ಕುಕ್ಕೆ ಸುಬ್ರಹ್ಮಣ್ಯ : ಇಂಧನ ಸಚಿವ ಸುನಿಲ್ ಕುಮಾರ್ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜ.02 ರಂದು ಇಂಧನ ಸಚಿವ ಸುನಿಲ್ ಕುಮಾರ್ ಆಗಮಿಸಿ ಇಂದು(ಜ.03) ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.ನಂತರ ಇಂದು(ಜ.03) ಸುಬ್ರಹ್ಮಣ್ಯದಲ್ಲಿ ಭೂಗತ ಕೇಬಲ್ ಮತ್ತು 8 ಮೆಗಾ ವೋಲ್ಟ್ ಪರಿವರ್ತಕ, 11 ಕೆ.ವಿ ಫೀಡರ್ ಉದ್ಘಾಟನಾ ಮಾಡಿದರು. ನಂತರ ಸುಬ್ರಹ್ಮಣ್ಯದ ವಲ್ಲೀಶ...

ಸುಬ್ರಹ್ಮಣ್ಯ :15 ರಿಂದ 18 ವರ್ಷದ ಮಕ್ಕಳ ಲಸಿಕೀಕರಣಕ್ಕೆ ಚಾಲನೆ

15 ರಿಂದ18 ವರ್ಷದ ಮಕ್ಕಳಿಗೆ ಲಸಿಕೀಕರಣಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜ.03 ರಂದು ಚಾಲನೆ ನೀಡಲಾಯಿತು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ ಮಾತನಾಡಿ, ಕೋವಿಡ್ ಎದುರಿಸಲು, ಅದರಿಂದ ರಕ್ಷಣೆ ಪಡೆಯಲು ಲಸಿಕೀಕರಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 101541 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ. ಸರಕಾರದ...
Ad Widget

ಮಣಿಮಜಲು ಜೈನ ಮನೆತನದ ಪಿ.ಗುಲಾಬಿಯಮ್ಮ ನಿಧನ

ಕಳಂಜ ಗ್ರಾಮದ ಮಣಿಮಜಲು ಜೈನ ಮನೆತನದ, ಪ್ರಸ್ತುತಮೂಡುಬಿದಿರೆಯಲ್ಲಿ ನೆಲೆಸಿದ್ದಪಿ ಗುಲಾಬಿಯಮ್ಮ ಜ.02ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮೂಡುಬಿದಿರೆಯ ಜೈನ ಪೇಟೆ ಬಕ್ಕಾರು ಮನೆ ನಿವಾಸಿ ದಿ. ಎಂ ಮಿತ್ರ ಸೇನ ಶೆಟ್ಟಿ ಅವರ ಧರ್ಮಪತ್ನಿಯಾಗಿರುವ ಪಿ ಗುಲಾಬಿ ಅಮ್ಮನವರು ಓರ್ವ ಪುತ್ರ ,ಮೂವರು ಪುತ್ರಿಯರನ್ನು ಅಗಲಿದ್ದಾರೆ. ಧಾರ್ಮಿಕವಾಗಿ ಸಕ್ರಿಯರಾಗಿದ್ದ ಅವರು ಸಮ್ಮೇದ...

ಸುಳ್ಯ ; ಅಕ್ರಮ ಮದ್ಯ ವಶ : ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ ಜೂನಿಯರ್ ಕಾಲೇಜು ಬಳಿಯ ಮನೆಯೊಂದರ ಸಮೀಪ ಜೀಪಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 53,700 ರೂ. ಮೌಲ್ಯದ ಮದ್ಯವನ್ನು ಸುಳ್ಯ ಪೊಲೀಸರು ದ.28 ರಂದು ವಶಪಡಿಸಿಕೊಂಡಿದ್ದಾರೆ.ಆರೋಪಿ ಡಿನೋಹಿ ಎಂಬುವರನ್ನು ಪೊಲೀಸರು ಸೆರೆಹಿಡಿದಿದ್ದು, ಉಳಿದ ಇಬ್ಬರು ಆರೋಪಿಗಳಾದ ಜ್ಞಾನಪ್ರಕಾಶ್ ಅಲಿಯಾಸ್ ಸಲಾಂ ಹಾಗೂ ಡಯಾನ ಎಂಬುವವರು ತಪ್ಪಿಸಿಕೊಂಡಿರುವುದಾಗಿ ಪೋಲೀಸರು ತಿಳಿಸಿದ್ದಾರೆ.ಆರೋಪಿ ಡಿನೋಹಿ ಎಂಬವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಧೀಶರು...

