- Tuesday
- August 11th, 2026
ಐನೆಕಿದು ಗ್ರಾಮದ ಪೈಲಾಜೆಯಲ್ಲಿ ಅ.11 ರಂದು ಸಂಜೆ ಬಾಳುಗೋಡಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಜೀಪೊಂದಕ್ಕೆ ಸೈಡ್ ನೀಡುವ ಸಂದರ್ಭದಲ್ಲಿ ಚರಂಡಿಗಿಳಿದ ಘಟನೆ ನಡೆಯಿತು. ನಂತರ ಜೆ.ಸಿ.ಬಿ ಬಳಸಿ ಬಸ್ಸನ್ನು ಚರಂಡಿಯಿಂದ ಮೇಲೆತ್ತಲಾಯಿತು ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಬೆಳ್ಳಾರೆ ಗ್ರಾಮದ ದರ್ಖಾಸು ಬಳಿಯ ಚೀಮುಳ್ಳು ಎಂಬಲ್ಲಿ ಕ್ಷಯ ರೋಗದಿಂದ ಬಳಲುತ್ತಿದ್ದ ಓರ್ವ ವ್ಯಕ್ತಿಗೆ ಸೂಕ್ತ ಸೂರು ವ್ಯವಸ್ಥೆ ಮತ್ತು ಊಟ ಉಪಾಹಾರದ ಸೂಕ್ತ ವ್ಯವಸ್ಥೆ ಇಲ್ಲದಿರುವ ಬಗ್ಗೆ ಮನಗಂಡ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಜೇಸಿ ಲೋಕೇಶ್ ತಂಟೆಪ್ಪಾಡಿಯವರು ಡಾ।। ಎಸ್ ನಾರಾಯಣ್ ಭಟ್ ಬೆಳ್ಳಾರೆ ಪ್ರತಿಷ್ಠಾನದ ನೆರವಿನ ಅಂಬ್ಯುಲೆನ್ಸ್...
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್, ಅಂಚೆ ಇಲಾಖೆ ಪುತ್ತೂರು ವಿಭಾಗ ಹಾಗೂ ಉಪವಿಭಾಗ ಸುಳ್ಯ ಇವುಗಳ ಜಂಟಿ ಸಹಯೋಗದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಅ.16 ರಂದು ಬೆಳಗ್ಗೆ 10:00 ಗಂಟೆಯಿಂದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಯ ವಿಶೇಷ ಶಿಬಿರ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಗ್ರಾಮಪಂಚಾಯತ್ ಅದ್ಯಕ್ಷರಾದ ಜಯಂತ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮಡಪ್ಪಾಡಿಒಕ್ಕೂಟದ ಬಾಳಿಕಳ ಬೂಡು ಉಳ್ಳಾಕುಲು ಮತ್ತು ಪದ್ಮಾಂಬ ದೇವಿ ಹಾಗೂ ಪರಿವಾರ ದೈವಗಳ ದೈವ ಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರು ಸಹಾಯಧನ 1ಲಕ್ಷ ಮಂಜೂರು ಮಾಡಿದ್ದು ಮಂಜೂರಾದ ರೂ.1,00,000/- ಮೊತ್ತದ ಡಿಡಿ ಯನ್ನು ತಾಲೂಕಿನ...
j ಮಂಡೆಕೋಲು ಗ್ರಾಮದ ಮುರೂರು ಕೃಷ್ಣ ಬೆಳ್ಚಪ್ಪಾಡ ಇವರ ತೋಟಕ್ಕೆ ಕಳೆದ ರಾತ್ರಿ ದಾಳಿ ನಡೆಸಿದ ಕಾಡಾನೆ ಹಿಂಡು ಬಾಳೆ,ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಈ ಹಿಂಡಿನಲ್ಲಿ ಮರಿಯಾನೆಯೊಂದು ಸೇರಿದಂತೆ ನಾಲ್ಕು ಆನೆಗಳಿವೆ ಎಂದು ತಿಳಿದುಬಂದಿದೆ.
ಯಕ್ಷರಂಗದ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ರವರು ಅ.12ರಂದು ಬೆಳಗ್ಗೆ ವಿಧಿವಶರಾಗಿದ್ದು, ಅವರಿಗೆ 66 ವರ್ಷ ವಯಸ್ಸಾಗಿತ್ತು.ಇವರು 1955 ರಲ್ಲಿ ಪದ್ಯಾಣ ತಿರುಮಲೇಶ್ವರ ಭಟ್ ಹಾಗೂ ಸಾವಿತ್ರಿ ದಂಪತಿಗಳ ಮೂರನೇ ಮಗನಾಗಿ ಜನಿಸಿದ್ದು, ಕಳೆದ 40 ವರ್ಷಗಳಿಂದ ತೆಂಕುತಿಟ್ಟಿನ ಯಕ್ಷಗಾನ ಭಾಗವತಿಕೆ ಕ್ಷೇತ್ರದಲ್ಲಿ ಅಗ್ರಗಣ್ಯ ಕಲಾವಿದರಾಗಿ ಪ್ರಸಿದ್ದರಾಗಿದ್ದಾರೆ.ಪದ್ಯಾಣ ಗಣಪತಿ ಭಟ್ ಅವರು ಚೌಡೇಶ್ವರಿ, ಕುಡಾವು,...
ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಭಜನಾ ತಂಡದ ವಿದ್ಯಾರ್ಥಿಗಳಿಂದ ನವರಾತ್ರಿ ಪ್ರಯುಕ್ತ ಶ್ರೀರಾಮ ಭಜನಾ ಮಂಡಳಿ ಎಣ್ಮೂರು ಇಲ್ಲಿ ಕುಣಿತ ಭಜನೆ ಸೇವೆ ನಡೆಸಲಾಯಿತು. ಶಾಲಾ ಶಿಕ್ಷಕ ಶಿವಪ್ರಸಾದ್ ಜಿ ಇವರ ನೇತೃತ್ವದಲ್ಲಿ ಕಣ್ವಶ್ರೀ ಕಲಾ ಕೇಂದ್ರ ಕಾಣಿಯೂರು ಇದರ ಸಂಚಾಲಕರಾದ ಸದಾನಂದ ಆಚಾರ್ಯ ಇವರ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು...
ಮಿತ್ರ ಮಂಡಲ ನಾಗತೀರ್ಥ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.7 ರಂದು ದೀಪಾವಳಿ ಕಪ್ ಕ್ರಿಕೆಟ್ ಪಂದ್ಯಾಟ ನಡೆಸುವ ಬಗ್ಗೆ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯಲ್ಲಿ ಮಿತ್ರ ಮಂಡಲ ನಾಗತೀರ್ಥ ಇದರ ಅದ್ಯಕ್ಷ ನಿತಿನ್ ಕುಮಾರ್ ನಾಗತೀರ್ಥ ಕಾರ್ಯದರ್ಶಿ ನವೀನ್ ನಾಗತೀರ್ಥ, ಕ್ರೀಡಾ ಕಾರ್ಯದರ್ಶಿ ಹರ್ಷಿತ್ ಸಂಪ, ಮಿತ್ರ...
ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಹಿಂದೂ ಮುಸ್ಲಿಮರಲ್ಲಿ ಒಡಕು ಉಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಏದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ...
Loading posts...
All posts loaded
No more posts
