Ad Widget

ಬೆಳ್ಳಾರೆಯಲ್ಲಿ ಅಭಿನವ ಡಿಜಿಟಲ್ ಸೇವಾ ಎಂಟರ್ ಪ್ರೈಸಸ್ ಶುಭಾರಂಭ

ಬೆಳ್ಳಾರೆಯ ಮುಖ್ಯ ರಸ್ತೆಯಲ್ಲಿರುವ ಶ್ರೀದೇವಿ ಹೈಟ್ಸ್ ನ 1ನೇ ಮಹಡಿಯಲ್ಲಿ ದೀಕ್ಷಿತ್ ಪೋನಡ್ಕರವರ ಮಾಲಕತ್ವದಲ್ಲಿ ಅಭಿನವ ಡಿಜಿಟಲ್ ಸೇವಾ ಎಂಟರ್ ಪ್ರೈಸಸ್ ಸಂಸ್ಥೆ ಅ.26ರಂದು ಶುಭಾರಂಭಗೊಂಡಿತು. ಬೆಳಗ್ಗೆ 7 ಗಂಟೆಗೆ ಗಣಹೋಮ ನೆರವೇರಿತು.ಬೆಳ್ಳಾರೆ ಆರಕ್ಷಕ ಠಾಣೆಯ ಎಸ್.ಐ. ಆಂಜನೇಯ ರೆಡ್ಡಿ ದೀಪ ಬೆಳಗಿಸಿ ಉದ್ಘಾಟನೆಗೈದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ಉಮೇಶ್ ಮಣಿಕ್ಕಾರ, ಉದ್ಯಮಿಗಳಾದ...

ಹವ್ಯಕ ಭಾಷೆ ಘಮಲು ಹರಡುತ್ತಿದೆ ‘ಐಡಿಯಾ ಬಾಸ್ಕೆಟ್’

ಕೊರೊನಾ ಲಾಕ್‌ಡೌನ್ ನಲ್ಲಿ ಹಲವು ಐಡಿಯಾಗಳು ಹೊರಗೆ ಬಂದಿದ್ದು, ಹಲವು ಪ್ರತಿಭೆಗಳು ಹೊರ ಜಗತ್ತಿಗೆ ಪರಿಚಯವಾಗಿವೆ. ಇದೇ ಹಿನ್ನಲೆಯಲ್ಲಿ ಜನ್ಮ ತಾಳಿದ್ದೇ "ಐಡಿಯಾ ಬಾಸ್ಕೆಟ್' ಎಂಬ ಹವ್ಯಕ ಯೂಟ್ಯೂಬ್ ವಾಹಿನಿ. ಅಳಿಯುತ್ತಿರುವ ಹವ್ಯಕ ಭಾಷೆಯ ಘಮಲನ್ನು ಮತ್ತೆ ಹರಡಿಸಲು ತಯಾರಾದ ಈ ವಾಹಿನಿಯ ಕರ್ತೃ ಡಾ| ಆದಿತ್ಯ ಭಟ್ ಚಣಿಲ.ವೃತ್ತಿಯಲ್ಲಿ ವೈದ್ಯ ವಿದ್ಯಾರ್ಥಿಯಾಗಿರುವ ಆದಿತ್ಯ ಕೊರೊನಾ...
Ad Widget

ಶೇಣಿ- ಹೊಸಮಜಲು ರಸ್ತೆಗೆ ಗುದ್ದಲಿ ಪೂಜೆ

ಶೇಣಿ ಹೊಸಮಜಲು ರಸ್ತಯ ಗುದ್ದಲಿ ಪೂಜೆ ಅ.25ರಂದು ನಡೆಯಿತು. ಗುದ್ದಲಿ ಪೂಜೆಯನ್ನು ಶಾಸಕ ಎಸ್. ಅಂಗಾರ ನೆರವೇರಿಸಿದರು.ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ ಸದಸ್ಯ ರಾಧಾಕೖಷ್ಣ ಬೊಳ್ಳೂರು, ಗ್ರಾ.ಪಂ ಮಾಜಿ ಸದಸ್ಯರಾದ ರತೀನ್ ಚೂಂತಾರು, ನಾರಾಯಣ ಆಚಾರ್ಯ, ನಿರ್ಮಲಾ ರೈ ಹಾಗೂ ಊರವರು ಉಪಸ್ಥಿತರಿದ್ದರು.

ಸುಳ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಸಭೆ

ಸುಳ್ಯ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಸಭೆ ಇಂದು ಘಟಕದ ಅಧ್ಯಕ್ಷ ಆನಂದ ಬೆಳ್ಳಾರೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಬ್ಲಾಕ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ಕಾರ್ಯದರ್ಶಿ ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ತಾಲೂಕು ಘಟಕದ ಪುನರ್ ರಚನೆ, ಸಂಘಟನೆ ಬಲಿಷ್ಠ...

ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಸಭೆ

ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಸಭೆ ಸೋಮಶೇಖರ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಸಂಪಾಜೆ ಸೊಸೈಟಿ ಸಭಾಂಗಣದಲ್ಲಿ ನಡೆಯಿತು . ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರಾಗಿ ನೇಮಕವಾದ ಶವಾದ್ ಗೂನಡ್ಕ ರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ಕುಂಞ ಗೂನಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿ ಜಗದೀಶ್ ರೈ, ಮಾಜಿ...

ಅ.27 : ಎಸ್ ಡಿಪಿಐ ವತಿಯಿಂದ ಜಾಗೋ ಕಿಸಾನ್ ಅಭಿಯಾನದ ಪ್ರಯುಕ್ತ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನಾ ಸಭೆ

ಸುಳ್ಯ:- ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಜಾರಿಗೊಳಿಸಿದ ಸ್ವತಂತ್ರ ಭಾರತದ ಅತ್ಯಂತ ಕರಾಳ ಕೃಷಿ ಕಾನೂನಿನ ವಿರುದ್ಧವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದೇಶವ್ಯಾಪಿ ಅಕ್ಟೋಬರ್ ತಿಂಗಳಿನಲ್ಲಿ "ಜಾಗೋ ಕಿಸಾನ್" ಕೃಷಿ ಸಂಹಾರ ಬಿಜೆಪಿಯ ಹುನ್ನಾರ ಎಂಬ ಹೆಸರಿನಲ್ಲಿ ಅಭಿಯಾನ ಕೈಗೊಂಡಿದ್ದು ಇದರ ಭಾಗವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ...

ಸುಳ್ಯ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಸುಳ್ಯ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಪುರೋಹಿತ ಬ್ರಹ್ಮಶ್ರೀ ನಾಗರಾಜ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಎಎಸ್ಐ ದಾಮೋದರ, ಸುಳ್ಯ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ರೈಟರ್ ದೇವರಾಜ್, ಸಿಬ್ಬಂದಿಗಳಾದ ರಾಮಚಂದ್ರ, ಮಂಜುನಾಥ, ಮೌಲಾನ, ಸುರೇಶ್,...

ಮುಕ್ಕೂರು : ಐದನೇ ವರ್ಷದ ಶ್ರೀ ಶಾರದೋತ್ಸವ

ಮುಕ್ಕೂರು-ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ನಡೆದ 5 ನೇ ವರ್ಷದ ಶ್ರೀ ಶಾರದೋತ್ಸವ ಅ.25 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು. ಪತಂಜಲಿ ಶಾಸ್ತ್ರೀ ಮುಕ್ಕೂರು ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಬೆಳಗ್ಗೆ ಶಾರದಾ ಪ್ರತಿಷ್ಟೆ, ಪೂಜೆ, ಗಣಹೋಮ, ಮಹಾಪೂಜೆ ನಡೆಯಿತು. ಮಧ್ಯಾಹ್ನ ಮುಕ್ಕೂರು ವಠಾರದಿಂದ ಮೆರವಣಿಗೆ ಸಾಗಿ ಚೆನ್ನಾವರ ಗೌರಿ...

ಸಂಪಾಜೆ : ಆನೆ ದಾಳಿ- ಕೃಷಿ ನಷ್ಟ

ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಸರವು ರತ್ನವೇಣಿ ಭಟ್ ಅವರ ಕೃಷಿ ಜಾಗಕ್ಕೆ ಅ.24 ರಂದು ಕಾಡಾನೆ ದಾಳಿ ಮಾಡಿದ್ದು ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ.

ಅಡ್ಕಾರ್ ಶಾಲೆಯಲ್ಲಿ ಕ್ಯಾಂಪಸ್ ಫ್ರಂಟ್ ನಿಂದ ಸ್ವಚ್ಚತಾ ಕಾರ್ಯಕ್ರಮ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಡ್ಕಾರ್ ಯುನಿಟ್ ವತಿಯಿಂದ ಅಡ್ಕಾರ್ ಸರ್ಕಾರಿ ಪ್ರಾಥಮಿಕ ಶಾಲೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಲಾಕ್ ಡೌನ್ ನಿಂದಾಗಿ ಶಾಲೆಗಳು ಮುಚ್ಚಿದ್ದರಿಂದ, ಶಾಲೆಯ ಪರಿಸರ ಕಾಡು ಗಿಡಗಳಿಂದ ಆವರಿಸಿತು. ಇದನ್ನು ಮನಗಂಡ ಕ್ಯಾಂಪಸ್ ಫ್ರಂಟ್ ಅಡ್ಕಾರ್ ಯುನಿಟ್ ನ ವಿದ್ಯಾರ್ಥಿಗಳು ಶಾಲೆಯ ಪರಿಸರವನ್ನು ಸ್ವಚ್ಚಗೊಳಿಸಿದರು.ಈ ಸಂಧರ್ಭದಲ್ಲಿ ಸಮಿತಿಯ ಸುಳ್ಯ...
Loading posts...

All posts loaded

No more posts

error: Content is protected !!