- Saturday
- March 14th, 2026
ಸುಳ್ಯದ ಪೈಚಾರು ಜಂಕ್ಷನ್ ನಲ್ಲಿ ರಾಘವ ಕೆ.ಯವರ ಮಾಲಕತ್ವದ ಬಾಂಬೆ ಮೆನ್ಸ್ ಪಾರ್ಲರ್ ಸೆ .2 ರಂದು ಶುಭಾರಂಭಗೊಂಡಿದೆ. ಹಿರಿಯರಾದ ಬಾಲಕೃಷ್ಣ ನಾಯ್ಕರವರು ಉದ್ಘಾಟಿಸಿ ಶುಭಹಾರೈಸಿದರು . ಈ ಸಂದರ್ಭದಲ್ಲಿ ಶ್ರೀಮತಿ ಮೀನಾಕ್ಷಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು .
ಮಡಿಕೇರಿಯ ಹೈಲ್ಯಾಂಡ್ ಹಾಸ್ಪಿಟಲ್ ನಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತಾಗಿ ಮಂಗಳೂರಿಗೆ ಕೇವಲ 1 ಗಂಟೆ 54 ನಿಮಿಷದಲ್ಲಿ ಅಂಬ್ಯುಲೆನ್ಸ್ ಮೂಲಕ ತಲುಪಿಸಲಾಯಿತು. ಈ ಮೂಲಕ ಅಂಬ್ಯುಲೆನ್ಸ್ ಚಾಲಕ ಐಬು ಅವರ ಶ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಂಬ್ಯುಲೆನ್ಸ್ ಗೆ ಹೋಗುವ ದಾರಿಯಲ್ಲಿ ಝೀರೋ ಟ್ರಾಫಿಕ್ ಮಾಡಿಕೊಡಲಾಯಿತು. ಕೊಯನಾಡಿನಿಂದ ಕನಕಮಜಲು ತನಕ ಝೀರೋ ಟ್ರಾಫಿಕ್...
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಪ್ರವೀಣ್ ನೆಟ್ಟಾರ್ ಇವರು ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಟ್ರಾವೆಲ್ ಏಜೆನ್ಸಿ ನಡೆಸುತ್ತಿರುವ ಇವರು ಈ ಹಿಂದೆ ಭಾಜಪದ ವಾರ್ಡ್ ಸಮಿತಿಯ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇವರು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನಿವಾಸಿಯಾಗಿದ್ದಾರೆ.
ಪೆರುವಾಜೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಕವಿತಾ ಸಿ.ಕೆ.ಯವರು ಪದೋನ್ನತರಾಗಿದ್ದು , ಇದೀಗ ಸರ್ಕಾರಿ ಪದವಿಪೂರ್ವ ಕಾಲೇಜು ಸವಣೂರು ಇಲ್ಲಿನ ಪ್ರೌಢಶಾಲಾ ವಿಭಾಗಕ್ಕೆ ಇಂಗ್ಲಿಷ್ ಶಿಕ್ಷಕಿಯಾಗಿ ನಿಯೋಜನೆಗೊಂಡಿರುತ್ತಾರೆ. ಇವರು ಸ.ಹಿ.ಪ್ರಾಥಮಿಕ ಶಾಲೆ ಉಬರಡ್ಕ - ಮಿತ್ತೂರಿನಲ್ಲಿ 9 ವರ್ಷ ಹಾಗೂ ಸ.ಹಿ.ಪ್ರಾಥಮಿಕ ಶಾಲೆ ಪೆರುವಾಜೆಯಲ್ಲಿ 9 ವರ್ಷಗಳ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರು ಐವರ್ನಾಡು...
ಸುಳ್ಯ ಪೈಚಾರು ಭಾಗವಾಗಿ ಸುಬ್ರಮಣ್ಯ , ಬೆಳ್ಳಾರೆಗೆ ಸಂಪರ್ಕ ಕಲ್ಪಿಸುವ ಸೋಣಂಗೇರಿ ಸಮೀಪದ ರಸ್ತೆಯೊಂದು ಭಾರಿ ದೊಡ್ಡ ಕಂದಕಕ್ಕೆ ಕುಸಿದುಬಿದ್ದಿದ್ದು ಕಳೆದ ಒಂದು ವರ್ಷಗಳಿಂದ ಆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಈ ವರ್ಷದ ಮಳೆಯು ಇದೀಗ ಕೊನೆಯ ಹಂತದಲ್ಲಿದೆ. ಸಂಬಂಧಪಟ್ಟ ಅಧಿಕಾರಿಗಳು ಇಲಾಖೆಯ ಹಿರಿಯರು ಸ್ಥಳ ಪರಿಶೀಲನೆಯನ್ನು ನಡೆಸಿ ಈಗಾಗಲೇ ರಸ್ತೆಯ...
ಜೇಸಿಐ ಬೆಳ್ಳಾರೆಯ ಪೂರ್ವಾಧ್ಯಕ್ಷ,ಪ್ರಸ್ತುತ ಕಾರ್ಯದರ್ಶಿಯಾಗಿರುವ ಯುವ ಉದ್ಯಮಿ, ಬೆಳ್ಳಾರೆ ಅಜಂತಾ ಮೊಬೈಲ್ ಪಾಲುದಾರ,ಏರ್ ಟೆಲ್ ಸೇಲ್ಸ್ ಮತ್ತು ಎಕ್ಸಿಕ್ಯೂಟಿವ್ ಮೆನೇಜರ್ , ಜೇಸೀ ಹೆಚ್ ಜಿ ಎಫ್ ಜಗದೀಶ್ ಪಿ.ಎಲ್. ಜೇಸಿಐ ಭಾರತದ ವಲಯ 15 ರ ವಿಭಾಗದ ಅಭಿವೃದ್ಧಿ ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವ್ಯವಹಾರ ಅಥವಾ ವೃತ್ತಿ...
ಮಡಿಕೇರಿಯ ಐಲ್ಯಾಂಡ್ ಹಾಸ್ಪಿಟಲ್ ನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ತುರ್ತಾಗಿ ಮಂಗಳೂರಿಗೆ ಕರೆದೊಯ್ಯುಲು ಅಂಬ್ಯುಲೆನ್ಸ್ ಸುಳ್ಯದಲ್ಲಿ ಝೀರೋ ಟ್ರಾಫಿಕ್ ಮಾಡಿಕೊಡಲಾಯಿತು. ಸುಳ್ಯದ ಹೈವೇ ಪೆಟ್ರೋಲ್ ಪೋಲೀಸರು ನೆರವಾದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.
ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.
Loading posts...
All posts loaded
No more posts
