗಳಾದ ಆಶಾಕಾರ್ಯಕರ್ತೆ ಯರಿಗೆ ಕಾಂಗ್ರೆಸ್ ವತಿಯಿಂದ ಜೂ.5 ರಂದು ಗುತ್ತಿಗಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫುಡ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸಂಯೋಜಕ ನಂದಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಕಾಂಗ್ರೆಸ್ ಪ್ರಮುಖರಾದ ಡಾ.ಬಿ.ರಘು, ಎಸ್.ಸಂಶುದ್ದೀನ್, ಪರಮೇಶ್ವರ ಕೆಂಬಾರೆ, ಶಶಿಧರ್ ಎಂ.ಜೆ., ಶಾಹುಲ್ ಹಮೀದ್ ಭವಾನಿಶಂಕರ್...
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಜೂನ್ 5ರಂದು ಉಸಿರಿಗಾಗಿ ಹಸಿರು ಎಂಬ ಧ್ಯೇಯದಡಿ ವಿಶ್ವ ಪರಿಸರ ದಿನಾಚರಿಸಲಾಯಿತು. ಸಸಿ ನೆಡುವ ಮೂಲಕ ಎಸ್.ವೈ.ಎಸ್ ದ.ಕ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಚಾಲನೆ ನೀಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿಗಳಾದ ಸ್ವಬಾಹ್ ಹಿಮಮಿ ಸಖಾಫಿ, ನೌಶಾದ್ ಕೆರೆಮೂಲೆ ಡಿವಿಷನ್...
ಸಂಪಾಜೆ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪಂಚಾಯತ್ ಸಮೀಪದ ಮನೆ ಬಳಿ ಹಾಗೂ ಪಂಚಾಯತ್ ಕಛೇರಿ ಬಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ.ಹಮೀದ್ ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಿಡಿಓ ಸರಿತಾ ಡಿಸೋಜ, ಲಿಸ್ಸಿ ಮೊನಾಲಿಸಾ,ರಜನಿ, ನಾಗೇಶ್ ಪಿ ಆರ್, ಹಾಗೂ ಸಿಬ್ಬಂದಿ ವರ್ಗದವರು...
ವಿಶ್ವಪರಿಸರ ದಿನಾಚರಣೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯದ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಅಜ್ಜಾವರ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಸತ್ಯವತಿ ಬಸವನಪಾದೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲೀಲಾ ಮನಮೋಹನ್ ಹಾಗೂ ಸದಸ್ಯರಾದ ರಾಹುಲ್ ಅಡ್ಪಂಗಾಯ, ಜಯರಾಮ ಅತ್ಯಡ್ಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲಾ ಎ...
Loading posts...
All posts loaded
No more posts
