- Tuesday
- August 11th, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.05ರಿಂದ ನವರಾತ್ರಿ ಉತ್ಸವವು ಆರಂಭಗೊಳ್ಳಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅ.14ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪೂಜಾ ಕಾರ್ಯಗಳು ನೆರವೇರಲಿದ್ದು ದೇವಾಲಯಲ್ಲಿ ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಅ.05ರಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ರಂಗಪೂಜೆ ನಡೆಯಲಿದೆ. ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ...
ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡುವ ವಾರ್ಷಿಕ ಪ್ರಶಸ್ತಿಗೆ ಸುಳ್ಯದ ಇಬ್ಬರು ಆಯ್ಕೆಯಾಗಿದ್ದು, ಸೆ.26 ರಂದು ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆಯ ಉದ್ಯಮಿ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ ಕಾಮಧೇನು,ಸಮಾಜ ಸೇವಕ ಮಂಜುನಾಥ ಮೇಸ್ತ್ರಿ ಬಳ್ಳಾರಿಯವರಿಗೆ...
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಿಂದ ಪ್ರಾರಂಭಗೊಂಡು ಅ.14ನೇ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ.ಅ.07ರಂದು ಬೆಳಿಗ್ಗೆ 8.00ಗಂಟೆಗೆ ದೀಪೋಜ್ವಲನದೊಂದಿಗೆ ಮಹೋತ್ಸವ ಮೊದಲ್ಗೊಳ್ಳಲಿದೆ. ಪ್ರತಿನಿತ್ಯ ಮಧ್ಯಾಹ್ನ ಗಂಟೆ 12.00ರಿಂದ ಉಭಯ ದೇವರಿಗೆ ಮಹಾಪೂಜೆ, ಗಂಟೆ...
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾ ಅವರಿಗೆ ಸಾರ್ವಜನಿಕ ಸನ್ಮಾನ ಸೆ.25 ರಂದು ಊರವರು ಹಾಗೂ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸಲಾಯಿತು. ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಎಸ್ ಪಿ, ದೇವಚಳ್ಳ ಗ್ರಾ.ಪಂ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ ಸದಸ್ಯರಾದ...
ಕಟ್ಟ ಗೋವಿಂದನಗರ ಅಂಗನವಾಡಿ ಕೇಂದ್ರದಲ್ಲಿ ಸೆ.20 ರಂದು ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದುರ್ಗಾಲಕ್ಷ್ಮಿ ನಿಶಾಂತ್ ಕಟ್ಟ ಅವರು ಸಮತೋಲನ ಆಹಾರ ಹಾಗೂ ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕಾಂಶಗಳನ್ನು ಯಾವ ರೀತಿ ಪಡೆದುಕೊಳ್ಳಬಹುದು...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಪೋಷಣಾ ಅಭಿಯಾನ ಯೋಜನೆಯಡಿ ವಿಭಿನ್ನ ಖಾದ್ಯ ತಯಾರಿ,ಪ್ರದರ್ಶನ ಮತ್ತು ಪೌಷ್ಟಿಕ ಆಹಾರದ ಬಳಕೆಯ ಮಾಹಿತಿ ಕಾರ್ಯಕ್ರಮ ಸೆ.24ರಂದು ನಡೆಯಿತು.ಪೌಷ್ಟಿಕ ಆಹಾರದ ಅಗತ್ಯ, ಪೌಷ್ಟಿಕ ಆಹಾರದ ಕೊರತೆಯಿಂದ ಉಂಟಾಗುವ ದೈಹಿಕ ತೊಂದರೆ, ಹಿತಮಿತವಾದ ಆಹಾರದ ಬಳಕೆಯಿಂದ ಮಾನಸಿಕ ಮತ್ತು ಬೌದ್ಧಿಕ ವಿಕಸನದ ಪ್ರಯೋಜನಗಳ ಬಗ್ಗೆ ಶಾಲಾ ಹಿಂದಿ ಭಾಷಾ ಶಿಕ್ಷಕಿ...
ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಂ.ಸಿ. ಯನ್ನು ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ ಇವರ ಅಧ್ಯಕ್ಷತೆಯಲ್ಲಿ ಸೆ.23 ರಂದು ರಚಿಸಲಾಯಿತು. ಐವರ್ನಾಡು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ಯೋಗಿಶ ಕಲ್ಲಗದ್ದೆ, ಮಮತಾ ಉದ್ದಂಪಾಡಿ, ಎಸ್ಡಿಎಂಸಿ ಪೂರ್ವಾಧ್ಯಕ್ಷರಾದ ನಾಗಪ್ಪ ಗೌಡ ಪಾಲೆಪ್ಪಾಡಿ, ಬೆಳ್ಳಾರೆ ವೃತ್ತದ ಶಿಕ್ಷಣ ಸಂಯೋಜಕರಾದ ವಸಂತ...
ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಗುತ್ತಿಗಾರು ಗ್ರಾಮ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಯ ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ನಮ್ಮ ಊರಿಗೆ ಕೀರ್ತಿ ತಂದ ಮಣಿಯಾನಮನೆ ವೇದಾವತಿ ದುರ್ಗೆಶ್ ರವರ ಸುಪುತ್ರಿ ಅನನ್ಯ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಊರಿನ ಹಿರಿಯರಾದ...
ಲಯನ್ಸ್ ಕ್ಲಬ್ ಪಂಜ, ಆರೋಗ್ಯ ಇಲಾಖೆ ಸುಳ್ಯ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕ್ಷಯರೋಗ ಪತ್ತೆ ಆಂದೋಲನದ ಉದ್ಘಾಟನಾ ಕಾರ್ಯಕ್ರಮ ಮತ್ತು ”ಹೆಜ್ಜೆ ಬದಲಾದಾಗ” ಕಿರುಚಿತ್ರ ವೀಕ್ಷಣೆ ಕಾರ್ಯಕ್ರಮ ಸೆ. 24 ರಂದು ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್...
ಐನೆಕಿದು ಗ್ರಾಮದ ಬೂತ್ ಸಂಖ್ಯೆ 117 ರಲ್ಲಿ ಸೆ.25 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಐನೆಕಿದು ಬಿಜೆಪಿ ಬೂತ್ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಇಜ್ಜಿನಡ್ಕ, ಐನೆಕಿದು ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಯಶವಂತ ಕೊಪ್ಪಳಗದ್ದೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯ ಹಾಗೂ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಗಿರೀಶ್ ಆಚಾರ್ಯ, ಭೂ ಅಬಿವೃದ್ಧಿ...
Loading posts...
All posts loaded
No more posts
