Ad Widget

ಮೊಗ್ರ ರಕ್ಷಾಬಂಧನ

ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಇಂದು ಸಂಜೆ ರಕ್ಷಾಬಂಧನ ಕಾರ್ಯಕ್ರಮ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಆಚರಿಸಲಾಯಿಗು ಪ್ರಜ್ವಲ್ ನೆಕ್ಲಾಜೆ ಇವರು ರಕ್ಷಾಬಂಧನದ ಸಂದೇಶ ವಾಚಿಸಿದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಯಪ್ರಕಾಶ್ ಮೊಗ್ರ, ಜಗದೀಶ ಚಿಕ್ಮುಳಿ ರಾಧಾಕೃಷ ತುಪ್ಪದ ಮನೆ ಹಾಗೂ ಊರವರು ಬಾಗವಹಿಸಿದರು.

ರಾಜ್ಯ ಹೆದ್ದಾರಿಯ ಹಂಪ್ಸ್ ಗಳಿಗೆ ಬಿಳಿ ಬಣ್ಣ ಬಳಿದ ಸಂಪಾಜೆ ಲಯನ್ಸ್ ಕ್ಲಬ್

ಲಯನ್ಸ್ ಕ್ಲಬ್ ಸಂಪಾಜೆ ಇದರ ವತಿಯಿಂದ ಮೈಸೂರು ಮಾಣಿ ಹೆದ್ದಾರಿಯ ಕಡೆಪಾಲ ಬಳಿ ಹಲವು ಅಪಘಾತ ಗಳಿಗೆ ಕಾರಣ ವಾಗಿರುವ ರಸ್ತೆ ಉಬ್ಬು ( ಹಂಪ್) ಗಳಿಗೆ ಬಿಳಿ ಬಣ್ಣ ವನ್ನು ಹಚ್ಚಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷ ಲ.ವಾಸುದೇವ ಕಟ್ಟೆಮನೆ ಕಾರ್ಯದರ್ಶಿ ಲ.ಶುಭಾ, ಕೋಶಾಧಿಕಾರಿ ಲ. ವೆಂಕಪ್ಪ ಬೊಳ್ಳೂರು,ಸದಸ್ಯರಾದ ಲ. ಪ್ರಶಾಂತ್, ಲ.ಕಿಶೋರ,ಲ....
Ad Widget

ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಸಹಯೋಗ ದೊಂದಿಗೆ ಸ್ವಾತಂತ್ರ್ಯ ದಿನಾಚರಣೆ

ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಸಂಪಾಜೆ ಸಹಯೋಗ ದೊಂದಿಗೆ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಕೀಲಾರು ಮತ್ತು ಕ್ಲಬ್ ನ ಅಧ್ಯಕ್ಷರಾದ ಲ. ವಾಸುದೇವ ಕಟ್ಟೆಮನೆ ಧ್ವಜರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಪ್ರಾಂಶುಪಾಲ ರಾದ ಶ್ರೀಮತಿ ವೈಕೆ ಮಾಲತಿ,...

ಕಾಡುಸೊರಂಜ ಅಮೈ ರಸ್ತೆ ಶ್ರಮದಾನ

ಮಂಡೆಕೋಲು ಗ್ರಾಮದ ಕಾಡುಸೊರಂಜ ಅಮೈ ರಸ್ತೆಯನ್ನು ಗ್ರಾಮಸ್ಥರು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಿಥೇಶ್, ಕಿಶನ್, ದಯಾನಂದ,ಪ್ರದೀಪ್ ಶ್ರಮದಾನ ನಡೆಸಿದರು.

ರಾಜ್ಯಮಟ್ಟದ ಪ್ರತಿಭೆ ಅನುಷ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ಕಟೀಲ್ ಅಭಿನಂದನೆ

ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟದಲ್ಲಿ ಮಿಂಚಿದ, ಗ್ರಾಮೀಣ ಪ್ರತಿಭೆ ಅನುಷ್ ಎ.ಎಲ್ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.ಈ ವೇಳೆ ಕಟೀಲ್ ರೊಂದಿಗೆ ಶಾಸಕ ಎಸ್.ಅಂಗಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ತಾಲೂಕು ಅಧ್ಯಕ್ಷ ಹರೀಶ್ ಕಂಜಿಪಿಲಿ, ಗುತ್ತಿಗಾರು ಸಹಕಾರಿ...

