Ad Widget

ಗುತ್ತಿಗಾರು : ಮೂಲೆಗುಂಪಾಗಿರುವ ಸರ್ಕಾರಿ ಯೋಜನೆ – ವರ್ಷ ಕಳೆದರೂ ಉಪಯೋಗಕ್ಕೆ ಸಿಗದ ಜಿಮ್ ಕೇಂದ್ರ

ಗುತ್ತಿಗಾರು. ಎ.4: ಸರ್ಕಾರಿ ಯೋಜನೆಯನ್ನು ಸರಿಯಾಗಿ ಬಳಸಿಕೊಳ್ಳದಿದ್ದರೆ ಏನಾಗುತ್ತದೆ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ ಗುತ್ತಿಗಾರು ಗ್ರಾ.ಪಂ ಮೂಲಕ ಸ್ಥಾಪನೆಯಾದ ಗರಡಿ ಮನೆ. ಉದ್ಘಾಟನೆಗೊಂಡು ವರ್ಷ ಕಳೆದರೂ ಉಪಯೋಗಕ್ಕೆ ಸಿಗದ ಈ ಗರಡಿಮನೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಗ್ರಾಮವಿಕಾಸ ಯೋಜನೆಯಲ್ಲಿ ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ಪಂಚಾಯತ್ ಗಳಿಗೆ ಸರಕಾರ ಸ್ಥಳೀಯ ಮಟ್ಟದಲ್ಲಿ ಜಿಮ್ ಸ್ಥಾಪನೆಗೆ ಅನುದಾನ ನೀಡಿತ್ತು. ಅದರಂತೆ...

ಎ. 19ರಂದು ಕಳಂಜದಲ್ಲಿ ತುಳು ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ಮೇಳ

ಸುಳ್ಯ ತಾಲೂಕು 2ನೇ ತುಳು ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ಮೇಳ ಎ. 19 ರಂದು ಕಳಂಜ ಗ್ರಾಮದ ಕೋಟೆಮುಂಡುಗಾರು ಶಾಲೆಯಲ್ಲಿ ನಡೆಯಲಿದೆ ಎಂದು ಒಡಿಯೂರು ಷಷ್ಠ್ಯಬ್ದ ಸಂಭ್ರಮ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ರೈ ಕಳಂಜ ಹೇಳಿದರು.ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾರ್ಯಕ್ರಮದ ವಿವರ ನೀಡಿದರು. ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ತುಳು ತಾಲೂಕು...
Ad Widget

ಕಳಂಜ: ತುಳು ಸಾಹಿತ್ಯ ಸಮ್ಮೇಳನ, ಕೃಷಿ ಸಮ್ಮೆಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳಂಜ ಗ್ರಾಮದ ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ತುಳು ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ಸಮ್ಮೆಳನವು ಎ.19ರಂದು ನಡೆಯಲಿದ್ದು ಈ ಬಗ್ಗೆ ಏ.4 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಿತು. ತುಳು ಸಮ್ಮೇಳನ ಅಧ್ಯಕ್ಷ ಸುಭಾಶ್ಚಂದ್ರ ರೈ, ತುಳು ತುಡರ್ ಕೂಟ ಸುಳ್ಯ ಇದರ ಅಧ್ಯಕ್ಷ ಜೆ.ಕೆ. ರೈ, ಕಾರ್ಯಾಧ್ಯಕ್ಷ ಕೂಸಪ್ಪಗೌಡ...

ಎ. 8 : ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ ಬರುವ ಎ. 8ನೇ ಗುರುವಾರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಪೆರುವಾಜೆ ಗ್ರಾಮ...

ಅರಣ್ಯ ಇಲಾಖೆಯ ಜನಹಿತ ವಿರೋದಿ ನೀತಿ ಪರಾಮರ್ಶಿಸಿ, ಕಾರ್ಯ ಗತಗೊಳಿಸುವಂತೆ ಆಗ್ರಹಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಮನವಿ

ಅರಣ್ಯ ಇಲಾಖೆಯ ಜನಹಿತ ವಿರೋಧಿ ಕಾರ್ಯಯೋಜನೆಯ ಆದೇಶವನ್ನ ಪರಾಮರ್ಶಿಸಿ, ಕಾರ್ಯ ಗತಗೊಳಿಸುವಂತೆ ಆಗ್ರಹಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಎ.𝟎𝟓 ರಂದು ಮಂಗಳೂರಿನಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಪ್ರಮುಖರುಗಳಾದ ರವೀಂದ್ರ ರುದ್ರಪಾದ, ಭಾನುಪ್ರಕಾಶ್ ಪೆರುಮುಂಡ,...

