- Sunday
- March 15th, 2026
ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಬಂದ್ ಮತ್ತು ಅದರಿಂದಾಗುತ್ತಿರುವ ಪರಿಣಾಮ, ಸಾರ್ವಜನಿಕರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ಕಳುಹಿಸಿ.ನಾವು ಅಮರ ಸುದ್ದಿ ವೆಬ್ಸೈಟ್ ನಲ್ಲಿ ಪ್ರಕಟಿಸುತ್ತೇವೆ.ವಾಟ್ಸಾಪ್ : 9449387044Gmail : amarasuddi@gmail.com www.amarasuddi.com
ಕಡಬ ತಾಲ್ಲೂಕು ಎಡಮಂಗಲ ಗ್ರಾಮದ ನಾಗನಕಜೆಯ ಕುಮಾರಿ. ಸತ್ಯವತಿ. ಎನ್ ಇವರು ಈ ಸಾಲಿನ ಬಿ. ಎಡ್ ಪರೀಕ್ಷೆಯಲ್ಲಿ 76.58% ಅಂಕವನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.ಇವರು ಪುತ್ತೂರಿನ ತೆಂಕಿಲದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ. ನಾಗನಕಜೆ ನಾರ್ಣಪ್ಪ ಗೌಡ ಮತ್ತು ಉಮಾವತಿ ದಂಪತಿಗಳ ಪುತ್ರಿ
ಕೊರೊನಾದಿಂದ ಇಡೀ ದೇಶವೇ ತತ್ತರಿಸಿದ್ದು ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಸಾವಿನ ಸಂಖ್ಯೆ ಎಲ್ಲೆ ಮೀರಿದೆ. ಸುಳ್ಯ ನ.ಪಂ. ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರು ಎಷ್ಟಿದ್ದಾರೆ. ಸುಳ್ಯದ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸ್ಥಳಿಯ ಆಡಳಿತಕ್ಕೆ ಅಧಿಕಾರಿಗಳು ಮಾಹಿತಿಯೇ ನೀಡಿಲ್ಲ. ಆರಿಸಿದ ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳದ ಅಽಕಾರಿಗಳ ಮೇಲೆ ಕಠಿಣ ಕ್ರಮ...
ಕೇನ್ಯ ಗ್ರಾಮದ ಕೆಮ್ಮಟೆ ಎಂಬಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಸುಳ್ಯ ವಲಯ ಅಬಕಾರಿ ನಿರೀಕ್ಷಕರು ದಾಳಿ ನಡೆಸಿದ್ದಾರೆ. ಈ ವೇಳೆ 10 ಬಾಟಲಿಗಳಲ್ಲಿ ಸಂಗ್ರಹಿಸಿದ್ದ 10 ಲೀ ಗೇರು ಹಣ್ಣಿನಿಂದ ತಯಾರಿಸಿದ ಸರಾಯಿ ಪತ್ತೆಯಾಗಿದ್ದು, ದಾಳಿ ವೇಳೆ ಆರೋಪಿ ಕೆಮ್ಮಟೆ ಸುಂದರ ಗೌಡ ಪರಾರಿಯಾದರೆಂದು ತಿಳಿದುಬಂದಿದೆ. ಅಬಕಾರಿ ನಿರೀಕ್ಷಕ ಸಿದ್ದಪ್ಪ...
ಸುಳ್ಯದ ವಿಶ್ವ ಕಾಂಪ್ಲೆಕ್ಸ್ ನಲ್ಲಿರುವ ಟೆಕ್ಸ್ ಟೈಲ್ಸ್ & ರೆಡಿಮೇಡ್ ಡ್ರೆಸ್ ಮಳಿಗೆ ದೀಕ್ಷಾ ಟ್ರೇಡರ್ಸ್ ನ ನೂತನ ವಿಸ್ತ್ರತ ಮಳಿಗೆ ಎ.26 ರಂದು ಉದ್ಘಾಟನೆಗೊಳ್ಳಲಿದೆ.ಕಳೆದ 27 ವರ್ಷಗಳಿಂದ ಜವುಳಿ ವ್ಯಾಪಾರದಲ್ಲಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿರುವ ದೀಕ್ಷಾ ಟ್ರೇಡರ್ಸ್ ಈಗ ಜನರ ಹೆಚ್ಚಿನ ಅನುಕೂಲತೆಗಾಗಿ, ಮಳಿಗೆಯನ್ನು ಮೇಲಂತಸ್ತಿನಲ್ಲಿ ವಿಶಾಲವಾಗಿ ವಿಸ್ತ್ರತಗೊಳಿಸಿದ್ದು, ಬಟ್ಟೆಗಳ ಅಪಾರ ಸಂಗ್ರಹವಿದ್ದು...
ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನೀತಿ ನಿಯಮ ಉಲ್ಲಂಘಿಸಿದ ಬಗ್ಗೆ ಧಾರ್ಮಿಕ ವಿಚಾರ ಮುಂದಿಟ್ಟು ಕ್ಯಾಂಪಸ್ ಫ್ರಂಟ್ನ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಅನಾಗರಿಕ ವರ್ತನೆ ಎಂದಿರುವ ಎಬಿವಿಪಿ ಖಂಡನೆ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.ಕಾಲೇಜು ಆವರಣದಲ್ಲಿ ಗೊಂದಲವನ್ನು ಸೃಷ್ಟಿಸಿದ ಕ್ಯಾಂಪಸ್ ಫ್ರಂಟ್ನ ನಾಯಕನೆಂದು ಹೇಳಿಕೊಳ್ಳುತ್ತಿರುವ ಅನ್ಸಾರ್ ಬೆಳ್ಳಾರೆ ಮತ್ತು ಇದಕ್ಕೆ ಬೆಂಬಲಿಸುತ್ತಿರುವ ಸಂಘಟನೆಗಳ ಅನಾಗರಿಕ...
ದೇವಚಳ್ಳ ಗ್ರಾಮದ ಚಳ್ಳದಲ್ಲಿ ಜೀರ್ಣೋದ್ಧಾರಗೊಳ್ಳದೇ ಅವನತಿ ಹೊಂದಿದ್ದ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕಾಲ ಕೂಡಿಬಂದಿದ್ದು ಏ.24 ರಂದು ಭಕ್ತಾಭಿಮಾನಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ದೇವಚಳ್ಳ, ನೆಲ್ಲೂರುಕೆಮ್ರಾಜೆ, ಅಮರ ಮುಡ್ನೂರು ಗ್ರಾಮದ ದೇವಸ್ಥಾನ ಹಾಗೂ ಮನೆಗಳಲ್ಲಿ ಪ್ರಶ್ನೆ ಚಿಂತನೆ ನಡೆದ ಸಂದರ್ಭದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಆಗಬೇಕೆಂದು ಕಂಡುಬಂದಿತ್ತು. ಹಳ್ಳದಲ್ಲಿ ದೇವಸ್ಥಾನ ಇತ್ತೆಂಬ ಜಾಗದಲ್ಲಿ ಕೆರೆ ಹಾಗೂ...
ಗುತ್ತಿಗಾರು ಸರಕಾರಿ ಪ್ರೌಢಶಾಲೆಯ 1೦ನೇ ತರಗತಿ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆ ಹೋಗಿದ್ದ ವೇಳೆ ನಾಲ್ಕು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಹಾಗಾಗಿ ಇಂದು ನಡೆಯಬೇಕಾಗಿದ್ದ ಪ್ರೌಢಶಾಲಾ ಇಂಟರ್ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ ಘಟನೆ ವರದಿಯಾಗಿದೆ.ನಡುಗಲ್ಲು, ಕಂದ್ರಪ್ಪಾಡಿ, ಮೆಟ್ಟಿನಡ್ಕ ಹಾಗೂ ಚತ್ರಪ್ಪಾಡಿಯ ನಾಲ್ವರು ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ಕೂಡಾ ತಪಾಸಣೆಗೊಳಪಡಿಸಲು...
ಪೈಚಾರು ಸೋಣಂಗೇರಿ ರಸ್ತೆ ಕಾಮಗಾರಿ ಭರದಿಂದ ನಡೆಯುತ್ತಿದ್ದು ಸೋಣಂಗೇರಿ ಸಮೀಪ ರಸ್ತೆ ಬದಿಯ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಮರ ತೆರವುಗೊಳಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮರದ ಬೇರುಗಳು ಕಾಣಿಸುತ್ತಿದ್ದು ಬೀಳುವ ಹಂತಕ್ಕೆ ತಲುಪಿದೆ. ಈ ಬಗ್ಗೆ ಅಧಿಕಾರಿಗಳು ಗಮನಿಸಿ ಅಪಾಯ ಸಂಭವಿಸುವ ಮೊದಲೇ ತೆರವುಗೊಳಿಸುವುದು ಒಳಿತು.
ನೆಲ್ಲೂರು ಕೆಮ್ರಾಜೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಕೊರತ್ತೋಡಿ ಇದರ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯು ಬೊಳ್ಳಾಜೆ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು(ಎ.18)ರಂದು ಉದ್ಘಾಟನೆಗೊಂಡಿತು.ಸುಳ್ಯ ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮುಂಡೋಕಜೆ...
Loading posts...
All posts loaded
No more posts