ಅಬಕಾರಿ ಇಲಾಖೆಯ ಭರ್ಜರಿ ಬೇಟೆ – ಹಾಸ್ಟೆಲ್ ನಲ್ಲಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ – ಆರೋಪಿ ಪರಾರಿ

ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರಾಗಿದ್ದ ಪಲ್ಲತ್ತೂರಿನ ಮೊಯಿದ್ದೀನ್ ಕುಂಞಿ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಮೊಯಿದ್ದೀನ್ ಕುಂಞಿ ಎಂಬವರು ಕೊಠಡಿ ಬಾಡಿಗೆ ಪಡೆದು ಕುಟುಂಬದೊಂದಿಗೆ ವಾಸವಿದ್ದರು. ಇಲ್ಲಿ ಗಾಂಜಾ ಸಂಗ್ರಹಿಸಿ‌...

ಕೊಡಗು ಸಂಪಾಜೆ : ಕ್ರಿಕೆಟ್ ಪಂದ್ಯಾಟ

ಕೊಡಗು ಸಂಪಾಜೆ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜ.2 ರಂದು ಪಯಶ್ವಿನಿ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ನೆರವೇರಿತು. ಈ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಯಶ್ವಿನಿ ಯುವಕ ಮಂಡಲ ಸಂಪಾಜೆ ಹಾಗೂ ದ್ವಿತೀಯ ಸ್ಥಾನವನ್ನು ಆದರ್ಶ ಪ್ರೆಂಡ್ಸ್ ಚೆಡಾವು ಪಡೆದುಕೊಂಡಿದೆ.

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಮಹಾಸಭೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ (ರಿ) ಸುಳ್ಯ ಇದರ ವಾರ್ಷಿಕ ಮಹಾ ಸಭೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಜರಗಿತು.ಸಂಘದ ಮಹಾ ಸಭೆಯ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಗೋಪಾಲಕೃಷ್ಣ ಬೋರ್ಕರ್ , ಬಾಲಚಂದ್ರ ಅಡ್ಕಾರ್, ಶಂಕರ...

ನಾಲ್ಕೂರು :- ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಚಪ್ಪರ ಮಹೂರ್ತ

ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಜ.13 ರಿಂದ ಜ.16 ರವರೆಗೆ ಶ್ರೀ ದೈವಗಳ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಅದರ ಪ್ರಯುಕ್ತ ಜ.01 ರ ಶನಿವಾರದಂದು ಚಪ್ಪರ ಮಹೂರ್ತ ಮಾಡಲಾಯಿತು.ಈ ಸಂದರ್ಭದಲ್ಲಿ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಐನೆಕಿದು ನಿಸರ್ಗ ಯುವಕ ಮಂಡಲ ಪದಗ್ರಹಣ – ಅಧ್ಯಕ್ಷ ಅಜಿತ್ ಕಲ್ಲೇರಿ, ಕಾರ್ಯದರ್ಶಿ ಭರತ್ ವಾಡ್ಯಪ್ಪನ ಮನೆ

ನಿಸರ್ಗ ಯುವಕ ಮಂಡಲ ಐನೆಕಿದು ಇದರ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸಾಮಾನ್ಯ ಸಭೆಯು ಜ.02 ರಂದು ಐನೆಕಿದು ಶಾಲೆಯಲ್ಲಿ ನಡೆಯಿತು.2022ನೇ ಸಾಲಿನ ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾಗಿ ಅಜಿತ್ ಕಲ್ಲೇರಿ, ಉಪಾಧ್ಯಕ್ಷರಾಗಿ ಅಶೋಕ್ ಐಪಿನಡ್ಕ, ಕಾರ್ಯದರ್ಶಿಯಾಗಿ ಭರತ್ ವಾಡ್ಯಪ್ಪನ ಮನೆ, ಜೊತೆ ಕಾರ್ಯದರ್ಶಿಯಾಗಿ ಕುಶನ್ ನೆಕ್ರಾಜೆ, ಕೋಶಾಧಿಕಾರಿಯಾಗಿ ಸುಹಾಸ್ ಕೋಟೆಬೈಲು,...

ಕಳಂಜ: ಅಲ್ ಫಲಾಹ್ ಯೂತ್ ಕ್ಲಬ್ ವತಿಯಿಂದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

ಕಳಂಜ ಅಲ್ ಫಲಾಹ್ ಯೂತ್ ಕ್ಲಬ್ ಸದಸ್ಯರಿಂದ ಗ್ರಾಮದ ಮಣಿಮಜಲು ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿ ಮಾಡಲಾಯಿತು. ಈ ಶ್ರಮದಾನದಲ್ಲಿ ಅಲ್ ಫಲಾಹ್ ಯೂತ್ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಭಾಗಿಗಳಾಗಿದ್ದರು.
Loading posts...

All posts loaded

No more posts

error: Content is protected !!