- Saturday
- March 14th, 2026
ಮಲ್ನಾಡ್ ಪ್ರಿಮಿಯರ್ ಲೀಗ್ 2020 (MPL Trophy 2020 Season - 2) ಓವರ್ ಆರ್ಮ್ ಕ್ರಿಕೇಟ್ ಪಂದ್ಯಕೂಟವು ಮಹಾತ್ಮಗಾಂಧಿ ಮಲ್ನಾಡ್ ಮೈದಾನ ಕೊಡಿಯಾಲಬೈಲಿನಲ್ಲಿ ನಡೆಯಿತು. ಲೀಗ್ ಹಂತದಲ್ಲಿ ಭಾಗವಹಿಸಿದ 6 ತಂಡಗಳಲ್ಲಿ ಫೈರ್ ಜಟ್ಟಿಪಳ್ಳ ತಂಡವು ಪ್ರಥಮ ಬಹುಮಾನ, ಹಾಗೂ ದ್ವಿತೀಯ ಬಹುಮಾನವನ್ನು ರಾಜ್ ಸೌಂಡ್ಸ್ ಉಬರಡ್ಕ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಶಿವ ಅಂಬ್ಯುಲೆನ್ಸ್...
ಗಾಂಧಿನಗರ ಮಸೀದಿ ನವೀಕರಣಗೊಳ್ಳುತ್ತಿದ್ದು, ಇದಕ್ಕಾಗಿ ಮಸೀದಿ ಪ್ರವೇಶ ದ್ವಾರದ ಬಳಿ ಕಾಣಿಕೆ ಡಬ್ಬಿ ಇರಿಸಲಾಗಿತ್ತು. ಇವತ್ತು ಸಂಜೆ 5.30 ರವೇಳೆಗೆ ಇದು ಕಾಣೆಯಾಗಿದ್ದು, ಸುಮಾರು 20 ಸಾವಿರದಷ್ಟು ಹಣವಿದ್ದಿರಬಹುದೆಂದು ಅಂದಾಜಿಸಲಾಗಿದೆ. ಮಸೀದಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾ ಸರಿಯಾದ ದಿಶೆಗೆ ಇಲ್ಲದ ಕಾರಣ ಕಳ್ಳತನ ನಡೆದ ಘಟನೆಯ ದೃಶ್ಯಾವಳಿ ಕಂಡುಬರಲಿಲ್ಲ ಎಂದು ತಿಳಿದುಬಂದಿದೆ.
ಸ್ಕೋರ್ಪಿಯನ್ ಕಿಂಗ್ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಕ್ರಿಕೇಟ್ ಪಂದ್ಯಾಟ ಕೆಪಿಎಲ್ 2020 ಇಂದು ನಡೆಯಿತು. ಬಂಗ್ಲೆಗುಡ್ಡೆ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಎಡಬ್ಲ್ಯೂಎಂ ಜೋಕರ್ಸ್ ಕೊಲ್ಲಮೊಗ್ರ ಹಾಗೂ ದ್ವಿತೀಯ ಸ್ಥಾನವನ್ನು ಅಮ್ಮ ಕ್ರಿಕೇಟರ್ ಕೊಲ್ಲಮೊಗ್ರ ಪಡೆದುಕೊಂಡಿತು. ಬೆಸ್ಟ್ ಬೌಲರ್ ಆಗಿ ನಿಖಿಲ್ ಎನ್, ಬೆಸ್ಟ್ ಬ್ಯಾಟ್ಸ್ಮನ್ ಮನು...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ವತಿಯಿಂದ ಡಿ.6 ರಂದು ಅಂಬೇಡ್ಕರ್ ರವರ 64ನೇ ಪುಣ್ಯಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನವನ್ನು ಶ್ರೀ ಚೆನ್ನಕೇಶವ ದೇವಸ್ಥಾನ ಸಭಾಂಗಣ ಸುಳ್ಯ ದಲ್ಲಿ ಮಾಡಲಾಯಿತು . ಈ ಸಂದರ್ಭದಲ್ಲಿ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು. ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಚಂದ್ರಶೇಖರ್ ರವರು ಡಾ.ಬಿ.ಆರ್ ಅಂಬೇಡ್ಕರ್ ರವರ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 64 ನೇ ಪುಣ್ಯಸ್ಮರಣೆಯ ಅಂಗವಾಗಿ ಇಂದು ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಎ.ವಿ.ನಾಗೇಶ್ ಆದಿಸುಬ್ರಹ್ಮಣ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಟ್ಟ ವಾಲಗದಕೇರಿ ವಹಿಸಿದ್ದರು. ಸುರೇಶ್ ಪರ್ಕಳ ಬೌದ್ಧಿಕ್ ನೀಡಿದರು. ಈ...
