Ad Widget

ಸುಳ್ಯ : ನೂತನ ತಹಶೀಲ್ದಾರ್ ವೇದವ್ಯಾಸ ಮುತಾಲಿಕ್ ಇಂದು ಅಧಿಕಾರ ಸ್ವೀಕಾರ

ಸುಳ್ಯ ನೂತನ ತಹಶೀಲ್ದಾರರಾಗಿ ವೇದವ್ಯಾಸ ಮುತಾಲಿಕ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಸುಳ್ಯ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಂಜ ವಲಯ ಕಂದಾಯ ನಿರೀಕ್ಷಕ ಶಂಕರ್ ಹಾಗೂ ತಾಲೂಕು ಕಚೇರಿ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು. ವಾರದ ಹಿಂದೆ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ಅನಿತಾಲಕ್ಷ್ಮಿ ರವರು ಪುನಃ ಬಂಟ್ವಾಳಕ್ಕೆ ವರ್ಗಾವಣೆಗೊಂಡು ತೆರವುಗೊಂಡ ಸ್ಥಾನಕ್ಕೆ...

ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಸಂಘ ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗಧಾಧರ ಬಾಳುಗೋಡು, ಪ್ರ. ಕಾರ್ಯದರ್ಶಿ ಸುಬ್ರಹ್ಮಣ್ಯ ಮಾವಂಜಿ

ಸುಳ್ಯ ತಾಲೂಕು ಖಾಸಗಿ ಶಿಕ್ಷಕರ ಬಳಗದ ಸಭೆ ಇಂದು ರೋಟರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿ ರಚನೆ ಹಾಗೂ ಖಾಸಗಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು.ನೂತನ ಸಮಿತಿ ರಚನೆ ಮಾಡಲಾಗಿದ್ದು ಅಧ್ಯಕ್ಷರಾಗಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು, ಉಪಾಧ್ಯಕ್ಷ ರಾಗಿ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯ...
Ad Widget

ಫೆ.24, 2021 ರಂದು ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಬ್ರಹ್ಮಕಲಶೋತ್ಸವ – ಆಮಂತ್ರಣ ಬಿಡುಗಡೆ

ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಇದರ ಜೀರ್ಣೋದ್ಧಾರ ಕಾರ್ಯ ಮುಕ್ತಾಯ ಹಂತದಲ್ಲಿದ್ದು 2021 ಫೆಬ್ರವರಿ 24 ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ( ಡಿ.19 )ರಂದು ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಭಟ್ ಪರಿಯಂಬಿ, ಆಡಳಿತ ಸಮಿತಿ ಅಧ್ಯಕ್ಷ ದಿನೇಶ್...

ಕೊಡಿಯಾಲ : ಶಾಲೆ ಹಾಗೂ ಅಂಗನವಾಡಿಗೆ ಸ್ಟೀಲ್ ಕಪಾಟು ಕೊಡುಗೆ

ದೇವರಕಾನ ಸ.ಉ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೀಲಾವತಿ. ಎ ಯವರು, ಸಹಶಿಕ್ಷಕಿಯಾಗಿ ತನ್ನ ವೃತ್ತಿಜೀವನ ಆರಂಭಿಸಿದ್ದ ಹಾಗೂ ತನ್ನೆರಡು ಮಕ್ಕಳನ್ನು ಎತ್ತಿ ಮುದ್ದಾಡಿದ ಕೊಡಿಯಾಲ ಸ.ಉ.ಹಿ.ಪ್ರಾ. ಶಾಲೆ ಹಾಗೂ ಬಾಚೋಡಿ ಕೊಡಿಯಾಲ ಅಂಗನವಾಡಿ ಕೇಂದ್ರಕ್ಕೆ ಸವಿನೆನಪಿನ ಕಾಣಿಕೆಯಾಗಿ ಸ್ಟೀಲ್ ಕಪಾಟುಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಲೀಲಾವತಿ.ಎ ಯವರ ಪುತ್ರ ಅಜಿತ್ ಜಿ,...

ಬಿಜೆಪಿ ಮಂಡಲ ಸಮಿತಿ ನಿರ್ಲಕ್ಷ್ಯ : ಉಪಾಧ್ಯಕ್ಷ ಸ್ಥಾನಕ್ಕೆ ಗಣೇಶ್ ಭಟ್ ಇಡ್ಯಡ್ಕ ರಾಜೀನಾಮೆ

ಗ್ರಾಮ ಪಂಚಾಯತ್ ಟಿಕೇಟ್ ಹಂಚಿಕೆಯಲ್ಲಿ ಮಂಡಲ ಸಮಿತಿ ಉಪಾಧ್ಯಕ್ಷರ ಮಾತನ್ನು ಕಡೆಗಣಿಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ನೀಡಿದ್ದಾರೆಂದು ಇದರಿಂದ ಬೇಸರಗೊಂಡು ಬಿಜೆಪಿ ಮಂಡಲ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಗಣೇಶ್ ಭಟ್ ಇಡ್ಯಡ್ಕ ರಾಜೀನಾಮೆ ನೀಡಿದ ಘಟನೆ ನಿನ್ನೆ ನಡೆದಿದೆ.ಕೊಲ್ಲಮೊಗ್ರ ಹರಿಹರ ಸೊಸೈಟಿ ಚುನಾವಣೆಯಲ್ಲಿ ಕಲ್ಮಕಾರು ಭಾಗದಿಂದ ಗಣೇಶ್ ಭಟ್ ಇಡ್ಯಡ್ಕ ಸ್ಪರ್ಧಿಸಿದ್ದರು. ಇವರ ವಿರುದ್ಧ...

