- Tuesday
- August 11th, 2026
ಕಾರ್ಯನಿಮಿತ್ತ ಅ.5 ರಂದು ಸುಳ್ಯಕ್ಕೆ ಆಗಮಿಸಿದ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರುಶನ ಪಡೆದರು. ಬಳಿಕ ಶ್ರೀ ಹೊಸಳಿಗಮ್ಮ ದೈವದ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಕ್ಷೇತ್ರದಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.ಇವರ ಜತೆಗೆ ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಮಿಥುನ್ ರೈ,...
ಮರ್ಕಂಜ ಗ್ರಾಮದ ದಾಸರಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ಇ- ಕಲಿಕಾ ದೃಷ್ಟಿಕೋನದಿಂದ ಆರಂಭವಾಗಿರುವ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಅ.8 ರಂದು ನಡೆಯಲಿದೆ. ಇಲ್ಲಿ ಸಂಪೂರ್ಣ ಸೌರಶಕ್ತಿಯಿಂದ ಸ್ಮಾರ್ಟ್ ಕ್ಲಾಸ್ ನಡೆಯಲಿದೆ ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಪದ್ಮನಾಭ ಎನ್.ವಿ., ಹಾಗೂ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಆರಂತೋಡು ಗ್ರಾಮದ ಅಡ್ತಲೆ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.5 ರಂದು ನಡೆಯಿತು. ಸುಳ್ಯ ಬಿ. ಜೆ. ಪಿ. ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಬೂತ್ ಅಧ್ಯಕ್ಷರಾದ ಲೋಹಿತ್ ಮೇಲೆ ಅಡ್ತಲೆಯವರ ಮನೆಗೆ ನಾಮಫಲಕ ಅಳವಡಿಸಿ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿ "ಕೇಂದ್ರ ಸರಕಾರದ ರಾಜ್ಯ ಸರಕಾರದ ಯೋಜನೆಗಳ ಸೌಲಭ್ಯಗಳನ್ನು ಪ್ರತಿ...
ಇಂದು ಸುಳ್ಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹೋಗಿ ನಂತರ ನಿಂತಿಕಲ್ಲಿನ ಎಂ.ಮಾಧವ ಗೌಡ ಕಾಮಧೇನು ಅವರ ಧರ್ಮಶ್ರೀ ಆರ್ಕೇಡ್ ನಲ್ಲಿರುವ ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದರು. ಉದ್ಯಮಿ ಹಾಗೂ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ , ಮಯೂರ ಗೋಲ್ಡ್ ಮಾಲಕ ದೀಕ್ಷಿತ್...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮಾವಿನಕಟ್ಟೆ ಎಂಬಲ್ಲಿ ಕೆನರಾ ಬ್ಯಾಂಕಿನ ಸಹಯೋಗ ದೊಂದಿಗೆ ನೂತನ ಸೇವಾ ಕೇಂದ್ರವನ್ನು ಉದ್ಘಾಟನೆಗೊಂಡಿತು . ದೇವಚಳ್ಳ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಉದ್ಘಾಟನೆ ನೆರವೇರಿಸಿದರು .ಈ ಸಂದರ್ಭ ,ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ರಾಧಾಕೃಷ್ಣ ಶ್ರೀ ಕಟೀಲ್ ,ಪಂಚಾಯತ್...
ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ. ಕೇವಳ ಹೂವಪ್ಪ ಗೌಡರವರು ಮಧ್ಯಾಹ್ನ ವೇಳೆ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಹಬ್ಬಿದ್ದ ಬಳ್ಳಿಗೆ ಅವರು ಆಕಸ್ಮಿಕವಾಗಿ ಸಿಲುಕಿದರೆನ್ನಲಾಗಿದೆ....
ಹಿಂದೂ ಜಾಗರಣ ವೇದಿಕೆ ಕಣ್ಕಲ್ ಕೇನ್ಯ ಇದರ ವತಿಯಿಂದ ಅ.3ರಂದು ಸ್ವಚ್ಚತಾ ಶ್ರಮದಾನ ನಡೆಸಲಾಯಿತು. ನೇಲ್ಯಡ್ಕದಿಂದ ಐನಡ್ಕ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಇರುವ ಪೊದೆಗಳನ್ನು ಕಳೆ ಕೊಚ್ಚುವ ಯಂತ್ರದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಶ್ರಮದಾನದಲ್ಲಿ ಜಾಗರಣ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಅಡ್ತಲೆ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಸ್ಪಂದನ ಗೆಳೆಯರ ಬಳಗ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಡೆಯಿತು. ನಿವೃತ್ತ ಯೋಧ ಕಮಲಾಕ್ಷ ಪಿಂಡಿಮನೆಯವರು ಗಾಂಧಿ ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ. ಅಧ್ಯಕ್ಷ ಗೋಪಾಲಕೃಷ್ಣ ಪಿಂಡಿಮನೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಜಯಾ ಲೋಹಿತ್...
ದೇವಚಳ್ಳ (ಎಲಿಮಲೆ) ಸ.ಹಿ.ಪ್ರಾ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಮಾನಂದ ಎಲಿಮಲೆ, ಉಪಾಧ್ಯಕ್ಷರಾಗಿ ಸವಿತಾ ಸಿ. ಆಯ್ಕೆಯಾದರು. ಸದಸ್ಯರಾಗಿ ಲಲಿತಾ ಎನ್., ಸುನೀತಾ ಎಂ.ಆರ್., ಆಯಿಷಾ, ದಿವ್ಯಾ ಬಿ.ಎಲ್., ಸುನಂದ, ಕೋಮಲಾಂಗಿ, ವನಿತಾ ಪಿ., ಸೂಫಿ ಜೆ.ಎಂ., ಪುರುಷೋತ್ತಮ ಎಸ್.,ಓಂಪ್ರಸಾದ್ ಕೆ., ಜಯಪ್ರಕಾಶ್ ಕೆ., ಜಯಾನಂದ ಪಿ., ಜಯಂತ ಹರ್ಲಡ್ಕ, ಕುಸುಮಾಧರ ಎ.,...
Loading posts...
All posts loaded
No more posts
