Ad Widget

ಕಾಲೇಜುಗಳಲ್ಲಿ ತರಗತಿಗಳು ಆರಂಭವಾದರೂ ಆನ್ ಲೈನ್ ತರಗತಿಗಳನ್ನೇ ಅವಲಂಬಿಸುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು

ಕೊರೋನಾದಿಂದಾಗಿ ಕಳೆದ 8 ತಿಂಗಳಿನಿಂದ ಕಾಲೇಜುಗಳು ಮುಚ್ಚಿದ್ದವು. ಆದರೆ ಇಂದಿನಿಂದ ಕಾಲೇಜುಗಳು ಪುನರಾರಂಭಗೊಂಡಿವೆ. ಸರ್ಕಾರ ಕಾಲೇಜುಗಳನ್ನು ಆರಂಭಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಷ್ಟೇ ಅಲ್ಲದೇ ಪ್ರತೀ ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿ ನೆಗೆಟಿವ್ ವರದಿ ಬಂದವರಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಲಾಗಿದೆ....

ಎಸ್ ಎಂ ಎ ದಕ್ಷಿಣ ಕನ್ನಡ ಜಿಲ್ಲಾ ಎಲೆಕ್ಷನ್ ಚೀಫ್ ಡೈರೆಕ್ಟರ್ ಆಗಿ ಅಬ್ದುಲ್ಲಾಹ್ ಅಹ್ಸನಿ ಮಾಡನ್ನೂರು – ಡೈರೆಕ್ಟರ್ ರಾಗಿ ಹಸೈನಾರ್ ಜಯನಗರ ಆಯ್ಕೆ

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ಎಂಎ ದಕ್ಷಿಣ ಕನ್ನಡ ಜಿಲ್ಲಾ ಎಲೆಕ್ಷನ್ ಡೈಯರಕ್ಟರೇಟ್ ರಾಗಿ ಏಳು ಮಂದಿಯನ್ನು ಆಯ್ಕೆ ಮಾಡಲಾಗಿದ್ದು ಸಮಿತಿಯ ಚೇರ್ಮನ್ ಆಗಿ ಅಸ್ಸಯ್ಯದ್ ಸಾದಾತ್ ತಂಙಳ್ ಕರವೇಲು , ಬೆಳ್ಳಾರೆ ಜೋನಲ್ ಸಮಿತಿಯಿಂದ ಚೀಫ್ ಡೈರೆಕ್ಟರ್ ಆಗಿ ಅಬ್ದುಲ್ಲಾ ಅಹ್ಸನಿ ಮಾಡನ್ನೂರು ಡೈರೆಕ್ಟರ್ ಆಗಿ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ. ನವಂಬರ್ 17ರಂದು ಉಪ್ಪಿನಂಗಡಿಯ ನೆಕ್ಕಿಲಾಡಿ...
Ad Widget

ಎಸ್ ಎಮ್ ಎ(ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ )ದ. ಕ. ಜಿಲ್ಲಾ ಈಸ್ಟ್ ಎಲೆಕ್ಷನ್ ಕ್ರಿಯೇಶನ್ ಸಮಾವೇಶ 2020 ಮತ್ತು ತಾಜುಲ್ ಉಲಮಾ ಅನುಸ್ಮರಣೆ

ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಪುತ್ತೂರು ಸಮಿತಿ ವತಿಯಿಂದ ಎಸ್ಎಂಎ ಎಲೆಕ್ಷನ್ ಕ್ರಿಯೇಶನ್ ಸಮಾವೇಶ 20 20 ಹಾಗೂ ಸೈಯದ್ ತಾಜುಲ್ ಉಲಮಾ ಅನುಷ್ಮರಣಾ ಕಾರ್ಯಕ್ರಮ ನವಂಬರ್17 ರಂದು ಜಿಲ್ಲಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಕೊಡುಂಗೈ ರವರ ಅಧ್ಯಕ್ಷತೆಯಲ್ಲಿ ನೆಕ್ಕಿಲಾಡಿ ಮದ್ರಸ ಸಭಾಂಗಣದಲ್ಲಿ ನಡೆಯಿತು. ಅಸ್ಸಯ್ಯದ್ ಸಾದಾತ್ ತಂಙಳ್ ಕರುವೇಲು ದುವಾ ನೇತೃತ್ವ...

