- Sunday
- March 15th, 2026
ಐವರ್ನಾಡು : ಸಾಂಸ್ಕೃತಿಕ ಕಲಾ ವೇದಿಕೆ ರಚನೆ – ಅಧ್ಯಕ್ಷ ರಾಮಚಂದ್ರ ಗೌಡ ಪಲ್ಲತ್ತಡ್ಕ, ಕಾರ್ಯದರ್ಶಿ ರಾಧಾಕೃಷ್ಣ ಚಾಕೋಟೆ
ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಇದರ ಪ್ರಥಮ ಸಭೆಯು ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಎ.2ರಂದು ಜರಗಿತು.ಸಾಂಸ್ಕೃತಿಕ ಕಲಾ ವೇದಿಕೆಯ ಸಂಚಾಲಕ ಚಂದ್ರಾಕೋಲ್ಚಾರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವರ್ಷದ ಲೆಕ್ಕಪತ್ರವನ್ನು ಚಂದ್ರಾ ಕೋಲ್ಚಾರು ಮಂಡಿಸಿದರು. ಬಳಿಕ ಮುಂದಿನ ವರ್ಷದ ಯೋಜನೆಗಳು ಹಾಗೂ ಸದಸ್ಯರುಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಇದರ...
ಕುರಲ್ ತುಳುಕೂಟ ದುಗಲಡ್ಕ, ಮಿತ್ರ ಯುವ ಸಮೂಹ (ಲ.)ರಿ.ಕೊಯಿಕುಳಿ ಇವರ ಆಶ್ರಯದಲ್ಲಿ ಏ.14ರಂದು ಯುವಕ ಮಂಡಲದ ವಠಾರದಲ್ಲಿ ನಡೆಯುವ 'ಬಲೆ ತಾರಾಯಿ ಕುಟ್ಟುಕ್ಕೋ ಪಂತೋ' ಇದರ ಆಮಂತ್ರಣ ಪತ್ರವನ್ನು ಏ.4ರಂದು ಯುವಕ ಮಂಡಲದ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರವನ್ನು ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶೀಲಾವತಿ ಮಾಧವ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ...
ಪರಿಹಾರದ ಹಣವನ್ನೇ ತಿಂದು ಹಾಕಿದ್ರಾ ಗುತ್ತಿಗಾರಿನ ಜನಪ್ರತಿನಿಧಿಗಳು, ಎಸ್ಸಿ ಮಹಿಳೆಗೆ ಮನೆ ಕಟ್ಟಿಕೊಡುವುದೇ ಬಿಜೆಪಿ ಆಡಳಿತ ಎಂಬ ತಲೆಬರಹದಲ್ಲಿ ಡಿಜಿಟಲ್ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ವರದಿಗಾಗಿ ಅಮರ ಸುದ್ದಿ ಸ್ಥಳಕ್ಕೆ ಭೇಟಿ ನೀಡಿತ್ತು.ಗಾಳಿ ಮಳೆಗೆ ಮನೆ ಕಳೆದುಕೊಂಡ ನಾಲ್ಕೂರು ಗ್ರಾಮದ ಸಾಲ್ತಾಡಿಯ ಗಿರಿಜ ಎಂಬವರು ಮನೆ ತಾಂತ್ರಿಕ ಅಡಚಣೆಯಿಂದ ಅರ್ಧಕ್ಕೆ ಬಾಕಿಯಾಗಿದ್ದು, ಅತೀ ಶೀಘ್ರದಲ್ಲೇ...
ಸುಳ್ಯ ಕಸಬಾ ಗ್ರಾಮದ ಅರಂಬೂರು ಅಮರ ಸುಳ್ಯ ಸುದ್ದಿ ಸಿಬ್ಬಂದಿ ಪದ್ಮನಾಭ ಗೌಡರ ಸುಪುತ್ರಿ ಕೃತಿ ಯ ವಿವಾಹ ನಿಶ್ಚಿತಾರ್ಥವು ಆಲೆಟ್ಟಿ ಗ್ರಾಮದ ಮೂಕಮಲೆ (ಗಬ್ಬಲ್ಕಜೆ) ರಾಮಕೃಷ್ಣ ಗೌಡರ ಪುತ್ರ ಜಿನಿತ್ ರೊಂದಿಗೆ ವಧುವಿನ ಮನೆಯಲ್ಲಿ ಏ.4 ರಂದು ನಡೆಯಿತು.
