- Saturday
- March 14th, 2026
ಬಂಟರ ಯಾನೆ ನಾಡವರ ಸಂಘ ಸುಳ್ಯ ಇದರ ಬಾಳಿಲ ವಲಯದ ವತಿಯಿಂದ 2019-20 ರ ಶೈಕ್ಷಣಿಕ ಸಾಲಿನಲ್ಲಿ ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಬಾಳಿಲ ವಲಯ ವ್ಯಾಪ್ತಿಯ ಜಾತಿ ಬಾಂಧವರಿಗೆ ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಅನುಷ್ ಎಣ್ಣೆಮಜಲು, ಬಂಟರ ಸಮಾಜದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ...
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ(ರಿ),ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ,ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇದರ ಸಹಯೋಗದೊಂದಿಗೆಸೆಪ್ಟೆಂಬರ್ 20 ರಿಂದ 26 ರವರೆಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿತ್ಯ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತರಬೇತಿ ನಡೆಯಲಿರುವುದು. 15 ವರ್ಷ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಸುಳ್ಯ ಹಾಗೂ ಪೈಲಾರು ಒಕ್ಕೂದ ಆಶ್ರಯದಲ್ಲಿ ಸೆ.6 ಆದಿತ್ಯವಾರ ದಂದು ಮಿತ್ರ ವೃಂದ ಪೈಲಾರ್ ಕಟ್ಟಡದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನಡೆಯಲಿದೆ. ಆಯುಷ್ಮಾನ್ ಕಾರ್ಡ್ ಮಾಡಲು ಬರುವವರು ಒರಿಜಿನಲ್ ಆಧಾರ್ ಕಾರ್ಡ್ & ರೇಷನ್ ಕಾರ್ಡ್ ತರಬೇಕಾಗಿ ಸಂಘಟಕರು ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಇಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಹರೀಶ್ ಕುಮಾರ್ ವೈ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಮಂಜುನಾಥನಗರ ಇಲ್ಲಿನ ಆಂಗ್ಲಭಾಷಾ ಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಕಳೆದ 17 ವರ್ಷಗಳಿಂದ ಸ.ಹಿ.ಪ್ರಾಥಮಿಕ ಶಾಲೆ ಮೇನಾಲದಲ್ಲಿ ಕರ್ತವ್ಯ ನಿರ್ವಹಿಸಿ ಎಸ್.ಡಿ.ಎಂ.ಸಿ, ಹಿರಿಯ ವಿದ್ಯಾರ್ಥಿ...
ಎಸ್ ಎಸ್ ಎಫ್ .ಸುನ್ನಿ ಸ್ಟೂಡೆಂಟ್ ಫೆಡರೇಶನ್ ಇದರ ಕುಶಾಲನಗರ ಸೆಕ್ಟರ್ ನೂತನ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮ ಸೆಪ್ಟಂಬರ್ 5 ರಂದು ನಡೆಯಿತು. ಈ ಸಂದರ್ಭದಲ್ಲಿ ಸೈಯದ್ ಕುಟುಂಬದ ಮಹಾನರು, ಉಮಾರ ನೇತಾರರು ಎಸ್ ವೈ ಎಸ್. ಮತ್ತು ಎಸ್ಎಸ್ಎಫ್ ಇದರ ರಾಜ್ಯ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಆಪಾದನೆಯ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡ ಕುರಿತು ಕಲ್ಲುಗುಂಡಿಯಿಂದ ವರದಿಯಾಗಿದೆ. ಕಲ್ಲುಗುಂಡಿ ಸಮೀಪದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಅಡಿ ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿಯ ನಿವಾಸಿಗಳಾದ ಭರತ್ ಹಾಗೂ ರಾಕೇಶ್ ಎಂದು ತಿಳಿದುಬಂದಿದೆ.
ನಗರ ಪಂಚಾಯತ್ ಕಾರು ಚಾಲಕರಾಗಿದ್ದು , ಕೋವಿಡ್ ಸೋಂಕಿತರಾಗಿ ಮೃತಪಟ್ಟ ಖಾಲಿದ್ ರವರನ್ನು ಕೊರೊನಾ ವಾರಿಯರ್ಸ್ ಆಗಿ ಪರಿಗಣಿಸಿ ಅವರ ಕುಟುಂಬಕ್ಕೆ ಸರಕಾರದಿಂದ ಸಹಾಯ ಕೊಡಿಸಲು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತು ನಗರ ಪಂಚಾಯತ್ ಆಡಳಿತಾಧಿಕಾರಿ ಸುಳ್ಯ ತಹಶಿಲ್ದಾರ್ ಅನಂತಶಂಕರ್ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಸೆ .5 ರಂದು ಮನವಿ ಸಲ್ಲಿಸಿದರು. ಕಳೆದ ನಾಲ್ಕೈದು...
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭಕ್ತಕೋಡಿ ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಪುಷ್ಪಾವತಿ ಪಿ ಪದೋನ್ನತಿ ಹೊಂದಿದ್ದು, ಇದೀಗ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆ.ಪಿ.ಎಸ್) ಬೆಳ್ಳಾರೆ ಇಲ್ಲಿನ ಪ್ರೌಢಶಾಲಾ ವಿಭಾಗಕ್ಕೆ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಭಡ್ತಿಗೊಂಡಿರುತ್ತಾರೆ. ಇವರು 1998 ರಿಂದ ಸ.ಹಿ.ಪ್ರಾಥಮಿಕ ಶಾಲೆ ಭಕ್ತಕೋಡಿಯಲ್ಲಿ ಸೇವೆಯನ್ನು ಆರಂಭಿಸಿ 22 ವರ್ಷಗಳ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಸತೀಶ್ ಚಂದ್ರ ಪಿ ಇವರು ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಹೂ ಹಾಕಿ ಗೌರವಪೂರ್ವಕ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶೀಲಾವತಿ ಹಾಗೂ ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಕತಡ್ಕ ಪುತ್ತೂರು ತಾಲೂಕು ಇಲ್ಲಿ ಕಳೆದೊಂದು ವರ್ಷದಿಂದ ಸಹ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಶ್ರೀಮತಿ ಹರ್ಷಲತ ಎಂ ಜೆ ಇವರು ಸರಕಾರಿ ಪ್ರೌಢಶಾಲೆ ಏನೆಕಲ್ಲು ಇಲ್ಲಿಗೆ ಇಂಗ್ಲಿಷ್ ಭಾಷಾ ಸಹಾಯಕ ಶಿಕ್ಷಕರಾಗಿ ಪದೋನ್ನತಿ ಹೊಂದಿರುತ್ತಾರೆ. ಇವರು ಮೂಲತಃ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕಣಜಾಲು ಜತ್ತಪ್ಪ ಗೌಡ ಮತ್ತು ಮೀನಾಕ್ಷಿ...
Loading posts...
All posts loaded
No more posts
