Ad Widget

ಸುಳ್ಯ : ಡ್ರಗ್ಸ್ ವಿರುದ್ಧ ಎಬಿವಿಪಿ ಪತ್ರ ಚಳುವಳಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ, ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ಸೆ.26 ರಂದು ಸುಳ್ಯದ ಅಂಚೆಕಛೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಳ್ಳಲಾಯಿತು. 'ಡ್ರಗ್ಸ್ ಮುಕ್ತ ಕರ್ನಾಟಕ' ದಿಸೆಯಲ್ಲಿ ಈ ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಎ.ಬಿ.ವಿ.ಪಿ.ಯ ನಗರ...

ಪುತ್ತೂರು ಡಿವೈಎಸ್ಪಿ ಯಾಗಿ ಕಾರ್ಯನಿರ್ವಹಿಸಿದ್ದ ದಿನಕರ ಶೆಟ್ಟಿ ದ.ಕ. ಜಿಲ್ಲಾ ಡಿ.ಸಿ.ಆರ್.ಬಿ ಡಿ.ಎಸ್.ಪಿ. ಆಗಿ ಕರ್ತವ್ಯಕ್ಕೆ

ಪುತ್ತೂರು ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದ ದಿನಕರ ಶೆಟ್ಟಿ ರವರು ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ತನಿಖಾ ವಿಭಾಗದ ಡಿ ಸಿ ಆರ್ ಬಿ ಡಿ.ಎಸ್.ಪಿ. ಆಗಿ ಮಂಗಳೂರು ಎಸ್ಪಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಪುತ್ತೂರಿನಲ್ಲಿ ದಕ್ಷತೆಯ ಸೇವೆಯನ್ನು ಸಲ್ಲಿಸಿ ಜನಮನ್ನಣೆ ಗಳಿಸಿದ್ದರು.
Ad Widget

ವಳಲಂಬೆ: ಉದ್ಯೋಗ ನೈಪುಣ್ಯ ತರಬೇತಿ ಸಮಾರೋಪ – ವಿವಿಧ ತರಬೇತಿ ಪಡೆದ 252 ಶಿಬಿರಾರ್ಥಿಗಳು

ಗ್ರಾಮ‌ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು(ರಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ವಾರಗಳ ಕಾಲ ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಇಂದು ಸಮಾಪನಗೊಂಡಿತು. ಆರ್ ಎಸ್ ಎಸ್ ಪ್ರಮುಖರಾದ ಡಾ| ಪ್ರಭಾಕರ ಭಟ್ ದೀಪ ಪ್ರಜ್ವಲನೆಗೊಳಿಸಿದರು. ಈ ಸಂದರ್ಭದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿ...

ಲಕ್ಷ ಮೌಲ್ಯದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಗುತ್ತಿಗಾರಿನ ಆಶಾಕಿರಣ್

ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೇಕಲ್ಲು ರವರ ಸುಮಾರು ಒಂದು ಲಕ್ಷ ಮೌಲ್ಯದ ಚಿನ್ನದ ಸರ ಬಿದ್ದು ಬಿದ್ದು ಹೋದ ಘಟನೆ ಸೆ.24 ರಂದು ನಡೆದಿತ್ತು. ಅಂದು ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ (ಮಾತಾ)ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಪೈಕದ ರಾಜ ಸಿ ಹೆಚ್ ರವರ ಮಗ...

ವಳಲಂಬೆ: ನಾಳೆ(ಸೆ.26) ಉದ್ಯೋಗ ನೈಪುಣ್ಯ ತರಬೇತಿ ಸಮಾರೋಪ- ಪ್ರಭಾಕರ ಭಟ್ ಕಲ್ಲಡ್ಕ ಆಗಮನ

ಸ್ವಾವಲಂಬಿ ಸಾಧನೆಗಾಗಿ ವಳಲಂಬೆಯಲ್ಲಿ ಹಮ್ಮಿಕೊಳ್ಳಲಾದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಶನಿವಾರ ತೆರೆ ಬೀಳಲಿದೆ. ಮಧ್ಯಾಹ್ನ ಎರಡು ಗಂಟೆಗೆ ಆರಂಭಗೊಳ್ಳಲಿರುವ ಸಮಾರೋಪ ಸಮಾರಂಭದಲ್ಲಿ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ವಿಭಾಗ ಮುಖ್ಯಸ್ಥರು , ರಾ.ಸ್ವ.ಸೇ ಸಂಘದ ನ.ಸೀತಾರಾಮ, ಚಂದ್ರಶೇಖರ ಭಟ್...

