ಸುಳ್ಯದ ಕ್ರೀಡಾ ಸಾಧಕಿ ಗೀತಾ ಕಂದಡ್ಕ ದಾವಣಗೆರೆ ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ನೇಮಕ

ಕಿರಿಯ ವಯಸ್ಸಿನಲ್ಲೇ ಕ್ರೀಡಾ ಕ್ಷೇತ್ರದಲ್ಲಿ ಮತ್ತು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ದಾವಣಗೆರೆ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ, ಸುಳ್ಯದ ಗೀತಾ ಕಂದಡ್ಕ ಅವರನ್ನು ವಿ.ವಿ. ಕುಲಪತಿಗಳೂ ಆಗಿರುವ ರಾಜ್ಯಪಾಲರು ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕ ಮಾಡಿದ್ದಾರೆ. ಕಾಲೇಜು ಜೀವನದಲ್ಲಿಯೇ...

ಸುಳ್ಯ: ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಸಂಘದ ಯಕ್ಷಗಾನ ತರಬೇತಿ ಉದ್ಘಾಟನೆ

ಕೋಡ್ಲ ಗಣಪತಿ ಭಟ್ ಸಂಚಾಲಕತ್ವದ ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಸಂಘದ 38ನೇ ವರ್ಷದ ಯಕ್ಷಗಾನ ತರಬೇತಿ ಕಾರ್ಯಕ್ರಮವು ಸುಳ್ಯದ ಶ್ರೀ ಚೆನ್ನಕೇಶವ ದೇವಾಸ್ಥಾನದ ರಾಜಗೋಪುರದ ಸಭಾಂಗಣದಲ್ಲಿ ಜು.11ರಂದು ಉದ್ಘಾಟನೆಗೊಂಡಿತು. ಸುಳ್ಯದ ಈಶ ಸೋಲಾರ್ & ಬ್ಯಾಟರಿ ಸಂಸ್ಥೆಯ ಮಾಲಕ ರಾಜೇಶ್ ಶೆಟ್ಟಿ ಮೇನಾಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಯಕ್ಷಗಾನ ಒಂದು ಅದ್ಭುತಕಲೆಯಾಗಿದ್ದು, ಅವಿವಿಭಜಿತ ದಕ್ಷಿಣ ಕನ್ನಡ...
Ad Widget

ಅಮರ ಸುದ್ದಿ ಅಭಿಯಾನ : ನಿಮ್ಮೂರಿನ ಸಮಸ್ಯೆಗಳಿಗೆ ಧ್ವನಿಯಾಗಲಿದೆ – ಸಮಸ್ಯೆಗಳ ಬಗ್ಗೆ ತಿಳಿಸಿ

ಸುಳ್ಯ ತಾಲೂಕು ಗ್ರಾಮಾಂತರ ಪ್ರದೇಶಗಳ ತಾಣ. ಇಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು ಬೇಕಾದಷ್ಟಿವೆ. ಅದರಲ್ಲಿಯೂ ತುರ್ತು ಅಗತ್ಯಗಳು ಹಲವಾರು ಇವೆ. ಗ್ರಾ.ಪಂ.ಅಧ್ಯಕ್ಷರ, ಶಾಸಕರ, ಸಚಿವರ ಭರವಸೆಯ ಬಳಿಕವೂ ಬಗೆ ಹರಿಯದ ಹಲವಾರು ಸಮಸ್ಯೆಗಳಿವೆ. ಅವುಗಳಿಗೆ ಮಾಧ್ಯಮ ಸ್ಪರ್ಶ ನೀಡಿ ಸಂಬಂಧಪಟ್ಟವರ ಗಮನಕ್ಕೆ ತರುವ ಕಾರ್ಯ ಅಮರ ಸುದ್ದಿ ಮಾಡಲಿದೆ. ಗ್ರಾಮ ಹಾಗೂ ನಗರ ವ್ಯಾಪ್ತಿಗೆ ಸಂಬಂಧಿಸಿದ...

ಸುಬ್ರಹ್ಮಣ್ಯ : ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ೭೩ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ ಧ್ವಜಾರೋಹಣ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ|ಗೋವಿಂದ್.ಎನ್.ಎಸ್ ವಹಿಸಿದ್ದರು. ಹಿರಿಯ ಕಾರ್ಯಕರ್ತರಾದ ಮಂಜುನಾಥ್ ಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ಘಟಕದ ನಗರ...

ಸುಳ್ಯ : ರೋಟರಿ ಕ್ಲಬ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗೆ ಸನ್ಮಾನ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಆಲೆಟ್ಟಿ ಗ್ರಾಮದ ಮೆಸ್ಕಾಂ ಇಲಾಖೆಯ ಪವರ್ ಮ್ಯಾನ್ ಅನಿಲ್ ರವರ ಸೇವೆಯನ್ನು ಗುರುತಿಸಿ ಅಭಿನಂದಿಸುವ ಕಾರ್ಯಕ್ರಮ ಜು.8 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಗುರುರಾಜ್ ವೈಲಾಯ, ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪಿ.ಡಿ.ಜಿ.ಎಂ.ಎಂ.ಸುರೇಶ್ ಚೆಂಗಪ್ಪ, ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ ಎನ್., ಝೋನಲ್ ಲೆಫ್ಟಿನೆಂಟ್ ಭಾನುಪ್ರಕಾಶ್, ಕಾರ್ಯದರ್ಶಿ ಅಬ್ಬಾಸ್...

