- Sunday
- March 15th, 2026
ಬಳ್ಪದ ಎಣ್ಣೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.22 ರಂದು ಶ್ರಮದಾನ ನಡೆಸಲಾಯಿತು. ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಹಾಗೂ ಶಿಕ್ಷಕ ವೃಂದದವರು ಶ್ರಮದಾನದಲ್ಲಿ ಭಾಗವಹಿಸಿದರು.
ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವೆಂಕಪ್ಪಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಪಿ.ಜಿ.ಎಸ್.ಎನ್. ಪ್ರಸಾದರಿಗೆ ಅಭಿನಂದನಾ ಕಾರ್ಯಕ್ರಮ ಜ. 21ರಂದು ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತರನ್ನು ಸಂಘದ ಮಾಜಿ ಉಪಾಧ್ಯಕ್ಷ ಕೆದ್ಲ...
ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಪಡ್ಕ ದಲ್ಲಿರುವ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.27 ಬುಧವಾರ ದಂದು ವಾರ್ಷಿಕ ನೇಮೋತ್ಸವ ನಡೆಯಲಿದೆ ಹಾಗೂ ಮಧ್ಯಾಹ್ನ 1:00 ಗಂಟೆಯಿಂದ ದೈವಸ್ಥಾನದ ವಠಾರದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ವರದಿ:-✍ಉಲ್ಲಾಸ್ ಕಜ್ಜೋಡಿ
ಪೈಕ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ಹಾಗೂ ಅಜ್ಜಿ ದೈವದ ಸಾನ್ನಿಧ್ಯಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಜ .19 ಹಾಗೂ 20 ರಂದು ನಡೆಯಿತು . ಜ.19 ರಂದು ತಂತ್ರಿಗಳ ಸ್ವಾಗತ ಕಾರ್ಯಕ್ರಮ ,ಶಿಲ್ಪಿಗಳಿಂದ ದೈವಸ್ಥಾನ ಬಿಟ್ಟುಕೊಡುವ ಕಾರ್ಯಕ್ರಮ ,ಸಾಯಂಕಾಲ ದೇವತಾ ಪ್ರಾರ್ಥನೆ ,ಪುಣ್ಯಾಹವಾಚನ ಸಪ್ತಶುದ್ದಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ,...
ಕೊಲ್ಲಮೊಗ್ರ ಬಸ್ ತಂಗುದಾಣ ಮತ್ತು ಸಾರ್ವಜನಿಕ ಎರಡು ಶೌಚಾಲಯ ಹಾಗೂ ಅದರ ಸುತ್ತ ಮುತ್ತ ಸ್ವಚ್ಫತೆಯನ್ನು ಗ್ರಾಮಸ್ಥರು ಹಾಗೂ ಗ್ರಾ.ಪಂ ಸದಸ್ಯರುಗಳು ನೇತೃತ್ವದಲ್ಲಿ ಜ.22 ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಉದಯ ಕೊಪ್ಪಡ್ಕ ಮತ್ತು ಮಾಧವ ಚಾಂತಾಳ ಹಾಗೂ ಬೂತ್ ಸಮಿತಿ ಕಾರ್ಯದರ್ಶಿ ಉದಯ ಶಿವಾಲ, ಗಣೇಶ್ ಶಿವಾಲ, ರವೀಶ್ ಅಣಾಜೆ, ನಾಗೇಶ...
ಸಾಮಾಜಿಕ ಜಾಲತಾಣದ ಫೇಸ್ಬುಕ್ ಖಾತೆಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಅವಹೇಳನಕಾರಿ ಬರಹವನ್ನು ವೈರಲ್ ಮಾಡಿರುವ ವ್ಯಕ್ತಿಅನಿಲ್ ಕುಮಾರ್ ಶೆಟ್ಟಿ ಪೆಡ್ಡುರ್ ಎಂಬಾತನ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಜ.22 ರಂದು ಸುಳ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಮಾನಿ ಬಳಗದ ವತಿಯಿಂದ ಸುಳ್ಯ ತಹಶೀಲ್ದಾರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವರ ಮುಖಾಂತರ ದೂರು...
ಹಲ್ಲುಗಳು ಇತರ ಅಂಗಗಳಂತೆ ಶ್ರೇಷ್ಠ ಅಂಗವಾಗಿದೆ. ಅದರ ರಕ್ಷಣೆ ಅಗತ್ಯ ಎಂದು ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕರುಣಾಕರ ಕೆ.ವಿ ಹೇಳಿದರು. ಇವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜ.22ರಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಬಾಯಿ...
ಪೆರುವಾಜೆ ಗ್ರಾಮದ ಅರ್ನಾಡಿ ಹತ್ತಿರ ಚಿರತೆಯೊಂದು ಓಡಾಟ ನಡೆಸಿದ ವಿಚಾರ ತಿಳಿದುಬಂದಿದೆ. ಗ್ರಾಮಸ್ಥರು ಜಾಗರೂಕರಾಗಿದ್ದು ರಾತ್ರಿ ಪ್ರಯಾಣ, ತೋಟಗಳಿಗೆ ರಾತ್ರಿ ನೀರು ಬಿಡುವ ಕೃಷಿಕರು ಎಚ್ಚರ ವಹಿಸುವಂತೆ ಹಾಗೂ ಚಿರತೆ ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಬೆಳ್ಳಾರೆ ಶಾಖೆಯ ಉಪವಲಯಾರಣ್ಯಾಧಿಕಾರಿ ಪ್ರಸಾದ್.ಕೆ.ಜೆ ವಿನಂತಿಸಿದ್ದಾರೆ. ಸಂಪರ್ಕ ಸಂಖ್ಯೆ : 9480108532, 9480527590.
ಭಾರತ ಸರಕಾರದ ವತಿಯಿಂದ ಗ್ರಾಮೀಣ ವಸತಿಪ್ರದೇಶದ ಆಸ್ತಿಗಳನ್ನು ಡ್ರೋನ್ ತಂತ್ರಜ್ಞಾನದ ಮೂಲಕ ಸ್ವಾಮಿತ್ವ ಯೋಜನೆಯಡಿ ಅಳತೆಕಾರ್ಯ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಜ.22 ರಂದು ಪೂರ್ವಾಹ್ನ 11.00 ಗಂಟೆಗೆ ಸರಿಯಾಗಿ ಅಜ್ಜಾವರ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ವಿಶೇಷ ಗ್ರಾಮಸಭೆಯನ್ನು ಕರೆಯಲಾಗಿದೆ. ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು, ಸ್ತ್ರೀಶಕ್ತಿ,...
ಜ್ಞಾನ ಮಂದಾರ ಅಕಾಡೆಮಿ ವತಿಯಿಂದ ನೀಡುವ ಸಮಾಜರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವೆಂಕಟರಮಣ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ದೇವಚಳ್ಳ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ರವರನ್ನು ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ...
Loading posts...
All posts loaded
No more posts