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್ ಗೆ ಸಂಬಂಧಪಟ್ಟಂತೆ ಅಲ್ಲಿನ ತಡಗಜೆ ಗ್ರಾಮಸ್ಥರು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಚುನಾವಣಾ ಬಹಿಷ್ಕಾರದ ಮೊರೆಹೋಗಿದ್ದರು. ವಾರ್ಡಿನಲ್ಲಿ ಸುಮಾರು 25 ವರ್ಷಗಳಿಂದ ಪ್ರಮುಖ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಸಮಸ್ಯೆಗಳಿದ್ದರೂ ಇಲ್ಲಿನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಕೇವಲ ಭರವಸೆಯಲ್ಲದೆ ಸೂಕ್ತ ಸ್ಪಂದನೆ...
ಸುಳ್ಯ ನಗರ ಮೂರನೇ ವಾರ್ಡಿನ ಜಯನಗರ ಪರಿಸರದಲ್ಲಿ ದಲಿತ ಸಮುದಾಯದ ಸುಮಾರು 10ಕ್ಕೂ ಹೆಚ್ಚು ಕುಟುಂಬಗಳು ಚಂಡೆಮೂಲೆ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮೂಲಭೂತ ಸೌಲಭ್ಯಗಳು ಎದ್ದು ಕಾಣುವ ಈ ಕಾಲೋನಿಗೆ ಸ್ಥಳೀಯ ನ.ಪಂ. ಸದಸ್ಯ ಬಾಲಕೃಷ್ಣ ಭಟ್ ಕೊಡಂಕೆರಿ ಭೇಟಿ ನೀಡಿ ಅತ್ಯವಶ್ಯಕ ಸಮಸ್ಯೆಗಳ ಪರಿಹಾರ ಕಾರ್ಯಗಳನ್ನು ಒದಗಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿಸೆಂಬರ್ 6ರಂದು...
ಕೋವಿಡ್ ಸಂಕಷ್ಟದ ಕಾಲದಲ್ಲಿಯು ಹಾಲು ಉತ್ಪಾದಕರ ಹಿತ ಕಾಯುವ ಕಾರ್ಯ ಕೆಎಂಎಫ್ ಮೂಲಕ ಆಗಿದೆ. ಹೈನುಗಾರರು ಹೈನುಗಾರಿಕೆ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಂಘವನ್ನು ಮತ್ತಷ್ಟು ಬಲಿಷ್ಠವಾಗಿ ರೂಪಿಸಬೇಕು ಎಂದು ದ.ಕ.ಜಿಲ್ಲಾ ಹಾಲು ಒಕ್ಕೂಟ ವಿಸ್ತರಣಾಕಾರಿ ಹರೀಶ್ ಕುಮಾರ್ ಹೇಳಿದರು. ಮುಕ್ಕೂರು ಶಾಲಾ ವಠಾರದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ...
ಹಲವಾರು ವರ್ಷಗಳಿಂದ ನಗರ ಪಂಚಾಯತ್ ಎದುರಿನಲ್ಲಿ ತುಂಬಿದ್ದ ಕಸದರಾಶಿಯನ್ನು ಒಣಕಸ ಮತ್ತು ಹಸಿಕಸ ವಿಂಗಡಿಸಿ ಒಣಕಸವನ್ನು ಕಲ್ಚರ್ಪೆ ಸಾಗಿಸುವ ಪ್ರಕ್ರಿಯೆ ಇದೀಗ ಅರಂಭಗೊಂಡಿದ್ದು ಅತಿ ಶೀಘ್ರದಲ್ಲಿ ನಗರ ಪಂಚಾಯತಿಯ ಮುಂಭಾಗದಲ್ಲಿರುವ ಕಸದ ರಾಶಿಗೆ ಮುಕ್ತಿ ಸಿಗಲಿದೆ. ಕಲ್ಚರ್ಪೆಯ ಕಸ ವಿಲೇವಾರಿ ಘಟಕಕ್ಕೆ ಸೂಕ್ತ ಬೇಲಿಯನ್ನು ನಿರ್ಮಿಸಿ ಅಲ್ಲಿ ಕಸವನ್ನು ಶೇಖರಿಸುವ ತಯಾರಿ ಪುನಃ ಪ್ರಾರಂಭಗೊಂಡಿದೆ. ನಗರ...
ಕಳಂಜ ಗ್ರಾಮದ ತಂಟೆಪ್ಪಾಡಿಯ 'ನಿನಾದ ಸಾಂಸ್ಕೃತಿಕ ಕೇಂದ್ರ'ದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಮಾನಿಷಾದ ಎಂಬ ಕಾಲಮಿತಿ ಯಕ್ಷಗಾನ ಜರುಗಿತು. ಈ ಸಂದರ್ಭದಲ್ಲಿ ಯಕ್ಷಾಭಿಮಾನಿಗಳು, ಕಲಾಸಕ್ತರು ಉಪಸ್ಥಿತರಿದ್ದರು.
Loading posts...
All posts loaded
No more posts
