ಸರಸ್ವತಿ ಕಾಮತ್ ಮೇಲೆ ಹಲ್ಲೆ ಪ್ರಕರಣ- ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ಶಿಕ್ಷೆ ನಿಗದಿಪಡಿಸಿ ಆದೇಶ

ಸುಳ್ಯ: 2014 ರ ಲೋಕಸಭಾ ಚುನಾವಣೆಯ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ತಂಡದವರು  ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಸರಸ್ವತಿ ಕಾಮತ್ ಅವರ ಮೇಲೆ ಮಾಡಿದ್ದಾರೆನ್ನಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.೬ ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಹೊರಬಂದಿದ್ದು ಹರೀಶ್ ಕಂಜಿಪಿಲಿ ಮತ್ತವರ ತಂಡಕ್ಕೆ ಶಿಕ್ಷೆ ನಿಗದಿಯಾಗಿದೆ. ಘಟನೆಯ ಹಿನ್ನಲೆ: 2014 ರ ಲೋಕಸಭಾ  ಚುನಾವಣೆಯ ಸಂದರ್ಭ ...

ಅವಘಡಕ್ಕೆ ಸಾಕ್ಷಿಯಾಗುವಂತಿದೆ ಚಾಮಡ್ಕ ಫಾಲ್ಸ್

ಅಮರ ಮುಡ್ನೂರು ಗ್ರಾಮದ ಚಾಮಡ್ಕ ಫಾಲ್ಸ್ ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದು ಇದೀಗ ಅಲ್ಲಿ ಅಪಾಯದ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ನೀರಿನ ಹರಿವಿನಿಂದಾಗಿ ಕಲ್ಲುಗಳ ಪಾಚಿಕಟ್ಟಿದ್ದು ಹೆಚ್ಚಿನ ಯುವಕ - ಯುವತಿಯರು ಇತ್ತೀಚಿಗೆ ಈ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ಮೋಜಿಗೆ ಬಿದ್ದು ಪಾಚಿಗಟ್ಟಿದ ಕಲ್ಲುಗಳ ಮೇಲೆ ಓಡಾಡುತ್ತಿದ್ದಾರೆ.ಪ್ರವಾಸಿಗರಿಗೆ...
Ad Widget

ಸದ್ದಿಲ್ಲದೆ ಸಮಾಜಸೇವೆ ಮಾಡುತ್ತಿರುವ ಎಬಿ ಮೊೖದ್ದಿನ್ ಕಳಂಜ

'ಬದುಕಿದರೆ ಹೀಗೆ ಬದುಕಬೇಕಲ್ಲವೇ?' ಎಂಬಂತೆ ಸದ್ದಿಲ್ಲದೆ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯ ಕೆಲಸವನ್ನು ಇಲ್ಲೋರ್ವ ಹಿರಿಯ ವ್ಯಕ್ತಿ ಮಾಡುತ್ತಿದ್ದಾರೆ. ಕಳಂಜ ಗ್ರಾಮದ ಎ.ಬಿ. ಮೊೖದ್ದಿನ್ ಎಂಬವರೇ ಈ ರೀತಿಯಾದ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರು.ಇವರು ಹಲವಾರು ವರ್ಷಗಳಿಂದ ವಿದೇಶದಲ್ಲಿ ಕೆಲಸದಲ್ಲಿ ಇದ್ದು ಈಗ ನಿವೃತ್ತ ಜೀವನ ಸಾಗಿಸುತ್ತಿದ್ದಾರೆ. ಮನೆಯಲ್ಲಿ ಹಾಯಾಗಿ ಇರದೇ ತನ್ನದೇ ಆದ ವಿಶಿಷ್ಟ...

ಅಡ್ತಲೆ : ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಿಂಡಿಮನೆ

Soumya Durgaprasad meladthale ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಇದರ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸಭೆ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಗಿರಿಪ್ರಕಾಶ್ ಕಲ್ಲುಗದ್ದೆ ಯವರ ಅಧ್ಯಕ್ಷತೆ ಯಲ್ಲಿ ಆರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ.ಕುಮಾರಿ ಶ್ವೇತಾ ಅರಮನೆಗಯ, ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಮತ್ತು ಶ್ರೀಮತಿ...

ಐವರ್ನಾಡು ಸೊಸೈಟಿ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ

ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಹಣ್ಣಿನ ಗಿಡಗಳ ಮಾಹಿತಿ ಕಾರ್ಯಕ್ರಮ ಇಂದು ಸೊಸೈಟಿ ಆವರಣದಲ್ಲಿ ನಡೆಯಿತು. ದಯಾಪ್ರಸಾದ್ ಜಿಮುಳ್ಳು ಅವರು ಹಣ್ಣಿನ ಗಿಡಗಳ ಕುರಿತು ಮಾಹಿ ತಿ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ 600 ಕ್ಕೆ 600 ಅಂಕ ಪಡೆದ ನಾಟಿಕೇರಿ ವಸಂತಕುಮಾರ ಮತ್ತು ಮೀನಾಕ್ಷಿ...