ಕೋಲ್ಚಾರು ತನಕ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಕೂಡಲೆ ಪುನರಾರಂಭಿಸುವಂತೆ ಅಗ್ರಹ – ಧರ್ಮಪಾಲ ಕೊಯಿಂಗಾಜೆ

ಕೆಲವು ತಿಂಗಳುಗಳ ಹಿಂದೆ ಕೊರೊನ ಮಹಾಮಾರಿ ಖಾಯಿಲೆಯಿಂದಾಗಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಸ್ಥಗಿತಗೊಂಡಿತ್ತು . ಅದರೆ ಸರಕಾರ ಬಸ್ ಸಂಚಾರ ಸೇವೆ ಪುನರಾರಂಭಿಸಿರುವುದರಿಂದ ಜನಜೀವನ ಸಹಜ ಸ್ಥಿತಿಯತ್ತ ಬಂದಿರುವುದು ತಮಗೆಲ್ಲ ತಿಳಿದಿರುವ ವಿಚಾರ . ಕೋಲ್ಚಾರು ಎಂಬಲ್ಲಿಗೆ ಬಸ್ ಸಂಚಾರ ಇಲ್ಲದಿರುವುದರಿಂದ ಸಾರ್ವಜನಿಕರು ದಿನನಿತ್ಯ ಪರದಾಡುವ ಪರಿಸ್ಥಿತಿ ಬಂದಿದೆ ....

ಕೊಲ್ಲಮೊಗ್ರ : ಸಂಜೀವಿನಿ ಸಂಘದ ಸದಸ್ಯರಿಗೆ ಹಣ್ಣು ಸಂಸ್ಕರಣೆ ಬಗ್ಗೆ ತರಬೇತಿ ಕಾರ್ಯಕ್ರಮ

ತೋಟಗಾರಿಕೆ ಇಲಾಖೆ ಸುಳ್ಯ , ತಾಲೂಕು ಪಂಚಾಯತ್ ಆಶ್ರಯದಲ್ಲಿ ಸೆ.25 ರಂದು ಕೊಲ್ಲಮೊಗ್ರ ಗ್ರಾ.ಪಂ. ಸಭಾಂಗಣದಲ್ಲಿ ಸಂಜೀವಿನಿ ಸಂಘದ ಸದಸ್ಯರಿಗೆ ಹಣ್ಣು ಸಂಸ್ಕರಣೆ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ತಾ. ಪಂ. ಸದಸ್ಯರಾದ ಉದಯ ಕೊಪ್ಪಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯಿತ್ ನ ಸಂಜೀವಿನಿ ತಾಲೂಕು ಮೇಲ್ವಿಚಾರಕರಾದ ಮಹೇಶ್ ಮಾಹಿತಿ ನೀಡಿ ಕಾರ್ಯಕ್ರಮ...

ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ಸಾಲ ಮೇಳದ ಮಾಹಿತಿ ಅಭಿಯಾನ

ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ನೀಡಲ್ಪಡುತ್ತಿರುವ ವಿವಿಧ ಉದ್ದೇಶಗಳ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಶಿಬಿರ ಮೊಗರ್ಪಣೆ ಪರಿಸರದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಿಬ್ಬಂದಿ ನಮ್ಮ ಸಂಸ್ಥೆಯ ವತಿಯಿಂದ ಸಂದರ್ಭ ಉಪಯೋಗಕ್ಕೆ ಅನುಗುಣವಾಗಿ ವಿವಿಧ ಸಾಲ ಸೌಲಭ್ಯಗಳ ವ್ಯವಸ್ಥೆಗಳನ್ನು ನೀಡಲಾಗುತ್ತಿದ್ದು ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆ ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆಯೆಂದು ಎಸ್‌ಡಿಪಿಐ ಪ್ರತಿಭಟನೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ಬೆಳ್ಳಾರೆ ವಲಯ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರಿವಾಜ್ಞೆಯು ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಅದರ  ವಿರುದ್ಧ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಲಯ ಅಧ್ಯಕ್ಷರಾದ ಸಿದ್ದೀಕ್ ಬೆಳ್ಳಾರೆ ನೇತೃತ್ವದಲ್ಲಿ ಸೆ.25 ರಂದು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ...

ಸುಳ್ಯ : ಮಾಸ್ಕ್ ಧರಿಸದಿದ್ದರೆ ಪೊಲೀಸರಿಂದ ದಂಡ

ಕೊರೋನ ವೈರಸ್ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶವನ್ನು ನೀಡಿದ್ದು ಇದರ ಅಂಗವಾಗಿ ಸುಳ್ಯ ನಗರ ಪ್ರದೇಶದಲ್ಲಿ ಮಾಸ್ಕ್ ದರಿಸದೆ ಓಡಾಡುತ್ತಿರುವ ವ್ಯಕ್ತಿಗಳನ್ನು ಜ್ಯೋತಿ ಸರ್ಕಲ್ ಬಳಿ ಹಾಗೂ ಸುಳ್ಯ ಪೊಲೀಸ್ ಠಾಣೆ ಮುಂಬಾಗ ಪರಿಶೀಲನೆ ನಡೆಸುತ್ತಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಹಾಗೂ ಸುಳ್ಯ ಪೊಲೀಸ್ ಉಪನಿರೀಕ್ಷಕ ಹರೀಶ್...
Loading posts...

All posts loaded

No more posts

error: Content is protected !!