ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ

ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರಸಾದ್ ಟೆಕ್ಸ್ ಟೈಲ್ಸ್ ನ ಸುವರ್ಣ ಮಹೋತ್ಸವದ ಅಂಗವಾಗಿಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇವರ ಸಹಯೋಗದೊಂದಿಗೆ ಜು- 28ರಿಂದ ಆ. 12ರ ವರೆಗೆ ಶೋರೂಂನ ಭಾಗದಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ ಹಾಗೂ ಭಾರೀ ದರ ಕಡಿತ...

ಕಳಂಜ : ಪಟ್ಟೆ ಗುಳಿಗ ಬನದಲ್ಲಿ ಆಟಿಯ ಅಗೇಲು ಸೇವೆ

ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.8 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತರು ಉಪಸ್ಥಿತರಿದ್ದರು.
Ad Widget

ಅಜ್ಜಾವರ : ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆಗಳನ್ನು ತೆರವುಗೊಳಿಸಿದ ಸ್ಥಳೀಯರು

ಅಜ್ಜಾವರ ಗ್ರಾಮದ ಕೊಂಬರಡ್ಕ ರಸ್ತೆಬದಿಗಳಲ್ಲಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ರೆಂಬೆ ಕೊಂಬೆಗಳನ್ನು ಕಡಿಯುವ ಮೂಲಕ ಸ್ಥಳೀಯ ಯುವಕರ ತಂಡವು ಶ್ರಮದಾನ ನಡೆಸಿದೆ.ಈ ಶ್ರಮದಾನ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳಾದ ದಾಮೋದರ, ಗಣೇಶ ಪಳ್ಳತ್ತಡ್ಕ, ರಾಮಾದಾಸ , ಗಂಗಾಧರ , ವಿಜಯ , ಜಯರಾಜ್ , ಪವಿತ್ರಕುಮಾರ್, ನಿಖಿಲ್ , ‌ಚಂದ್ರಶೇಖರ, ವಿಜಯಕುಮಾರ್,ಮೋಹನ ಕಾಂತಮಂಗಲ , ದೀಕ್ಷಿತ್...

ಸುಬ್ರಹ್ಮಣ್ಯ : ಶಿಕ್ಷಕನ ಮೇಲೆ ಅತ್ಯಾಚಾರ ಆರೋಪ – ಬಂಧನ

ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಸುಬ್ರಹ್ಮಣ್ಯ : ಶಿಕ್ಷಕನ ಮೇಲೆ ಅತ್ಯಾಚಾರ ಆರೋಪ – ಬಂಧನ

ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.

ನೆಲ್ಲೂರು ಕೆಮ್ರಾಜೆ: ಕೆರೆಗೆ ಬಿದ್ದು ತಾಯಿ- ಮಗು ಮೃತ್ಯು

ನೆಲ್ಲೂರು ಕೆಮ್ರಾಜೆ ಯ ಮಾಪಲಕಜೆಯಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಹಾಗೂ ಮಗುವಿನ ಮೃತದೇಹ ಮೇಲೆತ್ತಲಾಗಿದ್ದು...

ಬೆಳ್ಳಾರೆ : ಸಚಿವ ಅಂಗಾರರಿಗೆ ಮನವಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರರನ್ನು ಭೇಟಿ ಮಾಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ತಡಕಜೆ 3 ಮೂರನೇ ವಾರ್ಡಿನ ಸದಸ್ಯರಾದ ದಿನೇಶ್ ಚಂದ್ರ, ವೀಣಾ, ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ, ಜಯರಾಮ ಉಮಿಕ್ಕಳ, ರಾಮಕೃಷ್ಣ ಭಟ್, ಪ್ರೇಮ್ ಸ್ಟುಡಿಯೋ ಬೆಳ್ಳಾರೆ, ಉಲ್ಲಾಸ್ ಹೊಟೇಲ್ ವಸಂತ, ಮಾಧವ ತಡಕಜೆ, ಸುರೇಶ್ ಕುಮಾರ್ ಶೆಟ್ಟಿ ಪನ್ನೆ, ಪ್ರದೀಪ್...

ಶಾಂತಿನಗರ : ನ.ಪಂ.ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ

ಇತ್ತೀಚೆಗೆ ಸುಳ್ಯದ ಶಾಂತಿನಗರದಲ್ಲಿ ಗುಂಡು ಹಾರಿಸಿ ಕೊಲೆ ನಡೆದ ಪ್ರಕರಣದಲ್ಲಿ ಕೊಲೆಯಾದ ವ್ಯಕ್ತಿ ಶಾಂತಿನಗರದ ಪದ್ಮನಾಭ ಎಂಬವರ ಮನೆಯಲ್ಲಿ ಬಿದ್ದಿದ್ದರು. ಇದರಿಂದಾಗಿ ಪದ್ಮನಾಭರು ಅನಿವಾರ್ಯವಾಗಿ ಮನೆ ಬದಲಿಸಬೇಕಾದ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಅವರಿಗೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ 1.5 ಲಕ್ಷ ರೂಪಾಯಿಗಳ ಸಹಾಯಧನ ಮಂಜೂರು ಮಾಡುವರೇ ಕ್ರಮಕೈಗೊಳ್ಳಲಾಗಿದ್ದು ಹಾಗೂ ನಗರ ಪಂಚಾಯಿತ್ ನಿಧಿಯಿಂದ...

ಗುತ್ತಿಗಾರು : ಉಚಿತ ಯೋಗ ಥೆರಪಿ ಆರಂಭ

ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ‌ದಲ್ಲಿ ಪ್ರತಿ ಆದಿತ್ಯವಾರ ಬೆಳಿಗ್ಗೆ ಗಂಟೆ 10 ರಿಂದ 11 ರ ತನಕ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ. ಸೊಂಟ ನೋವು, ಬೆನ್ನು ನೋವು, ಕುತ್ತಿಗೆ ನೋವು, ಗಂಟು ನೋವುಗಳನ್ನು ಶಮನಗೊಳಿಸುವ ಯೋಗ ಥೆರಪಿಯನ್ನು ಯೋಗ ಶಿಕ್ಷಕ ಪ್ರಸನ್ನ ಭಟ್ ಉಚಿತವಾಗಿ ನೀಡಲಿದ್ದಾರೆ.

ಪಂಜ : ಕೋವಿಡ್ ಕೇರ್ ಸೆಂಟರ್ ನಲ್ಲಿ ಗ್ರಾ.ಪಂ.ಸದಸ್ಯ ವಿಜಯಕುಮಾರ್ ನೇತೃತ್ವದಲ್ಲಿ ಸ್ವಚ್ಚತೆ

ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ಚಾರ್ಮತ ಇವರ ನೇತೃತ್ವದಲ್ಲಿ ಶಾಲೆಯನ್ನು ಸ್ವಚ್ಛತೆ ಮಾಡಲಾಯಿತು.‌ ಪಾಸಿಟಿವ್ ಬಂದವರು ಕೋವಿಡ್ ಕೇರ್ ಗೆ ದಾಖಲಾಗುಲು ಹಿಂಜರಿಯುತ್ತಿರುವ ಈ ಸಂದರ್ಭದಲ್ಲಿ ತಾನೇ ಸ್ವತಃ ದಾಖಲಾಗಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಜತೆಗೆ ಇತರ ಜನಪ್ರತಿನಿಧಿಗಳಿಗೆ...
Loading posts...

All posts loaded

No more posts

error: Content is protected !!