ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು...

ಸುಳ್ಯದಲ್ಲಿ ಇಂದು 42 ಪ್ರಕರಣ – ಒಟ್ಟು 329 ಸೋಂಕಿತರು – 29 ಜನ ಗುಣಮುಖ

ಸುಳ್ಯ ತಾಲೂಕಿನಲ್ಲಿ ಇಂದು 42 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ನಿನ್ನೆ 86 ಕ್ಕೇರಿದ ಪ್ರಕರಣ ಇಂದು ಕಡಿಮೆಯಾಗಿ 42 ಮಂದಿಗೆ ಪಾಸಿಟಿವ್ ಬಂದಿದೆ. ಸುಳ್ಯದಲ್ಲಿ ಒಟ್ಟು 329 ಪ್ರಕರಣಗಳಿವೆ. 29 ಜನ ಗುಣಮುಖರಾಗಿದ್ದಾರೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Ad Widget

ಲಸಿಕೆ ಲಭ್ಯವಿಲ್ಲ ಎಂದರೆ ಹೇಗೆ ?

ಲಸಿಕೆ ಲಭ್ಯವಿಲ್ಲದ ಕಾರಣ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಕೆವಿಜಿ ಪುರಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಾಳೆ(ಮೇ‌4) ಲಸಿಕಾ ಕಾರ್ಯಕ್ರಮ ಇರುವುದಿಲ್ಲ. ಯಾವುದೇ ಲಸಿಕೆ ಲಭ್ಯವಿಲ್ಲದ ಕಾರಣ ಲಸಿಕಾ ಕಾರ್ಯಕ್ರಮ ನಾಳೆ ಇರುವುದಿಲ್ಲ. ಕೋವಿಡ್ ಲಸಿಕೆ ಬಂದಾಗ ತಿಳಿಸಲಾಗುವುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಕೋವಿಡ್ ಪ್ರತಿರೋಧಕವಾಗಿ ನೀಡುವ ಕೋವ್ಯಾಕ್ಸಿನ್ ಕೆಲವು...

ಲಸಿಕೆ ಕೊರತೆ : ಪುರಭವನದಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕೆ ವಿತರಣೆ ಸ್ಥಗಿತ

ಲಸಿಕೆ ಕೊರತೆಯಾಗಿರುವ ಕಾರಣದಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಕೆವಿಜಿ ಪುರಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಾಳೆ(ಮೇ‌4) ಲಸಿಕಾ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಯಾವುದೇ ಲಸಿಕೆ ಲಭ್ಯವಿಲ್ಲದ ಕಾರಣ ಲಸಿಕಾ ಕಾರ್ಯಕ್ರಮ ನಾಳೆ ಇರುವುದಿಲ್ಲ. ಕೋವಿಡ್ ಲಸಿಕೆ ಬಂದಾಗ ತಿಳಿಸಲಾಗುವುದು ಎಂದು ತಾಲೂಕು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಪ್ರತಿರೋಧಕವಾಗಿ ನೀಡುವ ಕೋವ್ಯಾಕ್ಸಿನ್...

ಕಾಂಚೋಡು ದೇವಸ್ಥಾನದಲ್ಲಿ ಕರಸೇವೆ – ಕೆರೆಯ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಕೆರೆಯ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯವನ್ನು ದೇವಾಲಯದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು ಅವರ ಮಾರ್ಗದರ್ಶನದಲ್ಲಿ ಮೇ 2 ರಂದು ಕರಸೇವೆಯ ಮೂಲಕ ನಡೆಸಲಾಯಿತು. ಗೋವಿಂದಯ್ಯ ಕಾಂಚೋಡು, ಸತ್ಯನಾರಾಯಣ ಕಾಂಚೋಡು,ರಾಮಪ್ರಸಾದ ಕಾಂಚೋಡು, ಮಹಾಬಲೇಶ್ವರ ಕಾಂಚೋಡು,ರವಿಶಂಕರ ಕಾಂಚೋಡು, ಅಣ್ಣಪ್ಪ ನಾೖಕ ಅಯ್ಯನಕಟ್ಟೆ, ಗುರುವಪ್ಪ ನಾೖಕ ಚಾಕೊಟೆಡ್ಕ, ಶಿವಪ್ಪ ನಾೖಕ ಚಾಕೊಟೆಡ್ಕ, ಜಾಹ್ನವಿ ಕಾಂಚೋಡು,...

ತುರ್ತು ಸೇವೆಗೆ ಸನ್ನದ್ಧ ವಾದ ಸೇವಾಭಾರತಿ -ಗ್ರಾಮ ಮಟ್ಟದಲ್ಲಿ ತಂಡ ರಚನೆ

ಕೋವಿಡ್ 19 ಮಹಾಮಾರಿ ವಿಶ್ವವನ್ನೇ ಕಂಗೆಡಿಸಿ ಇದೀಗ ಒಂದು ವರ್ಷ ಕಳೆದಿದ್ದು ಕೋವಿಡ್‌ನ ಎರಡನೇ ಅಲೆ ಬರಸಿಡಿಲಿನಂತೆ ಸಮಾಜಕ್ಕೆ ಅಪ್ಪಳಿಸಿದೆ. ಕಳೆದ ವರ್ಷಕ್ಕಿಂತ ಹೆಚ್ಚು ಭೀಕರತೆ ಕಾಣಿಸುತ್ತಿದೆಯಾದರೂ ಈ ವೈರಸ್ ಅನ್ನು ಸಮರ್ಥವಾಗಿ ಎದುರಿಸಲು ದೇಶದ ವೈದ್ಯರು, ವಿಜ್ಞಾನಿಗಳು, ತಜ್ಞರು ಸದೃಢವಾಗಿ ಸಿದ್ಧರಾಗಿರುವುದು ಆಶಾಸ್ಪದ ಸಂಗತಿ. ಸಾಮಾಜಿಕ ಅಂತರ ಕಾಪಾಡುವುದು ಮತ್ತು ಆದಷ್ಟು ಮನೆಯಲ್ಲೇ ಇದ್ದು...

ಸುಳ್ಯದಲ್ಲಿ 86 ಕ್ಕೇರಿದ ಕೊರೊನ ಸೋಂಕಿತರ ಸಂಖ್ಯೆ

ಸುಳ್ಯ ತಾಲೂಕಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತ ಹೋಗುತ್ತಿದ್ದು ಇಂದು 86 ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ನಿನ್ನೆ 65 ಪ್ರಕರಣ ಪತ್ತೆಯಾಗಿದ್ದು, ಇಂದು 86 ಮಂದಿಗೆ ಪಾಸಿಟಿವ್ ಬಂದಿದ್ದು, ಪ್ರಕರಣದ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕಲಾಮಾಯೆ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಕುವೆಂಪುಸ್ಪರ್ಧಿ : ಆತ್ಮಶ್ರೀ ಎಂ. ಲಿಂಕ್ ಬಳಸಿ ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/dIS_ZbEuJZU

ಕಲಾಮಾಯೆ ಆಶ್ರಯದಲ್ಲಿ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಬಿ.ಆರ್.ಲಕ್ಷ್ಮಣ ರಾವ್ಸ್ಪರ್ಧಿ :- ಯಶಸ್ವಿ ಪಿ. ಭಟ್ ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/2XgN3Qf5Byg

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ

ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಲಾಗಿದೆ.
Loading posts...

All posts loaded

No more posts

error: Content is protected !!