Ad Widget

18 ರಿಂದ 44 ವರ್ಷದೊಳಗಿನ ವಿಕಲ ಚೇತನರಿಗೆ ಮೇ 28-29ರಂದು ಕೋವಿ ಶೀಲ್ಡ್ ಲಸಿಕೆ

ತಾಲೂಕಿನ 18 ರಿಂದ 44 ವರ್ಷದೊಳಗಿನ ವಿಕಲ ಚೇತನರಿಗೆ ಮೇ 28 ಮತ್ತು 29ರಂದು ಕೋವಿ ಶೀಲ್ಡ್ ಲಸಿಕೆ ನೀಡಲಾಗುವುದು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ತಾಲೂಕಿನ ವಿವಿದೆಡೆ ಆಯ್ದ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮಾಹಿತಿ ನೀಡಲಾಗಿದೆ. ಅಜ್ಜಾವರ ಮತ್ತು ಮಂಡೆಕೋಲು ಗ್ರಾಮದ...

ಕೊಕ್ಕೋ ರೈತರಿಗಿಂದು ಆಶಾದಾಯಕ ಬೆಳೆ – ಕೃಷಿ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದಾರೆ : ಗದಾಧರ ಮಲ್ಲಾರ

https://youtu.be/TWfQYgfsIvs ಅತೀ ಹೆಚ್ಚು ಕೊಕ್ಕೋ ಬೆಳೆ ಬೆಳೆಯುತ್ತಿರುವ ಪ್ರದೇಶಗಳಲ್ಲಿ ಸುಳ್ಯವೂ ಒಂದು. ರೈತರ ಪಾಲಿಗಿಂದು ಒಂದು ಆಶಾದಾಯಕ ಬೆಳೆಯಾಗಿ ನಿರಂತರ ಆದಾಯ ಒದಗಿಸುತ್ತಿದೆ. ಕೊಕ್ಕೋ ಕೃಷಿ ಮೊದಲು ಪ್ರಾರಂಭಿಸಿದವರಲ್ಲಿ ಕೀಲಾರ್ ಗೋಪಾಲಕೃಷ್ಣಯ್ಯ, ಕುರುಂಜಿ ವಿಶ್ವನಾಥ ಗೌಡ, ಎಂ.ಎಂ.ಗಿರಿ ಮಲ್ಲಾರ, ಎಂ.ಎಚ್.ಗೌಡ ಮಲ್ಲಾರ, ಮುಂಡಾಜೆ ಹೂವಪ್ಪ ಮೊದಲಿಗರಾಗಿ ಕಾಣುತ್ತಾರೆ. 1964 ರಲ್ಲಿ ದಿ.ಗಿರಿ ಮಲ್ಲಾರ ಕೃಷಿ ಪ್ರಾರಂಭಿಸಿದಾಗ...
Ad Widget

ಸುಳ್ಯ ತಾಲೂಕಿನಲ್ಲಿ ಇಂದು 46 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 46 ಕೊರೊನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 54 ಕ್ಕೆ ಏರಿಕೆಯಾಗಿತ್ತು. ತಾಲೂಕಿನಲ್ಲಿ ಒಟ್ಟು 424 ಪ್ರಕರಣ ಸಕ್ರೀಯವಾಗಿದೆ.

ಮರ ಬಿದ್ದು ಮಾವಿನಕಟ್ಟೆ- ಕಂದ್ರಪ್ಪಾಡಿ ರಸ್ತೆ ಬಂದ್ – ಸ್ಥಳೀಯರಿಂದ ತೆರವು

ಮಾವಿನಕಟ್ಟೆ ಕಂದ್ರಪ್ಪಾಡಿ ರಸ್ತೆಗೆ ಪಾರೆಪ್ಪಾಡಿ ಬಳಿ ಮೇ. 26 ರಂದು ಸಂಜೆ ವೇಳೆಗೆ ಮರಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಕೂಡ ನೆಲಕ್ಕುರಿದ್ದವು. ರಸ್ತೆ ಸಂಚಾರ ಬಂದ್ ಆಗಿರುವುದನ್ನು ಸ್ಥಳೀಯರು ಸೇರಿ ತೆರವುಗೊಳಿಸಿದರು.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಅಂಗಾರ ಭೇಟಿ -ಗ್ರಾಮೀಣರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆಗೆ ಕ್ರಮ

ಈ ಹಿಂದೆ ಲಸಿಕೆಗಳು ಅಧಿಕವಿರುವಾಗ ಜನತೆ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕಿದರು.ಇದೀಗ ಅಧಿಕ ಪ್ರಮಾಣದಲ್ಲಿ ಬೇಡಿಕೆ ಇರುವುದರಿಂದ ಪೂರೈಕೆ ಮಾಡುವುದು ಕಷ್ಟವಾಗಿದೆ. ಮುಂದಿನ ಒಂದು ವಾರದ ಒಳಗೆ ಅಧಿಕ ಪ್ರಮಾಣದಲ್ಲಿ ಸಾರ್ವಜನಿಕರಿಗೆ ಲಸಿಕೆ ವಿತರಣೆಯಾಗಲಿದೆ. ಈ ಮೂಲಕ ಸರ್ವರಿಗೂ ಲಸಿಕೆ ದೊರಕುವಂತೆ ಮಾಡಲು ಸರಕಾರ ಕಾರ್ಯಪ್ರವೃತ್ತವಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರವು ಗ್ರಾಮೀಣ ಪ್ರದೇಶಗಳಿಂದ ಕೂಡಿರುವ...

