- Sunday
- August 9th, 2026
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಮಾಸ್ಟರ್ ಪ್ಲಾನ್ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ರಾಜ್ಯದ ಮುಜರಾಯಿ ಸಚಿವೆ ಸನ್ಮಾನ್ಯ ಶ್ರೀಮತಿ ಶಶಿಕಲಾ ಜೊಲ್ಲೆ ಅವರಿಗೆ ಸುಳ್ಯ ಕ್ಷೇತ್ರದ ಶಾಸಕರು, ಮಾನ್ಯ ಸಚಿವರು ಆಗಿರುವ ಶ್ರೀ ಎಸ್ ಅಂಗಾರ ಅವರ ನೇತೃತ್ವದಲ್ಲಿ ವಿಕಾಸಸೌಧದ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ನೀಡಲಾಯಿತು ಈ ಸಂದರ್ಭದಲ್ಲಿ ಈ ಯೋಜನೆಯ ಬಗ್ಗೆ...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಆ.17 ರಂದು ಶಿರಾಡಿ ಘಾಟಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ದೋಣಿಗಲ್ ಪ್ರದೇಶದಲ್ಲಿ ಕುಸಿತಗೊಂಡ ಶಿರಾಡಿ ಘಾಟಿ ರಸ್ತೆಯನ್ನು ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರು ಶಿರಾಡಿ ಘಾಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಳೆಗಾಲದಲ್ಲಿ ಕುಸಿತ ಸಂಭವಿಸುತ್ತಿದೆ....
ಬೆಳ್ಳಾರೆಯ ಕೆಳಗಿನ ಪೇಟೆಯ ಹಿರಿಯ ಉದ್ಯಮಿ, ಶ್ರೀ ಗುರುರಾಘವೇಂದ್ರ ಸ್ಟೋರ್ಸ್ ನ ಚಂದ್ರಶೇಖರ ಶೆಣೈ ಆ.19ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಚಿತ್ರ ಶೆಣೈ, ಪುತ್ರರಾದ ಚೇತನ್ ಶೆಣೈ, ಶ್ರೀ ಗುರುರಾಘವೇಂದ್ರ ಸ್ಟೋರ್ಸ್ ನಡೆಸುತ್ತಿರುವ ಜೇಸೀ ಬೆಳ್ಳಾರೆಯ ಪೂರ್ವಾಧ್ಯಕ್ಷ ಮಿಥುನ್ ಶೆಣೈ, ಓರ್ವ ಸಹೋದರ, ಮೂವರು ಸಹೋದರಿಯರು...
ಬೆಳ್ಳಾರೆ ಗ್ರಾಮದ ಚಾವಡಿಬಾಗಿಲು ಎಂಬಲ್ಲಿ ಜನತಾ ಕಾಲೋನಿಯಲ್ಲಿ ವಾಸಿಸುತ್ತಿರುವ ಯಶೋಧ ರೈ ಎಂಬವರ ಮಗಳು, ವಿದ್ಯಾಭೋದಿನಿ ಪ್ರೌಢಶಾಲೆ ಬಾಳಿಲ ಇಲ್ಲಿನ ವಿದ್ಯಾರ್ಥಿನಿ ಕು. ಚೈತನ್ಯ 2020-21 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ 625 ರಲ್ಲಿ 580 ಅಂಕ ಗಳಿಸಿ ಉನ್ನತ ಶ್ರೇಣಿ ಹೊಂದಿದ್ದು, ತೀರಾ ಬಡವರಾಗಿ ರುವ ಇವರು ಅಂತ್ಯೋದಯ...
110 ಕೆ.ವಿ. ಸಬ್ ಸ್ಟೇಷನ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಶೀಘ್ರ ಬಗೆಹರಿಸಲು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಸಚಿವ ಅಂಗಾರರ ನೇತೃತ್ವದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದರು,ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ರೈತ...
ಮಂಗಳೂರು ವಿ.ವಿ. ಸಂಧ್ಯಾ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಯುವಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಭಾಗವಹಿಸಿದ್ದರು. "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಯ ವಿರುದ್ಧ 1857 ರಿಗಿಂತ ಇಪ್ಪತ್ತು ವರ್ಷಗಳ ಹಿಂದೆಯೇ ಭಾರತದಲ್ಲಿ, ಅದು ಕೂಡ...
ಸುಳ್ಯ: ದ.ಕ ಜಿಲ್ಲೆ ಹಲವು ಗಡಿ ಪ್ರದೇಶಗಳನ್ನು ಹೊಂದಿದ್ದು ಇದು ಕೋವಿಡ್ ನ ಕುರಿತು ಮತ್ತಷ್ಟು ಜಾಗೃತರಾಗಿ ಇರಬೇಕಾದ ಸನ್ನಿವೇಶವನ್ನು ಉಂಟು ಮಾಡಿದೆ. ಹಾಗಾಗಿ ಇಲ್ಲಿನ ಅಧಿಕಾರಿ ವರ್ಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡು ಕೋವಿಡ್ ಪಾಸಿಟಿವಿಟಿ ದರ ಏರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವ ಎಸ್ ಅಂಗಾರ ಅವರು ಹೇಳಿದರು.ಆ.೧೮ ರಂದು ಕೆವಿಜಿ ಆಯರ್ವೇದ...
ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು...
ಕೊಡಿಯಾಲ ಗ್ರಾಮದ ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆಯವರು ಆ.18ರಂದು ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮುದರ, ಪುತ್ರಿಯರಾದ ಲಕ್ಷ್ಮೀ, ಕುಸುಮ, ಕಮಲ, ಚನ್ನು, ಸೊಸೆಯಂದಿರಾದ ಜಾನಕಿ, ಸೇಸಮ್ಮ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...
All posts loaded
No more posts
