- Saturday
- March 14th, 2026
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹೊಸದಾಗಿ ರಚಿಸಲಾದ ಗೀತೆಯನ್ನು ಯೂಟ್ಯೂಬ್ ನಲ್ಲಿ ಟಾಲೆಂಟ್ ಹಂಟರ್ಸ್ ಎಂಬ ಚಾನೆಲ್ ನಲ್ಲಿ ನವಂಬರ್ 1 ರಂದು ಬಿಡುಗಡೆ ಮಾಡಲಾಯಿತು. ನಮ್ಮ ಕನ್ನಡದ ಜನಪ್ರಿಯ ಸಂಸ್ಕೃತಿಯನ್ನು ಎತ್ತಿ ತೋರಿಸುವ ಮೂಲಕ ಹೊಸ ಪ್ರಯತ್ನದಲ್ಲಿ ಗಾಯಕನಾಗಿ ಉಜಿತ್ ಶ್ಯಾಮ್ ಚಿಕ್ಮುಳಿ, ಕೊಳಲಿನಲ್ಲಿ ವೀಕ್ಷಿತ್ ಕುತ್ಯಾಳ ಇವರಿದ್ದು ಉತ್ತಮವಾಗಿ ಮೂಡಿಬಂದಿದೆ. ವೀಕ್ಷಿಸಲು ಇಲ್ಲಿ ಕ್ಲಿಕ್...
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು ಮಂಗಳೂರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯದ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು, ಹಾಗೂ ಪ್ರಗತಿಪರ ಕೃಷಿಕ ವಿಶ್ವನಾಥ ಪೈ ಯವರಿಗೆ ಪ್ರಶಸ್ತಿ ಪ್ರಧಾನ ನಡೆಯಿತು. ಸಂಸದ ನಳೀನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.
ಕೊಡಗಿನ ಸುಂಟಿಕೊಪ್ಪ ಎಂಬಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಥಳೀಯ ನಿವಾಸಿ ಎಂ.ಎಸ್. ರವಿ ಎಂಬುವವರು ಕನ್ನಡದ ಧ್ವಜ ಮತ್ತು ಕನ್ನಡದ ಪೇಟವನ್ನು ಧರಿಸಿ ಪೇಟೆಯಲ್ಲಿ ಸಂಚರಿಸಿ ಜನರಲ್ಲಿ ವಿಶೇಷ ಆಕರ್ಷಣೆಯನ್ನು ಮೂಡಿಸುತ್ತಿದ್ದಾರೆ. ಇವರು ಸತತ 25 ವರ್ಷಗಳಿಂದ ಕನ್ನಡದ ಕಂಪನ್ನು ಬೀರುತ್ತಿದ್ದಾರೆ. ಡಾಕ್ಟರ್ ರಾಜಕುಮಾರ್ ಅಭಿಮಾನಿ ಬಳಗದಲ್ಲಿ ಗುರುತಿಸಿಕೊಂಡು, ಪ್ರಸ್ತುತ ಸುಂಟಿಕೊಪ್ಪ ಡಾಕ್ಟರ್ ಅಂಬೇಡ್ಕರ್ ಸಂಘದ...
ಕಡಬ ತಾ. ಎಡಮಂಗಲ ಗ್ರಾಮದ ದೋಣಿಮನೆ ದಿ.ಮುತ್ತಪ್ಪ ಗೌಡರ ಪುತ್ರ ದೀಪಕ್ ರ ವಿವಾಹವು ಕಡಬ ತಾ. ಕೊಣಾಜೆ ಗ್ರಾಮದ ಪಟ್ಲ ಮನೆ ರುಕ್ಮಯ್ಯ ಗೌಡರ ಪುತ್ರಿ ಮಲ್ಲಿಕಾ ರೊಂದಿಗೆ ವರನ ಮನೆಯಲ್ಲಿ ಅ.28 ರಂದು ನಡೆಯಿತು.
