ಕಡಬ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಬೃಹತ್ ಹಕ್ಕೊತ್ತಾಯ ಸಭೆ

ಕಡಬ ತಾಲೂಕಿನ ಹಲವು ಗ್ರಾಮಗಳು ಕಳೆದ 40-50 ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಜೀವನ ಸಾಗಿಸುತ್ತಿರುವ ರೈತರ ಜಮೀನುಗಳನ್ನು ಅಕ್ರಮ-ಸಕ್ರಮದ ಅಡಿಯಲ್ಲಿ ಅರ್ಜಿ ಕೊಟ್ಟರೂ ಈವರೆಗೆ ಮಂಜೂರು ಆಗದೇ ಇರುವುದರಿಂದ ಅವರ ಜಮೀನುಗಳನ್ನು ಯಾವುದೇ ನಿಭಂದನೆ ಇಲ್ಲದೇ ಮಂಜೂರುಗೊಳಿಸಬೇಕು. ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಿದ್ದರೂ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡದೇ ಇರುವುದರಿಂದ ಅರ್ಹರಿಗೆ...

ಕಡಬ: ಶಾಲೆಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ದುರಂತ

ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ತುರ್ತು ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಅ.25ನೇ ಸೋಮವಾರ ಸಂಭವಿಸಿದೆ.ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್...
Ad Widget

ಉಳುವಾರು ದೇವಣ್ಣ ಗೌಡ ನಾಪತ್ತೆ – ದೂರು

ಅರಂತೋಡು ಗ್ರಾಮದ ಉಳುವಾರು ನಿವಾಸಿ ದೇವಣ್ಣ ಗೌಡ ಅವರು ಅ.24 ರ ಮುಂಜಾನೆಯಿಂದ ಕಾಣೆಯಾಗಿದ್ದಾರೆಇವರು ಕಂಡಲ್ಲಿ 9741113650,8762416256, 9591370038 ಈ ಮೊಬೈಲ್ ನಂಬರ್ ಗೆ ಮಾಹಿತಿ ನೀಡಲು ಕೋರಲಾಗಿದೆ.

ಜೇನು ಕೃಷಿ ವಿಭಾಗದ ಸಹಾಯಕ ತಂತ್ರಜ್ಞೆಯಾಗಿ ಶಿಲ್ಪಾ.ಕೆ.ವಿ ನೇಮಕ

ಕಡಬ ಸರಕಾರಿ ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ಕೊರಗಪ್ಪಗೌಡ ಮತ್ತು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ದಮಯಂತಿ ಜಿ ದಂಪತಿಗಳ ಪುತ್ರಿ ಶಿಲ್ಪಾ.ಕೆ.ವಿ, ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗದ ನಂತರ ಕರ್ನಾಟಕ ಸರಕಾರದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ರಿಸರ್ಚ್ ಸೆಂಟರ್ ನಲ್ಲಿ ಜೇನು ಕೃಷಿ ವಿಭಾಗದ ಸಹಾಯಕ...

ಕೊಲ್ಲಮೊಗ್ರು :- ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮಪಂಚಾಯತ್ ಕೊಲ್ಲಮೊಗ್ರು ಇದರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ದ ಪ್ರಯುಕ್ತ ಕೊಲ್ಲಮೊಗ್ರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಅ.23 ರಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಿತು.ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಪಶುವೈದ್ಯ ಡಾ.ವೆಂಕಟಾಚಲಪತಿ...

ಶ್ರೀಮತಿ ಸೀತಮ್ಮ ಕಳಂಜ ನಿಧನ

ಕಳಂಜ ಗ್ರಾಮದ ಕಳಂಜ ಮನೆ ಶ್ರೀಮತಿ ಸೀತಮ್ಮ ಕಳಂಜ ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.ಮೃತರು ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನಳಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕರ್ನಾಟಕ ಶಾಸ್ತ್ರೀಯ ಸ್ಪರ್ಧೆಯಲ್ಲಿ ಪೂರ್ಣಿಮಾ ಮಡಪ್ಪಾಡಿಯವರಿಗೆ ದ್ವಿತೀಯ ಸ್ಥಾನ

ದಾವಣಗೆರೆಯಲ್ಲಿ ಅ.23 ರಂದು ನಡೆದ ಸರಕಾರಿ ನೌಕರರ ರಾಜ್ಯ ಮಟ್ಟದ ಕರ್ನಾಟಕ ಶಾಸ್ತ್ರೀಯ ಸ್ಪರ್ಧೆಯಲ್ಲಿ ಶ್ರೀಮತಿ ಪೂರ್ಣಿಮಾ ಮಡಪ್ಪಾಡಿ ಯವರು ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರು ಸ.ಉ.ಹಿ. ಪ್ರಾಥಮಿಕ ಶಾಲೆ ಜಾಲ್ಸೂರು(ಅಡ್ಕಾರು) ಸುಳ್ಯ ತಾಲೂಕು ಇಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ಶ್ರೀ ದಿನೇಶ್ ಅಂಬೆಕಲ್ಲು ನ್ಯಾಯವಾದಿಗಳು & ನೋಟರಿ ಇವರ ಪತ್ನಿ ಹಾಗೂ ಮಾಧವ...

ನವಚೇತನ ಯುವಕ ಮಂಡಲ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ

ನವಚೇತನ ಯುವಕ ಮಂಡಲ (ರಿ )ಬೊಳುಬೈಲು, ಕೆ. ಎಂ. ಸಿ. ಆಸ್ಪತ್ರೆ ಅತ್ತಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾಲ್ಸೂರು ವಲಯ, ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರ ಜಾಲ್ಸೂರು ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರವು ವಿವೇಕಾನಂದ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಸುಧಾಕರ ಕಾಮತ್, ಸಂಚಾಲಕರು ವಿವೇಕಾನಂದ ವಿದ್ಯಾಸಂಸ್ಥೆ, ವಿನೋಬನಗರ ಜಾಲ್ಸೂರು ನೆರವೇರಿಸಿದರು....

ಅ.30 : ವಳಲಂಬೆಯಲ್ಲಿ ಗಾನಾರ್ಚನೆ

ಗುತ್ತಿಗಾರು: ಯಕ್ಷಗಾನ ಕಲೆಯ ಪೋಷಣೆ ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ ಕಲಾವಿದರನ್ನೂ ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಅ.30 ರಂದು ಮಧ್ಯಾಹ್ನ 2.30 ರಿಂದ "ಗಾನಾರ್ಚನೆ" ನಡೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ...

ಐನೆಕಿದು : ಶ್ರಮದಾನ

ಸುಬ್ರಹ್ಮಣ್ಯ, ಅಜ್ಜಿಗುಡ್ಡೆ, ನೂಜಿಬೆಟ್ಟು ಮೂಲಕ ಐನೆಕಿದು ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿ ಅ.24 ರಂದು ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿ ರಸ್ತೆಯನ್ನು ಜನಸಂಚಾರಕ್ಕೆ ಸುಗಮಗೊಳಿಸಲಾಯಿತು. ಈ ಸಂದರ್ಭದಲ್ಲಿ ಊರಿನ ಜನರು ಈ ಶ್ರಮದಾನದಲ್ಲಿ ಭಾಗಿಯಾಗಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!