ಗೋಂಟಡ್ಕದಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್

ಗೋಂಟಡ್ಕದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್ ಹಾಕಲಾಗಿದ್ದು ವಿವಿಧ ಬೇಡಿಕೆಗಳು ಈಡೇರದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪಂಜ ಪ್ರಾ.ಕೖ.ಪ.ಸ.ಸಂಘದ ವಾರ್ಷಿಕ ಮಹಾಸಭೆ

ಪಂಜ ಪ್ರಾ.ಕೖ.ಪ.ಸ.ಸಂಘದ ವಾರ್ಷಿಕ ಮಹಾಸಭೆಯು ಡಿ.19ರಂದು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸುಬ್ರಹ್ಮಣ್ಯ ಕುಳರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅರಂತೋಡು : ಪಯಸ್ವಿನಿ ನದಿಗೆ ತ್ಯಾಜ್ಯ ಎಸೆದ ಅನಾಗರಿಕರು

ಸುಳ್ಯದ ಜೀವ ನದಿ ಪಯಸ್ವಿನಿಗೆ ಅರಂತೋಡು ತೊಡಿಕಾನ ಸಂಪರ್ಕ ಸೇತುವೆ ಯ ಸಮಾಜ ಕಂಟಕರು ಮೇಲಿಂದ ತಿಂದು ಉಳಿದ ಎಂಜಲು ಆಹಾರ,ಊಟಕ್ಕೆ ಬಳಸಿದ ಹಾಳೆ ತಟ್ಟೆ ಎಸೆದು ಅನಾಗರಿಕತೆ ಮೆರೆದಿದ್ದಾರೆ.ಪಯಸ್ವಿನಿಗೆ ನದಿಗೆ ಸೇತುವೆ ಮೂಲಕ ನಿಂತು ತ್ಯಾಜ್ಯ ಎಂಜಲು ಆಹಾರ ಎಸೆದಿದ್ದಾರೆ. ಈ ಸೇತುವೆಯ ಮೇಲೆ ಎಂಜಲು ಆಹಾರ ಚೆಲ್ಲಿ ದುರ್ವಾಸನೆ ಬೀರುತ್ತಿದೆ.ಇದರಿಂದ ತೊಡಿಕಾನ ಶ್ರೀ...

ಪಾರ್ಶ್ವವಾಯು ಪೀಡಿತ ಕೇಪಣ್ಣ ಗೌಡ ಕಲ್ಲಗದ್ದೆಯವರಿಗೆ ಬೇಕಿದೆ ನೆರವಿನ ಹಸ್ತ

ಅರಂತೋಡು ಗ್ರಾಮದ ಕಲ್ಲಗದ್ದೆ ಕೇಪಣ್ಣ ಗೌಡರುಪಾರ್ಶ್ವವಾಯು ಪೀಡಿತರಾಗಿ ತೀವ್ರ ಅನಾರೋಗ್ಯ ಕ್ಕೊಳಗಾಗಿದ್ದು, ಇವರ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗದೆ ಕುಟುಂಬ ಆರ್ಥಿಕ ಸಂಕಷ್ಟಗೊಳಗಾಗಿದ್ದು,ಇವರಿಗೆ ದಾನಿಗಳ ನೆರವಿನಹಸ್ತ ಬೇಕಾಗಿದೆ.ಪ್ರತಿನಿತ್ಯ ಕೂಲಿಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕೇಪಣ್ಣ ಗೌಡರ ಕುಟುಂಬ ಇದೀಗ ದಾನಿಗಳ ನೆರವನ್ನು ಕೋರಿದ್ದು , ಇವರಿಗೆ ನೆರವು ನೀಡುವವರು ಬ್ಯಾಂಕ್ ಆಫ್ ಬರೋಡಾ ಅರಂತೋಡು ಶಾಖೆ ಅಕೌಂಟ್...

ಸುಳ್ಯ 851 ನಾಮಪತ್ರ ಸಲ್ಲಿಕೆ – 20 ನಾಮಪತ್ರ ತಿರಸ್ಕೃತ

ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಡಿ.16 ಕೊನೆಯ ದಿನವಾಗಿದ್ದು ಸುಳ್ಯ ತಾಲೂಕಿನಲ್ಲಿ ಒಟ್ಟು 851 ನಾಮಪತ್ರ ಸಲ್ಲಿಕೆಯಾಗಿದೆ. ಡಿ. 17 ರಂದು ನಾಮಪತ್ರ ಪರಿಶೀಲನೆ ನಡೆದು 20 ನಾಮಪತ್ರ ತಿರಸ್ಕೃತ ಗೊಂಡಿದೆ. ಕಣದಲ್ಲಿ 831 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂತೆಗೆಯಲು ಡಿ.19 ಕೊನೆಯ ದಿನವಾಗಿದೆ.ಕೊಡಿಯಾಲ ಗ್ರಾ.ಪಂ.ನ 6 ಸ್ಥಾನಗಳಿಗೆ 22, ಐವತ್ತೊಕ್ಲು (ಪಂಜ) ಗ್ರಾ.ಪಂ.ನ...
Loading posts...

All posts loaded

No more posts

error: Content is protected !!