ಕುಟುಂಬ ಯೋಜನೆ ದೇಶದ ಅಭಿವೃದ್ಧಿ ಗೆ ಸಹಕಾರಿ- ಡಾ.ನಂದಕುಮಾರ್

ಕುಟುಂಬ ಯೋಜನೆಯನ್ನು ಸರಿಯಾಗಿ ಪಾಲನೆ ಮಾಡಿದರೇ ಜನಸಂಖ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಈಗಿನ ವಿಪತ್ತಿನ ಸನ್ನಿವೇಶದಲ್ಲೂ ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಭಾರತದ ಸರ್ವಾಂಗಿಣ ಅಭಿವೃದ್ಧಿಗೆ ಜನರು ಸಹಕರಿಸಬೇಕಿದೆ ಎಂದು ತಾಲೂಕು ಅರೋಗ್ಯ ಅಧಿಕಾರಿ ಡಾ.ನಂದಕುಮಾರ್ ಹೇಳಿದರು. ಸುಳ್ಯ ಶಾಂತಿನಗರ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ಯೋಜನೆಯ ಅರ್ಹ ಫಲಾನುಭವಿಗಳಿಗೆ...

ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಅಂಗವಾಗಿ ಧ್ವಜಾರೋಹಣ ಹಾಗೂ ಸಸಿನೆಡುವ ಕಾರ್ಯಕ್ರಮ

  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಅಡ್ಕಾರು ವನವಾಸಿ ಕೇಂದ್ರದಲ್ಲಿ ಧ್ವಜಾರೋಹಣ ,ಸ್ವಚ್ಛತೆ ಮತ್ತು ಸಸಿ ಹಂಚುವ ಕಾರ್ಯಕ್ರಮ ಮಾಡಲಾಯಿತು ನಂತರ ವಿವೇಕಾನಂದ ಶಾಲೆಯ ಹೊರ ಆವರಣದಲ್ಲಿ ಕೆಲವು ಹಣ್ಣಿನ ಗಿಡಗಳನ್ನು ನೆಡಲಾಯಿತು.ಈ ಸಂಧರ್ಭದಲ್ಲಿ ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜು.13 ರಂದು ರಿಕ್ಷಾ ಚಾಲಕರಿಂದ ತಾಲೂಕಿನಾದ್ಯಂತ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಜು.13ರಂದು ಬಿ.ಎಂ.ಎಸ್ ಸಂಯೋಜಿತ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಜು.9ರಂದು ಪತ್ರಿಕಾಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು. ಸುಳ್ಯ ಹಳೇ ಬಸ್ ನಿಲ್ದಾಣ, ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ದೊಡ್ಡತೋಟ, ಉಬರಡ್ಕ, ಕಲ್ಲುಗುಂಡಿ...

ನಾಟಿಕೇರಿ ಸುಬ್ರಹ್ಮಣ್ಯ ಪ್ರಕಾಶ್ ನಿಧನ

ಅಮರಪಡ್ನೂರು ಗ್ರಾಮದ ಶೇಣಿ ನಾಟಿಕೇರಿದಿ.ಸೀತಾರಾಮ ಭಟ್ ರವರ ಪುತ್ರ ನಾಟಿಕೇರಿ ಸುಬ್ರಹ್ಮಣ್ಯಪ್ರಕಾಶ್ ರವರು ಜು. 8 ರಂದು ನಿಧನರಾದರು. ಅವರಿಗೆ29 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ. ಅವರಿಗೆ ಕಳೆದ 5 ದಿನದ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆದಾಖಲಿಸಲಾಯಿತು. ಅಲ್ಲಿ ಕೊರೊನಾಪರೀಕ್ಷೆಗೊಳಪಡಿಸಿದಾಗ ಅವರಿಗೆ ಪಾಸಿಟಿವ್ದೃಢಪಟ್ಟಿರುವುದಾಗಿ ತಿಳಿದು...

ಸುಳ್ಯದಲ್ಲಿಂದು 36 ಪಾಸಿಟಿವ್ – ತಾಲೂಕಿನಲ್ಲಿ 250 ಸಕ್ರೀಯ ಪ್ರಕರಣ

ಸುಳ್ಯ ತಾಲೂಕಿನಲ್ಲಿ ಇಂದು 36 ಕೋವಿಡ್ ಪಾಸಿಟಿವ್ ಬಂದಿದ್ದು ಪುನಃ ಏರಿಕೆಯಾಗಿದೆ. ಒಟ್ಟು ತಾಲೂಕಿನಲ್ಲಿ 250 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Loading posts...

All posts loaded

No more posts

error: Content is protected !!