ಪಂಜ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ನಿವೃತ್ತಿ

ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ರವರು ಸೆ.30ರಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಸುಳ್ಯ ತಾಲೂಕು ಬಾಳುಗೋಡು ಗ್ರಾಮದ ಕಿರಿಭಾಗ ಶಿವಪ್ಪ ಮಾಸ್ತರ್ ಮತ್ತು ಅಮ್ಮಣಿ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳುಗೋಡು, ಪಂಜ, ಸುಬ್ರಹ್ಮಣ್ಯದಲ್ಲಿ ಪಡೆದು, ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ...

ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸಾವಿತ್ರಿ ಕೆ. ನಿವೃತ್ತಿ

ಶ್ರೀ ಸುಬ್ರಹ್ಮಣ್ಯೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸಾವಿತ್ರಿ ಕೆ. ರವರು ಸೆ.30ರಂದು ಸೇವಾ ನಿವೃತ್ತಿ ಹೊಂದಿದರು. 24.10.1986 ರಲ್ಲಿ ವಾಣಿಜ್ಯ ವಿಭಾಗ ಆರಂಭಗೊಂಡಾಗ ಇಲ್ಲಿಗೆ ಉಪನ್ಯಾಸಕರಾಗಿ ಸೇರ್ಪಡೆಯಾದ ಇವರು ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 2016 ಡಿ.03 ರಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತಿದ್ದಾರೆ. ದ.ಕ. ಜಿಲ್ಲಾ ಪಿಯು ಪ್ರಿನ್ಸಿಪಾಲ್ ಅಸೋಸಿಯೇಷನ್ ಸುಳ್ಯ...
Ad Widget

ಐವರ್ನಾಡು ಪಾಲೆಪ್ಪಾಡಿ ಪೆರ್ಲಂಪಾಡಿ ರಸ್ತೆ ದುರಾವಸ್ಥೆ ಬಗ್ಗೆ ನಾಗರಿಕರ ಆಕ್ರೋಶ – ಪಿಡಬ್ಲ್ಯೂಡಿ ರಸ್ತೆಯಾಗಿ ಪರಿವರ್ತನೆಯಾಗಿದ್ದು ಅಭಿವೃದ್ಧಿಯಾಗಲಿದೆ – ಬಾಲಕೃಷ್ಣ ಕೀಲಾಡಿ

ಐವರ್ನಾಡು ಮುಚ್ಚಿನಡ್ಕ ಪಾಲೆಪ್ಪಾಡಿ-ಪಾಂಬಾರು-ಅಮಲ-ಪೆರ್ಲಂಪ್ಪಾಡಿ ಮೂಲಕ ಪುತ್ತೂರಿಗೆ ಹೋಗುವ ರಸ್ತೆ ಸುಮಾರು10-12 ವರ್ಷಗಳಿಂದ ಮರು ಡಾಮರೀಕರಣ ಆಗದೇ ಅವ್ಯವಸ್ಥೆಯಿಂದ ಕೂಡಿದ್ದು ಜನ ಸಂಚಾರ ಮಾಡಲು ಹರಸಾಹಸ ಪಡುವಂತಾಗಿದೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲ . ಮೋರಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣದಿಂದ ಮಳೆಗಾಲದಲ್ಲಿ ನೀರೆಲ್ಲಾ ರಸ್ತೆಯಲ್ಲಿ ಹರಿಯುವಂತಾಗಿದೆ . ಬೀದಿ ದೀಪದ ವ್ಯವಸ್ಥೆ ಇಲ್ಲದೇ ರಾತ್ರಿಯ ವೇಳೆ...

ಗುತ್ತಿಗಾರು : ಶ್ರೀ ಮಂಜುಶ್ರೀ ಜನರಲ್ ಸ್ಟೋರ್ ಶುಭಾರಂಭ

ಗುತ್ತಿಗಾರಿನ ಕೆಳಗಿನ ಪೇಟೆಯಲ್ಲಿರುವ ಎಸ್ ಎಂ ಎಸ್ ಜಿ ಕಾಂಪ್ಲೆಕ್ಸ್ ನಲ್ಲಿ ಮೋನಪ್ಪ ಕಾಜಿಮಡ್ಕ ( ಮೆಟ್ಟಿನಡ್ಕ) ಮಾಲಕತ್ವದ ಶ್ರೀ ಮಂಜುಶ್ರೀ ಜನರಲ್ ಸ್ಟೋರ್ ಸೆ.27 ರಂದು ಶುಭಾರಂಭಗೊಂಡಿತು. ಗ್ರಾ.ಪಂ .ಮಾಜಿ ಅಧ್ಯಕ್ಷ, ಕಾಂಪ್ಲೆಕ್ಸ್ ಮಾಲಕರಾದ ವೆಂಕಟ್ ವಳಲಂಬೆ ದೀಪ ಬೆಳಗಿ ಉದ್ಘಾಟಿಸಿದರು. ಇಲ್ಲಿ ಉತ್ತಮ ಗುಣಮಟ್ಟದ ದಿನಸಿ ಸಾಮಾಗ್ರಿಗಳು ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ....

