- Sunday
- August 9th, 2026
ಪುತ್ತೂರಿನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಯವರು ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನುತುಪ್ಪವನ್ನು ಇಂದು ಉದ್ಘಾಟಿಸಿ ಮಾರುಕಟ್ಟೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಪುತ್ತೂರಿನ ಶಾಸಕರಾದ ಮಾನ್ಯ ಸಂಜೀವ ಮಠಂದೂರು, ಗ್ರಾಮಜನ್ಯದ ಅಧ್ಯಕ್ಷರಾದ ರಾಮಕೃಷ್ಣ ಭಟ್ ಕುರುಂಬುಡೆಲು, ನಿರ್ದೇಶಕರಾದ ಮೂಲಚಂದ್ರ ಕೆ., ಶಂಕರ ಭಾರದ್ವಾಜ್, ರಾಮಪ್ರತೀಕ ಕರಿಯಾಲ,...
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ಸುಳ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ ತಾಳೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಅಂತರ ರಾಷ್ಟ್ರೀಯ ಪಾಮ್ ಎಣ್ಣೆ ದರ ಆಧರಿಸಿ ಎಣ್ಣೆ ಹಾಗೂ ತಾಳೆ ಹಣ್ಣಿನ ಖರೀದಿ ದರ ನಿರ್ಧರಿಸಲಾಗುತ್ತದೆ.ಆ ಬೆಲೆ ಇಲ್ಲಿನ ಉತ್ಪಾದಕ ವೆಚ್ಚದ ಅನ್ವಯ ಲಾಭದಾಯಕವಾಗುವುದಿಲ್ಲ...
ಎಲಿಮಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಯೋಧ್ಯೆ ಶಾಖೆ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಆ 22 ರಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.ಶಾಖೆಯ ಪ್ರಮುಖ್ ಹಾಗೂ ಸದಸ್ಯರು ಮತ್ತು ಸ್ಥಳೀಯರು ಸಹೋದರತೆಯನ್ನು ಸಾರುವ ರಕ್ಷೆಯನ್ನು ಪರಸ್ಪರ ರಾಖಿ ಕಟ್ಟುವುದರೊಂದಿಗೆ ಆಚರಿಸಿದರು.
ಕುಂಡಡ್ಕ : ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ರವಿವಾರ ಕುಂಡಡ್ಕ ದಲಿತ ಕಾಲನಿಯ ನಿವಾಸಿ ಶೇಷಪ್ಪ ಅವರ ನಿವಾಸದಲ್ಲಿ ನಡೆಯಿತು. ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು...
ಯುಪಿಎ ಅವಧಿಯಲ್ಲಿ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶದ ಕುರಿತ ಅರ್ಜಿ ಸದ್ಯ ಸುಪ್ರಿಂ ಕೋರ್ಟ್ ನಲ್ಲಿದೆ. ಅಡಿಕೆ ಎಂಬುದು ರಾಸಾಯನಿಕ ಬೆರೆಸದಿದ್ದರೆ ಹಾನಿಕಾರಕವಲ್ಲ. ಅದು ರೋಗ ನಿರೋಧಕ ಶಕ್ತಿ ಹೊಂದಿರುವ ಒಂದು ಉತ್ಪನ್ನ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಸುಪ್ರಿಂ ಕೋರ್ಟ್ ನಲ್ಲಿ ಸಾಬೀತು ಪಡಿಸಿ ಅಡಿಕೆ ಬೆಳೆಗಾರರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ...
ಆ.22ರಂದು ಬಳ್ಪದ ವಿಕ್ರಮ ಯುವಕ ಮಂಡಲದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ ನಡೆಯಿತು.ರಾ.ಸ್ವಂ.ಸೇವಾ ಸಂಘದ ಪ್ರಕಾಶ್ ಆಚಾರ್ಯ ನರಿಯಂಗ ಇವರು ಭಗವ ಧ್ವಜಾರೋಹಣದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಪ ಹಿಂ.ಜಾ.ವೇ.ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಎಸ್ ಡಿ ಪಿ ಐ ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿಎಸ್. ಡಿ. ಪಿ. ಐ. ಸಂಪಾಜೆ ವಲಯ ಕಾರ್ಯದರ್ಶಿಗಳಾದ ಫಾರೂಕ್ ಕಾನಕ್ಕೋಡ್, ಜತೆ ಕಾರ್ಯದರ್ಶಿಗಳಾದ ಓವೈಸ್ ಸಂಪಾಜೆ...
ಭಾ ಜ ಪಾ ಯುವ ಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ಘಟಕದ ವತಿಯಿಂದ ರಕ್ಷಾಬಂಧನ ದಿನವನ್ನು ವಿಶಿಷ್ಟವಾಗಿ ಆಚರಿಸುವ ಸಲುವಾಗಿ ಕೋವಿಡ್ ವಾರಿಯರ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಧನ್ಯವಾದ ತಿಳಿಸುವ ಸಲುವಾಗಿ ' ರಕ್ಷಾ ಸಂಕಲ್ಪ ಉತ್ಸವ' ದಿನವನ್ನಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಸುಳ್ಯ ಯುವಮೋರ್ಚಾ ಮಂಡಲ ಸಮಿತಿಯ ಅಧ್ಯಕ್ಷರಾದ...
ಚೆಂಬು ಗ್ರಾಮದ ಬಾಲಂಬಿ ತಿಮ್ಮಯ್ಯ ಇವರ ಮನೆಯ ತೋಟದಲ್ಲಿ ಕಂಡು ಬಂದ ವಿಶೇಷ ಕದೊಲಿ ಬಾಳೆ ಗಿಡ ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.
ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....
Loading posts...
All posts loaded
No more posts