ಚೈತನ್ಯ ಸಂಪ್ಯಾಡಿ ಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 583 ಅಂಕ

ಮೊರಾರ್ಜಿ ದೇಸಾಯಿ ರೆಸಿಡೆನ್ಸಿ ಸ್ಕೂಲ್ ನೆಲ್ಲಿತೀರ್ಥ ಮಂಗಳೂರು ಇಲ್ಲಿನ ವಿದ್ಯಾರ್ಥಿ ಚೈತನ್ಯ ಎಸ್ ಕೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 583 ಅಂಕ ಪಡೆದು, (93.28%) ತೇರ್ಗಡೆ ಹೊಂದಿರುತ್ತಾಳೆ. ಇವಳು ಹಾಲೆಮಜಲು ಸಂಪ್ಯಾಡಿ ಕವಿತಾ ಕರುಣಾಕರ ಇವರ ಪುತ್ರಿ.

ಅಮರ ಸುದ್ದಿ ವರದಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು – ಸರಕಾರಿ ಆಸ್ಪತ್ರೆಯ ಕೋವಿಡ್ ವಿಭಾಗಕ್ಕೆ ಬಿಸಿನೀರಿಗಾಗಿ ನಾಳೆಯೇ ಗೀಸರ್ ಅಳವಡಿಕೆಗೆ ಸೂಚನೆ

ಸುಳ್ಯ ಸರಕಾರಿ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿರುವ ಪೇಷೆಂಟ್‌ಗಳಿಗೆ ಸ್ನಾನಕ್ಕೆ ಬಿಸಿನೀರು ಸಿಗದಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿದ ಬೆನ್ನಲ್ಲೇ ಸಚಿವರು ಆರೋಗ್ಯಾಧಿಕಾರಿಗಳಿಗೆ ನಾಳೆಯೇ ಗೀಸರ್ ಅಳವಡಿಸಲು ಸೂಚಿಸಿದ್ದಾರೆ. ಇಂದು ಕಾರ್ಯನಿಮಿತ್ತ ಸುಳ್ಯಕ್ಕೆ ಬಂದಾಗ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನಾಳೆಯೇ ಸಮಸ್ಯೆ ನಿವಾರಿಸುವುದಾಗಿ ಹೇಳಿದರಲ್ಲದೆ ತಾಲೂಕು ವೈದ್ಯಾಧಿಕಾರಿಯವರನ್ನು...

ಅರಂತೋಡು ವಲಯ ಕಾಂಗ್ರೆಸ್ ಸಭೆ

ಅರಂತೋಡು ವಲಯ ಕಾಂಗ್ರೆಸ್ ಸಭೆಯು ವಲಯ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಅಡ್ಕಬಳೆ ಅಧ್ಯಕ್ಷತೆಯಲ್ಲಿ ಆ.16 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ್, ದಿನೇಶ್ ಗುತ್ತಿಗಾರ್, ಅರಂತೋಡು ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಇದ್ದೀನ್ ಕುಂಞ,ಸುಳ್ಯ ವಿಧಾನ ಸಭಾ...

ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ಶ್ರಮದಾನ

ಮಿತ್ರಬಳಗ (ರಿ.) ಕಾಯರ್ತೋಡಿ ಮತ್ತು ಊರ ದಾನಿಗಳ ಸಹಕಾರದೊಂದಿಗೆ ಇಂದು ಗಾಂಧಿನಗರ ಶಾಲೆ ಹಿಂಭಾಗದ ಕಾಂಕ್ರೀಟ್ ರಸ್ತೆ ಹಾಗೂ ಉಬರಡ್ಕ ರಸ್ತೆಯಿಂದ ಕಾಯರ್ತೋಡಿ ಬೈಲಿಗೆ ಬರುವ ಕಾಂಕ್ರೀಟ್ ರಸ್ತೆ ಜಾರುವ ಸ್ಥಿತಿಯಲ್ಲಿದ್ದ ಕಾರಣ ಬ್ಲೀಚಿಂಗ್ ಪೌಡರ್, ಸುಣ್ಣ ಹಾಗೂ ಮರಳು ಹಾಕಿ ಶುಚಿಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಿತ್ರ ಬಳಗದ ಅಧ್ಯಕ್ಷ ಮಹೇಶ್ ಕುದ್ಪಾಜೆ...

ಆ‌. 29 ರಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಮಹಾಸಭೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ)ಇದರ ಮಹಾಸಭೆ ಆ.29 ರಂದು ಶನಿವಾರ ಅಪರಾಹ್ನ 2-30ಕ್ಕೆ ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಂಘದ ಎಲ್ಲಾ ಗೌರವಾನ್ವಿತ ಸದಸ್ಯರು ಮಾಸ್ಕ್ ಧರಿಸಿ ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘಟಕರು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!