- Saturday
- March 14th, 2026
ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ದಿ.ಡಾ.ಸುಗುಣ ಗೌಡ ಮಿತ್ತಮಜಲು ಸ್ಮರಣಾರ್ಥ ಪ್ರಾಂತೀಯ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ದ.12 ರಂದು ಸುಳ್ಯದ ಲಯನ್ ಸೇವಾ ಸದನದಲ್ಲಿ ನಡೆಯಿತು. ಸುಳ್ಯ, ಗುತ್ತಿಗಾರು, ಪಂಜ,ಸಂಪಾಜೆ, ಕಡಬ ಕ್ಲಬ್ಗಳ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಲಯನ್ ವಲಯಾಧ್ಯಕ್ಷೆ ಶ್ರೀಮತಿ ಸಂಧ್ಯಾ ಸಚಿತ್ ರೈ ಯವರು ಪಂದ್ಯವನ್ನು ಉದ್ಘಾಟಿಸಿದರು. ಡಾ.ಎಂ ಸುಗುಣ ಗೌಡರ ಪುತ್ರ...
ಅನ್ಸಾರಿಯಾ ಎಜುಕೇಶನ್ ಸೆಂಟರ್ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅನ್ಸಾರಿಯಾ ದಅವಾ ವಿದ್ಯಾರ್ಥಿಗಳ ಒಕ್ಕೂಟವಾದ ಅನ್ಸಾರುಸುನ್ನಃ ಸ್ಟೂಡೆಂಟ್ ಅಸೋಸಿಯೇಷನ್ ಇದರ ಅಧೀನದಲ್ಲಿ ಜೀಲಾನಿ ಅನುಸ್ಮರಣಾ ಸಂಗಮವು ಡಿ.9 ರಂದು ಅನ್ಸಾರಿಯಾ ಮದರಸ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ಸಾರಿಯಾ ದಅವಾ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾಗಿರುವ ಇಮಾಮ್ ಗಝ್ಝಾಲಿ ಗ್ರಂಥಾಲಯದ ಉದ್ಘಾಟನೆಯನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ ನಿರ್ವಹಿಸಿದರು....
ಬಾಳಿಲ ತೋಟದಮೂಲೆ ತರವಾಡು ಮನೆಯ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಡಿ.13 ರಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ಬೆಳ್ಳಾರೆ ಇದರ ವತಿಯಿಂದ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಡಿ.13 ರಂದು ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ವಲಯದ ಸಂಯೋಜಕರಾದ ವಸಂತ ಗೌಡ ನೆಟ್ಟಾರು, ಸುಂದರನಾಯ್ಕ ಶೇಣಿ ,ಪ್ರಸಾದ ಕೋಟೆಬನ, ಶೇಷಪ್ಪ ನಾಯ್ಕ ಮಠತ್ತಡ್ಕ, ಶ್ರೀನಿವಾಸ ಮಠತ್ತಡ್ಕ, ಗಂಗಾಧರ ಕಿಲಂಗೋಡಿ, ಐತ್ತಪ್ಪ ಕಿಲಂಗೋಡಿ ಶ್ರಮದಾನದಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ...
ಹಿಂದೂ ಜಾಗರಣ ವೇದಿಕೆ ಬಳ್ಪ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಡಿ.13 ರಂದು ಬಳ್ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಿತು.ಶಿಬಿರದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಲಿಂಗಪ್ಪ ರೈ ಅರ್ಗುಡಿ ನೆರವೇರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹಿ.ಜಾ.ವೇ. ಬಳ್ಪ ಇದರ ಅಧ್ಯಕ್ಷರಾದ ಪ್ರಖ್ಯಾತ್ ರೈ ಪಾರ್ಚೋಡು ಅಧ್ಯಕ್ಷತೆ ವಹಿಸಿದ್ದರು....
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದ್ದು ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಹೆಚ್ಚಿನ ಪಂಚಾಯತ್ ಗಳಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಡಿ.12 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ...
ಹೃದಯವಾಹಿನಿ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಸ್ ಯೂನಿಯನ್ ಆಶ್ರಯದಲ್ಲಿ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಡಿಸೆಂಬರ್ 12 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಬೆಳಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡು ಶಾಸ್ತ್ರೀಯ ನೃತ್ಯ ರೂಪಕ, ಭಾಷಾ ಬಾಂಧವ್ಯ ಗೋಷ್ಠಿ, ಮಿಮಿಕ್ರಿ, ಸಮೂಹ ಗಾಯನ...
ದೇಶದಾದ್ಯಂತ ರೈತರ ಪ್ರತಿಭಟನೆ ರೈತರ ಹಕ್ಕಿಗಾಗಿ ನಡೆಯುತ್ತಿದ್ದು, ಆಡಳಿತ ಪಕ್ಷದಲ್ಲಿ ಇರುವ ರೈತ ಸಂಘಟನೆಯವರು ರೈತ ಮೋರ್ಚಾದ ಹೆಸರಿನಲ್ಲಿ ಪ್ರಾಮಾಣಿಕ ರೈತರನ್ನು ಕಡೆಗಣಿಸುವುದು ಸರಿಯಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಇವರು ರೈತರ ಬಗ್ಗೆ ಮಾತನಾಡುವ ನೈತಿಕತೆ ಇವರಲ್ಲಿ ಇಲ್ಲ ಎಂದು ಹಸಿರು ಸೇನೆ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ...
ದ.ಕ.ಜಿಲ್ಲಾ ಸಹಕಾರಿ ನೌಕರರ ಸಹಕಾರ ಸಂಘದ 89ನೇ ವಾರ್ಷಿಕ ಮಹಾಸಭೆ ಮಂಗಳೂರಿನ ಸಂಘದ ಪ್ರಧಾನ ಕಚೇರಿಯ ಉನ್ನತಿ ಸಭಾಭವನದಲ್ಲಿ ಇಂದು ನಡೆಯಿತು.ಈ ಸಂದರ್ಭದಲ್ಲಿ ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿಯಿಂದ ಸಮಾಜರತ್ನ ಸೇವಾ ಪ್ರಶಸ್ತಿಗೆ ಭಾಜನರಾಗಿರುವ ಸಂಘದ ನಿರ್ದೇಶಕ, ವೆಂಕಟರಮಣ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಲಾಯಿತು. ಡಿ.ಸಿ.ಸಿ.ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರವೀಂದ್ರ ಸನ್ಮಾನಿಸಿದರು. ಮಹಾಪ್ರಬಂಧಕ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2019 - 20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.12 ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ಪ್ರಸಾದ್, ನಿರ್ದೇಶಕರಾದ ಕೆ.ಅಜಿತ್ ರಾವ್, ಬಿ.ಸುಭಾಶ್ಚಂದ್ರ ರೈ,...
Loading posts...
All posts loaded
No more posts