ಕನಕಮಜಲು : ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೊಬ್ಬರು ರಾತ್ರಿ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕನಕಮಜಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗ್ರಾಮದ ಪೆರುಂಬಾರು ನಿವಾಸಿ ಜಯರಾಮ ಗೌಡ(52) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಜಯರಾಮ ಗೌಡರಿಗೆ ಓಡಾಡುವ ಅಭ್ಯಾಸವಿದ್ದು, ನಿನ್ನೆ ತಡರಾತ್ರಿಯೂ ಮನೆಯಿಂದ ಹೊರಟು ಹೋಗಿದ್ದರೆನ್ನಲಾಗಿದೆ. ಬಳಿಕ ಮನೆಗೆ ಬಾರದಿದ್ದ ಅವರನ್ನು ಇಂದು ಮುಂಜಾನೆ ಹುಡುಕಾಟ ನಡೆಸಿದ್ದು,...

ಪೆರುವಾಜೆ: ಬಿಜೆಪಿಯಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ

ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ. ಪಿ. ನಡ್ಡರವರ ಸೂಚನೆಯಂತೆ ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಪೆರುವಾಜೆ ಗ್ರಾಮದ ಬೂತ್ ಸಂಖ್ಯೆ 76 ರ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ಮಠತ್ತಡ್ಕ ರವರ ಮನೆಯಲ್ಲಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರಿಂದ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಸೆ. 28 ರಂದು...

ಐವರ್ನಾಡು : ಮಕ್ಕಳ ಮಾನಸಿಕ, ದೈಹಿಕ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ಸೆ.29ರಂದು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರದಲ್ಲಿ ಮಾಹಿತಿಯನ್ನು ಸ್ಥಳೀಯ ವೈದ್ಯರಾದ ಕುಮಾರಿ ಪ್ರಿಯಾಂಕ ನಾಟಿಕೇರಿ ಅವರು ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಮಹಮದ್ ಇಸಾಕ್ ಅವರು ಮತ್ತು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀಯುತ ಚಾರ್ಲ್ಸ್ ಅವರು...

ಐವರ್ನಾಡು : ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ – ದತ್ತಿ ನಿಧಿ ಹಾಗೂ ಪುಸ್ತಕ ವಿತರಣೆ, ವೈದ್ಯಕೀಯ ಸಲಕರಣೆ ಖರೀದಿಗೆ ನೆರವು

ಐವರ್ನಾಡು ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ದತ್ತಿ ನಿಧಿ ಹಾಗೂ ಪಠ್ಯ ಪೂರಕ ಅಭ್ಯಾಸ ಪುಸ್ತಕ ವಿತರಣೆ, 9ನೇ ತರಗತಿ ವಿದ್ಯಾರ್ಥಿನಿಗೆ ವೈದ್ಯಕೀಯ ಶ್ರವಣ ಸಾಧನ...

ಅ.02: ದುಗ್ಗಲಡ್ಕದಲ್ಲಿ ಗಾಂಧಿ ಜಯಂತಿ ಆಚರಣೆ- ಗಾಂಧಿ ನಡಿಗೆ,ಉಪನ್ಯಾಸ,ಭಜನಾ ಸ್ಪರ್ಧೆ ಹಾಗೂ ಸನ್ಮಾನ ಕಾರ್ಯಕ್ರಮ

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದ ಆಚರಣೆ ನಡೆಯಲಿದೆ.ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಎನ್.ಎಂ.ಸಿ ಯ ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಲೆನಾಡು ಸಿರಿ ಪ್ರಶಸ್ತಿ ಪುರಸ್ಕೃತ...

ಐನೆಕಿದು : ನಿಸರ್ಗ ಯುವಕ ಮಂಡಲದ ರಂಗಮಂದಿರ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಐನೆಕಿದು ನಿಸರ್ಗ ಯುವಕ ಮಂಡಲದ ರಂಗಮಂದಿರ ನಿಸರ್ಗ ವೇದಿಕೆಯ ನಿರ್ಮಾಣದ ಬಗ್ಗೆ ಐನೆಕಿದು ಶಾಲಾ ವಠಾರದಲ್ಲಿ ಸೆ.26 ರಂದು ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಲಕ್ಷ್ಮೀಶ ಇಜ್ಜಿನಡ್ಕ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಸಭೆಯಲ್ಲಿ ರಂಗಮಂದಿರ ನಿರ್ಮಾಣ ಸಮಿತಿಯನ್ನು ರಚಿಸಲಾಯಿತು. ರಂಗಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ಪೈಲಾಜೆ, ಉಪಾಧ್ಯಕ್ಷರಾಗಿ ಕಿರಣ್ ಪೈಲಾಜೆ, ಕಾರ್ಯದರ್ಶಿಯಾಗಿ ಅಜಿತ್...
Loading posts...

All posts loaded

No more posts

error: Content is protected !!