ದೇವಚಳ್ಳ ಗ್ರಾಮದ ಹಿರಿಯಡ್ಕ ನಿವೃತ್ತ ಶಿಕ್ಷಕ ಬಾಲಕೃಷ್ಣ ಗೌಡ ಮತ್ತು ಶೀಲಾವತಿ ದಂಪತಿಗಳ ಪುತ್ರ ಪುನೀತ್ ರವಿ ಯವರ ವಿವಾಹವು ಗುತ್ತಿಗಾರು ಗ್ರಾಮದ ಕೊಡಂಗೊಳಿ- ಚಿದ್ಗಲ್ಲು ಧರ್ಮಾವತಿ ಮತ್ತು ನಾರಾಯಣ ಗೌಡರ ಪುತ್ರಿ ಕವಿತಾ ಳೊಂದಿಗೆ ಅ.25 ರಂದು ವಧುವಿನ ಮನೆಯಲ್ಲಿ ನಡೆಯಿತು.
ದೇವಚಳ್ಳ ಗ್ರಾಮದ ವಾಲ್ತಾಜೆ ರವೀಂದ್ರ ಹಾಗೂ ಕುಸುಮಾವತಿ ದಂಪತಿಗಳ ಪುತ್ರ ರಕ್ಷಿತ್ ವಿ.ಆರ್. (ವಿನು) ರವರ ವಿವಾಹ ನಿಶ್ಚಿತಾರ್ಥವು ಜಾಲ್ಸೂರು ಗ್ರಾಮದ ಕಾಳಮನೆ ಮಾಧವ ಗೌಡ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ ಅಶ್ವಿನಿ ಯೊಂದಿಗೆ ಅ.31 ರಂದು ವಧುವಿನ ಮನೆಯಲ್ಲಿ ನಡೆಯಿತು.
ಗುತ್ತಿಗಾರು ಗ್ರಾಮದ ವಿವಿಧ ಬೂತ್ಗಳ ಬಿಜೆಪಿ ಕಾರ್ಯಕರ್ತರ ಸಭೆಯು ಅ.30ರಂದು ಚಿಕ್ಮುಳಿಯಲ್ಲಿ ನಡೆಯಿತು. ಗುತ್ತಿಗಾರು ಗ್ರಾಮದ ಬೂತ್ ಸಂಖ್ಯೆ 121, 122ನೇ ಬೂತಿನ ಕಾರ್ಯಕರ್ತರ ಸಭೆಯು ಅ 30 ರಂದು ದೇವಿಪ್ರಸಾದ್ ಚಿಕ್ಮುಳಿ ಇವರ ಮನೆಯಲ್ಲಿ ನಡೆಯಿತು. ಸಭೆಗೆ ಮಾನ್ಯ ಶಾಸಕರಾದ ಶ್ರೀ ಎಸ್ ಅಂಗಾರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಮತ್ತು ಸುಳ್ಯ ಮಂಡಲ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಸಾಮಾಜಿಕ ಜಾಲತಾಣದ ಪದಗ್ರಹಣ ಸಮಾರಂಭ ಇಂದು ಸುಳ್ಯದ ಬಿಜೆಪಿ ಕಚೇರಿಯಲ್ಲಿ ನಡೆಯಿತು. ವೇದಿಕೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಭಾ.ಜ.ಪಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಅಜಿತ್ ಉಳ್ಳಾಲ, ಜಿಲ್ಲಾ ಸಹ ಸಂಚಾಲಕ ಸಂದೀಪ್...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ರಾಧಾಕೃಷ್ಣ ಶ್ರೀಕಟೀಲ್ ರವರ ಪುತ್ರಿ ರಮ್ಯಶ್ರೀ ಯ ವಿವಾಹ ನಿಶ್ಚಿತಾರ್ಥವು ಮಂಡೆಕೋಲು ಗ್ರಾಮದ ಕೊಡೆಂಚಿಕಾರ್ ದಿ. ಬಾಲಕೃಷ್ಣ ಗೌಡರ ಪುತ್ರ ಕುಮಾರ್ ರೊಂದಿಗೆ ಅ.31 ರಂದು ಮಾವಿನಕಟ್ಟೆಯ ಶ್ರೀ ವಿಷ್ಣು ಕಲಾಮಂದಿರದಲ್ಲಿ ನಡೆಯಿತು.
Loading posts...
All posts loaded
No more posts