ರಾಜ್ಯಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ ಆಯ್ಕೆ

ಕರುನಾಡು ಸಾಹಿತ್ಯ ಪರಿಷತ್ತು,ತಾಲ್ಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಯಲ್ಲಿ 1ರಿಂದ 5 ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಯ 5ನೇ ತರಗತಿಯ ಮನುಜ್ಞ ಯು.ಬಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ  ಭಾಜನರಾಗಿದ್ದಾರೆ....

ನಾಲ್ಕೂರು : ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ

ನಾಲ್ಕೂರು ಗ್ರಾಮದ ನಡುಗಲ್ಲು ಆಂಜೇರಿ ಮತ್ತು ಚಾರ್ಮತ ಪರಮಲೆ ಎಂಬಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಯ ‌ ಗುದ್ದಲಿ ಪೂಜೆಯನ್ನು ಶಾಸಕರಾದ ಎಸ್ ಅಂಗಾರ ನೆರವೇರಿಸಿದರು. ಸುಮಾರು 15 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.

ನ.20 : ಗುತ್ತಿಗಾರಿನಲ್ಲಿ ವಿವಿಧ ಯೋಜನೆಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮ

ಅಕ್ರಮ-ಸಕ್ರಮದ ಅಡಿಯಲ್ಲಿ ಜಾಗ ಮಂಜೂರಾತಿ ಮತ್ತು ಸರಕಾರದ ವೈಯಕ್ತಿಕ ಯೋಜನೆಗಳ ಅನುಷ್ಠಾನ ಸಭೆ ನ. 20 ರಂದು ಗುತ್ತಿಗಾರು ಗ್ರಾ.ಪಂ‌‌‌. ಪರಿಶಿಷ್ಟ ವರ್ಗದ ಸಭಾಭವನದಲ್ಲಿ ನಡೆಯಲಿದೆ. ಈ ವೇಳೆ ಮನೆ - ಮನೆ ಆಸರೆ ಹಾಗೂ ವಿವಿಧ ಯೋಜನೆಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಉಬರಡ್ಕ : ನರಸಿಂಹ ದೇವಸ್ಥಾನದಲ್ಲಿ ಸಾರ್ವಜನಿಕ ರಂಗಪೂಜೆ ಆರಂಭ

ಉಬರಡ್ಕ ಶ್ರೀ ನರಸಿಂಹ ದೇವಾಲಯದಲ್ಲಿ ಸಾರ್ವಜನಿಕ ರಂಗಪೂಜೆಯು ನ.16 ರಿಂದ ಆರಂಭಗೊಂಡಿದ್ದು ಡಿ. 14 ತನಕ ನಡೆಯಲಿರುವುದು. ಪ್ರತಿದಿನ ಸಾಯಂಕಾಲ ವಿವಿಧ ಭಜನ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಬಾಳುಗೋಡು : ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ನ.12 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ನಲ್ಲಿ ಬಿಬಿಬಿಪಿ ಯೋಜನೆಯಡಿಯಲ್ಲಿ ಗ್ರಾಮ ಮಟ್ಟದ "ಹೆಣ್ಣು ಮಕ್ಕಳ ಶಿಶು ಪ್ರದರ್ಶನ" ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರೇಮ್...

ತೊಡಿಕಾನ : ಶ್ರೀ ದೇವರ ಬಲಿ ಹೊರಡುವ ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳದಲ್ಲಿ ಬಲಿ ಹೊರಡುವ ಕಾರ್ಯಕ್ರಮ ನಡೆಯಿತು.ಪ್ರತಿವರ್ಷ ದೀಪಾವಳಿಯಂದು ಶ್ರೀ ದೇವರ ಬಲಿ ಹೊರಡುವ ಕಾರ್ಯಕ್ರಮ ನಡೆಯುತ್ತದೆ. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

ರುದ್ರಚಾಮುಂಡಿ ಕುಶಾಲಪ್ಪ ಮಾಸ್ತರ್ ಮನೆಯಲ್ಲಿ ಬಲಿಯೇಂದ್ರ ಪೂಜೆ

ಕಂದ್ರಪ್ಪಾಡಿ ರುದ್ರಚಾಮುಂಡಿ ಮನೆಯ ಕುಶಾಲಪ್ಪ ಮಾಸ್ತರ್ ಮನೆಯಲ್ಲಿ ಬಲಿಯೇಂದ್ರ ಪೂಜೆ ನ‌.16 ರಂದು ನಡೆಯಿತು.
Loading posts...

All posts loaded

No more posts

error: Content is protected !!