ಪೆರುವೋಡಿ : ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪೆರುವೋಡಿ : ಮುಕ್ಕೂರುಜ್ಯೋತಿ ಯುವಕ ಮಂಡಲ,ಯುವಸೇನೆ ಮುಕ್ಕೂರುಧರ್ಮಸ್ಥಳ ಗ್ರಾಮಾಭಿವೃದ್ದಿ ಸ್ವ ಸಹಾಯ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಸೆ.5 ರಂದು ಪೆರುವೋಡಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ‌ಅರ್ಚಕ ಸುರೇಶ್ ಉಪಾಧ್ಯಾಯ ದೀಪ ಬೆಳಗಿಸಿದರು. ಸತ್ಯಪ್ರಸಾದ್ ಕಂಡಿಪ್ಪಾಡಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆಸೀಐ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಗ್ರಾ.ಪಂ.ಸದಸ್ಯೆ ಗುಲಾಬಿ...

ಮಕ್ಕಳಿಂದಲೇ ನಡೆಸಲ್ಪಡುವ ಚಿರಾಯು ಸ್ಟುಡೆಂಟ್ಸ್ ಕ್ಲಬ್‌ನ ಎರಡನೇ ಘಟಕ ಉದ್ಘಾಟನೆ : ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಿ – ವಿನುತಾ ಪಾತಿಕಲ್ಲು

ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಲು ಮಕ್ಕಳಿಂದಲೇ ಪ್ರಾರಂಭಗೊಂಡ ಚಿರಾಯು ಸ್ಟುಡೆಂಟ್ಸ್ ಕ್ಲಬ್‌ನ ಎರಡನೇ ಘಟಕ ಇದೀಗ ಪ್ರಾರಂಭಗೊಂಡಿದೆ. ಮಂಡೆಕೋಲಿನ ಕಣೆಮರಡ್ಕದಲ್ಲಿ ಪ್ರಾರಂಭಗೊಂಡ ಚಿರಾಯು ಸ್ಟುಡೆಂಟ್ಸ್ ಕ್ಲಬ್ ನ ಎರಡನೇ ಘಟಕದ ಉದ್ಘಾಟನೆಯನ್ನು ಮಂಡೆಕೋಲು ಗ್ರಾ.ಪಂ ಅಧ್ಯಕ್ಷೆ ವಿನುತಾ ಪಾತಿಕಲ್ಲು ಸೆ.5 ರಂದು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಆರಂಭದ ಹಂತದಲ್ಲೇ ಮಕ್ಕಳ ಪ್ರತಿಭೆ...

ಬಾಳಿಲ ಶಾಲಾ ಶಿಕ್ಷಕ ಶಿವಪ್ರಸಾದ್.ಜಿ ಯವರಿಗೆ ತಾಲೂಕು ಉತ್ತಮ ಸ್ಕೌಟ್ಸ್ ಶಿಕ್ಷಕ ಪ್ರಶಸ್ತಿ

ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೆಪಿಎಸ್ ಬೆಳ್ಳಾರೆ ಇಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಪ್ರಸಾದ್ ಜಿ. ಇವರಿಗೆ ತಾಲೂಕು ಉತ್ತಮ ಸ್ಕೌಟ್ಸ್ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೇನ್ಯ: ನೇಲ್ಯಡ್ಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಹಿಂದೂ ಜಾಗರಣ ವೇದಿಕೆ ಮಹಾವಿಷ್ಣು ಘಟಕ ಕಣ್ಕಲ್ ಕೇನ್ಯ ಹಾಗೂ ಸ.ಕಿ.ಪ್ರಾಥಮಿಕ ಶಾಲೆ ನೇಲ್ಯಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಶ್ರಮದಾನವನ್ನು ಸೆ.5ರಂದು ನಡೆಸಲಾಯಿತು. ಈ ಶ್ರಮದಾನದಲ್ಲಿ ಹಿಂ.ಜಾ.ವೇ.ಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.

ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಸರ್ಕಾರ

ಕಳೆದ ಕೆಲವು ದಿನಗಳಿಂದ ಚರ್ಚೆಯ ಕೇಂದ್ರಬಿಂದು ಆಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಿದೆ.ಸೆ.05 ರಂದು ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ. ದೇವಸ್ಥಾನಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಅವಕಾಶ ನೀಡಲಾಗಿದ್ದು...
Loading posts...

All posts loaded

No more posts

error: Content is protected !!