ಮದ್ಯಮುಕ್ತ ಗ್ರಾಮ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಹರಿಹರ ಪಲ್ಲತ್ತಡ್ಕ ಮತ್ತು ಕೊಲ್ಲಮೊಗ್ರು ಗ್ರಾಮಪಂಚಾಯತ್ ಕ್ಷೇತ್ರದಲ್ಲಿ ಯಾವುದೇ ಮದ್ಯದಂಗಡಿ ಮತ್ತು ಬಾರ್ & ರೆಸ್ಟೋರೆಂಟ್ ಗಳನ್ನು ಹೊಸತಾಗಿ ತೆರೆಯದಂತೆಯೂ ಮತ್ತು ಬೇರೆ ಕಡೆಯಿಂದ ಸ್ಥಳಾಂತರಗೊಳ್ಳದಂತೆ ಹರಿಹರ ಪಲ್ಲತ್ತಡ್ಕ ಗ್ರಾಮದ ಮದ್ಯಮುಕ್ತ ಗ್ರಾಮ ಹೋರಾಟ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ...

ಎ. 7 : ಕಳಂಜ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

ಈಗಾಗಲೇ ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಮುಂದುವರೆದು ಇದೇ ಬರುವ ಎ.7 ನೇ ಬುಧವಾರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಕಳಂಜ ಗ್ರಾಮ...

ಕಲ್ಲೇಮಠ : ವೀಲ್ ಚಯರ್ ಕೊಡುಗೆ

ಪಾರ್ಶ್ವವಾಯುಗೆ ಒಳಗಾಗಿ ನಡೆದಾಡಲು ಕಷ್ಟಪಡುತ್ತಿದ್ದ ಕಲ್ಲೇಮಠ ಕುಂಜಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎ.5 ರಂದು ವೀಲ್ ಚಯರ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಹರಿ ಪ್ರಗತಿಬಂದು ತಂಡದ ಸದಸ್ಯರಾದ ದಿನಕರ ಕೊಪ್ಪತ್ತಡ್ಕ, ರಾಘವೇಂದ್ರ, ನಾರಾಯಣ.ರೈ, ಗಿರೀಶ್, ಉಮೇಶ್ ಕಟ್ಟ, ಶೇಖರ.ವಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ...

ಗುತ್ತಿಗಾರು : ಮೆಸ್ಕಾಂ ಕೇಬಲ್‌ ಅಳವಡಿಕೆ – ಪೈಪ್ ಒಡೆದು ಕುಡಿಯುವ ನೀರಿಗೆ ತೊಂದರೆ -ಪರ್ಯಾಯ ವ್ಯವಸ್ಥೆಗೆ ಕ್ರಮ : ಪಿಡಿಓ

ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್ ಅಳವಡಿಸುತ್ತಿದ್ದು ಎ.3 ರಂದು ಪೈಪ್ ಒಡೆದು ಹಾಕಿ ಪೇಟೆಯಾದ್ಯಂತ ನೀರಿನ ಸಂಪರ್ಕ ಕಡಿತಗೊಂಡಿದ್ದು ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ಪಂಚಾಯತ್ ಆಗಲಿ & ಕೇಬಲ್‌ ಅಳವಡಿಸುತ್ತಿರುವ ಗುತ್ತಿಗೆದಾರರಾಗಲಿ ಸರಿ ಪಡಿಸದೇ ಪೇಟೆಯಾದ್ಯಂತ ನೀರಿಗೆ ಸಮಸ್ಯೆ ತಂದೊಡ್ಡಿದ್ದಾರೆ. ಜನಪ್ರತಿನಿಧಿಗಳಾದರೂ ಕುಡಿಯುವ ನೀರಿಗೆ ಪರ್ಯಾಯ ಮಾಡುವರೇ ಎಂದು ಜನ ಕಾಯವ ಪರಿಸ್ಥಿತಿ...

ತಮಿಳುನಾಡು ಚುನಾವಣಾ ಕರ್ತವ್ಯಕ್ಕೆ ತೆರಳಿದ ಸುಬ್ರಹ್ಮಣ್ಯ ಗೃಹರಕ್ಷಕ ದಳ

ಸುಬ್ರಹ್ಮಣ್ಯ ಘಟಕದಿಂದ ಒಟ್ಟು 25 ಗೃಹರಕ್ಷಕ ದಳದ ಸಿಬ್ಬಂದಿಗಳು ಏ. 2 ರಿಂದ 7 ರವರೆಗೆ ನಡೆಯಲಿರುವ ತಮಿಳುನಾಡಿನ ಚೆನ್ನೈ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಂದೋಬಸ್ತ್ ಗಾಗಿ ಕರ್ತವ್ಯಕ್ಕೆ ತೆರಳಿರುತ್ತಾರೆ.
Loading posts...

All posts loaded

No more posts

error: Content is protected !!