ಕೊಲ್ಲಮೊಗ್ರ : ತುರ್ತು ಸೇವೆಗೆ ವಾಹನ ಮೀಸಲು – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಅನುಮತಿ ಪತ್ರ ಹಾಗೂ 10 ಪಿ.ಪಿ.ಇ ಕಿಟ್ ಹಸ್ತಾಂತರ

ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಕೋವಿಡ್-19 ಹಾಗೂ ಇತರ ವೈಧ್ಯಕೀಯ ತುರ್ತು ಸೇವೆಗಳಿಗಾಗಿ ಕಲ್ಮಕಾರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಅವರ ವಾಹನವನ್ನು ಮೀಸಲಿರಿಸಲಾಗಿದೆ. ಈ ವಾಹನವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು ಇದರ ನಿರ್ವಹಣೆಯನ್ನು ಸೇವಾಭಾರತಿ ಕೊಲ್ಲಮೊಗ್ರ ಹಾಗೂ ಕೋವಿಡ್-19 ಕಾರ್ಯಪಡೆ ಕೊಲ್ಲಮೊಗ್ರ ನಿರ್ವಹಿಸಲಿದೆ....

ಸುಳ್ಯದಲ್ಲಿ ಇಂದು 54 ಕ್ಕೆ ಏರಿದ ಕೊರೊನಾ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು ಇಂದು 54 ಕೊರೊನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 29 ಕ್ಕೆ ಇಳಿದಿತ್ತು. ತಾಲೂಕಿನಲ್ಲಿ ಒಟ್ಟು 415 ಕ್ಕೆ ಸಕ್ರೀಯ ಪ್ರಕರಣ ಏರಿಕೆ ಕಂಡಿದೆ.

ಗುತ್ತಿಗಾರು ಗ್ರಾ.ಪಂ. ಕೋವಿಡ್ ಕಾರ್ಯಪಡೆ ಸಭೆ

ಗುತ್ತಿಗಾರು ಗ್ರಾಮ ಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆಯು ಮೇ.25 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಆಚಳ್ಳಿ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.ಈ ಸಭೆಯಲ್ಲಿ ನಿರ್ಣಯಿಸಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ...

ಹರಿಹರ ಕೊಲ್ಲಮೊಗ್ರ ಭಾಗದ ಜನರ ತುರ್ತು ಸೇವೆಗೆ ವಾಹನ ವ್ಯವಸ್ಥೆ – ವೆಚ್ಚ ಭರಿಸಲಿದೆ ಕುಕ್ಕೆ ಆಡಳಿತ ಮಂಡಳಿ

ಕೊಲ್ಲಮೊಗ್ರ ಹರಿಹರ ಬಾಳುಗೋಡು ಕಲ್ಮಕಾರು ಗ್ರಾಮಗಳ ಜನರಿಗೆ ಕೋವಿಡ್ ಹಾಗೂ ಅತೀ ಅಗತ್ಯ ಸೇವೆಗಳಿಗಾಗಿ ವಾಹನವೊಂದು ದಿನದ ಇಪ್ಪತ್ಕಾಲ್ಕು ಗಂಟೆಯು ಉಚಿತವಾಗಿ ಕಾರ್ಯನಿರ್ವಹಿಸಲಿದೆ. ಈ ವಾಹನದ ಸಂಪೂರ್ಣ ವೆಚ್ಚವನ್ನು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಮಂಡಳಿ ಭರಿಸಲಿದೆ. ತುರ್ತು ಸೇವೆಗಳಿಗೆಉದಯ ಶಿವಾಲ 9483904542, 8431200521, ಕೇಶವ ಅಂಬೆಕಲ್ಲು 6361822198, ಪುಷ್ಪರಾಜ್ ಪಡ್ಪು 9449162052 ಇವರನ್ನು ಸಂಪರ್ಕಿಸಬಹುದು.

ಗುತ್ತಿಗಾರು : ಆಶಾಭಾರತಿ ಎಸೋಸಿಯೇಟ್ಸ್ ಆಡಳಿತ ಪಾಲುದಾರ ಹರ್ಷಿತ್ ಜಿ.ಬಿ. ರವರಿಂದ ಕಿಟ್ ವಿತರಣೆ

ಗುತ್ತಿಗಾರು ಮೇ| ಆಶಾಭಾರತಿ ಎಸೋಸಿಯೇಟ್ಸ್ ಆಡಳಿತ ಪಾಲುದಾರರಾದ ಹರ್ಷಿತ್ ಜಿ.ಬಿ.ರವರು ಕೋರೋನಾ ಪೀಡಿತ ಸಂತ್ರಸ್ತರ ನೆರವಿಗೆ ನೀಡುತ್ತಿರುವ ಕಿಟ್ ಗಳನ್ನು ಗುತ್ತಿಗಾರು ಗ್ರಾ.ಪಂ ಗೆ ಇಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ‌ ಅಭಿವೃದ್ಧಿ ಅಧಿಕಾರಿ ಶ್ಯಾಂ ಪ್ರಸಾದ್ ಯಂ.ಆರ್ , ಗ್ರಾ.ಪಂ. ಅಧ್ಯಕ್ಷೆ ರೇವತಿ ಆಚಳ್ಳಿ , ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು , ಭರತ್ ಕೆ.ವಿ...
Loading posts...

All posts loaded

No more posts

error: Content is protected !!