ದ.ಕ.ಜಿಲ್ಲಾ ಪಂಚಾಯತ್, ಬಾಳಿಲ ಗ್ರಾ.ಪಂ. ಸುಳ್ಯ ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಇದರ ಸಹಯೋಗದಲ್ಲಿ ಬಾಳಿಲ ಮತ್ತು ಮುಪ್ಪೇರ್ಯ ಗ್ರಾಮದ 45 ವರ್ಷ ಮೇಲ್ಪಟ್ಟ ಗ್ರಾಮಸ್ಥರಿಗೆ ಎ.5 ಮತ್ತು ಎ.8 ರಂದು ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವು ಬೆಳಗ್ಗೆ 9.30 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ಮುಪ್ಪೇರ್ಯ...
ಕಾಯರ್ತೋಡಿಯಲ್ಲಿರುವ ಶ್ರೀ ವರದಾಯಿನಿ ವ್ಯಾಘ್ರಚಾಮುಂಡೇಶ್ವರಿ ದೇವಸ್ಥಾನದಲ್ಲಿ ಎ.11, 12 ರಂದು ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶ್ರಮದಾನ ಕಾರ್ಯಕ್ರಮ ಏ.4 ರಂದು ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಮೊಕೇಸರರಾದ ಡಿ.ಎಸ್.ಕುಶಾಲಪ್ಪ, ಡಿ.ಎಸ್.ಗಿರೀಶ್ ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಸರಗೋಡು ವಿಧಾನ ಸಭಾ ಕ್ಷೇತ್ರ ಅಭ್ಯರ್ಥಿ ಕೆ. ಶ್ರೀಕಾಂತ್ ಅವರ ಪರವಾಗಿ ಕಾರಡ್ಕ ಗ್ರಾಮ ಪಂಚಾಯತ್ ವಠಾರದ ಅಂಬಿಕಾ ನಗರದಲ್ಲಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ, ಮತ ಯಾಚಿಸಲಾಯಿತು. ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬೂಡು ರಾಧಾಕೃಷ್ಣ ರೈ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಜಗದೀಶ್ ಸರಳಿಕುಂಜ, ಬಿಜೆಪಿ...
ಕೋವಿಡ್ -19 ವೈರಾಣುವಿನ ವಿರುದ್ದ ಈಗಾಗಲೇ ದೇಶಾದ್ಯಂತ ಕೋವಿಶೀಲ್ಡ್ ಲಸಿಕೆಯನ್ನು ಫ್ರಂಟ್ ಲೈನ್ ವರ್ಕರ್ಸ್, 60 ವರ್ಷ ದಾಟಿದ ವಯಸ್ಕರು ಮತ್ತು 45-59 ವರ್ಷ ವಯೋಮಾನದ ಬಿಪಿ, ಶುಗರ್,ಅಸ್ತಮಾ, ಹೃದಯ, ಕಿಡ್ನಿ ಸಂಬಂಧಿತ ತೊಂದರೆ ಇರುವವರಿಗೆ ಮೊದಲ ಆದ್ಯತೆಯಲ್ಲಿ ನೀಡಲಾಗಿದೆ. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು ವಾರದ...
ಬೆಳ್ಳಾರೆ ಟೌನ್ ರೊಟರಿ ಕ್ಲಬ್ ವತಿಯಿಂದ ನಿವೃತ್ತ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆ ಯವರಿಗೆ ಸನ್ಮಾನ ಕಾರ್ಯಕ್ರಮ ಏ.1 ರಂದು ನಡೆಯಿತು.
ಪೆರುವಾಜೆ ಗ್ರಾಮ ಪಂಚಾಯತ್ ನ ಎದುರುಗಡೆ ರೋಟರಿ ಕ್ಲಬ್ ಬೆಳ್ಳಾರೆ ಹಾಗೂ ಭಾವೈಕ್ಯ ಯುವಕ ಮಂಡಲ (ರಿ.) ಪೆರುವಾಜೆಯ ಸಹಭಾಗಿತ್ವದಲ್ಲಿ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ದಿ.ಪ್ರೇಮನಾಥ ರೈ ರವರ ಸ್ಮರಣಾರ್ಥವಾಗಿ ನಿರ್ಮಿಸಿದ ನೂತನ ಬಸ್ಸು ತಂಗುದಾಣವನ್ನು ಎ.01ರಂದು ಉದ್ಘಾಟಿಸಲಾಯಿತು.ಉದ್ಘಾಟನೆಯನ್ನು ರೋಟರಿಯ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಸಚ್ಚಿದಾನಂದ,...
Loading posts...
All posts loaded
No more posts
