Ad Widget

ನಾಲ್ಕೂರು : ಶ್ರೀ ಮುತ್ತಪ್ಪನ್ ಪ್ರಗತಿ ಬಂಧು ಸಂಘ ರಚನೆ

ಶ್ರೀ ಕ್ಷೇ.ಧ.ಗ್ರಾ.ಯೋಜನೆ,ಬಿ.ಸಿ. ಟ್ರಸ್ಟ್ ನಾಲ್ಕೂರು ಇದರ ಆಶ್ರಯದಲ್ಲಿ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಶ್ರೀ ಮುತ್ತಪ್ಪನ್ ಪ್ರಗತಿ ಬಂಧು ಸಂಘ ರಚಿಸಲಾಯಿತು. ನಾಲ್ಕೂರು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಎರ್ದಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಯೋಜನೆಯ ಕಾರ್ಯಕ್ರಮ ಗಳ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಒಕ್ಕೂಟದ ಉಪಾಧ್ಯಕ್ಷ ವಿಶ್ವನಾಥ್ ಛತ್ರಪ್ಪಾಡಿ...

ತಳೂರು ನಿನ್ನೆ ಮತ್ತೆರಡು ಪಾಸಿಟಿವ್, ಸುಳ್ಯದಲ್ಲಿ ಇಂದು 4 ಪ್ರಕರಣ ಧೃಡ

ಆ. 8 ರಂದು ಪಾಸಿಟಿವ್ ಬಂದ ಮೂವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕಾರಂಟೈನ್ ಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ನಿನ್ನೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ನಡೆದ ರಾಂಡಮ್ ಟೆಸ್ಟ್‌ ನಲ್ಲಿ ಪಾಸಿಟಿವ್ ಬಂದಿದ್ದು ತಳೂರಿನ ಮನೆಯಲ್ಲೇ ಕಾರಂಟೈನ್ ಮಾಡಲಾಗಿದೆ.ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂದು ಕಾಣಿಯೂರಿನ ವ್ಯಕ್ತಿಯೊಬ್ಬರಿಗೆ ಪಾಸಿಟಿವ್...
Ad Widget

ಫಾತಿಮತ್ ಬಶಾಹಿರಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 577 ಅಂಕ

ಸುಳ್ಯ ಹಳೆಗೇಟು ಬೆಟ್ಟಂಪಾಡಿ ನಿವಾಸಿ ಬಶೀರ್ ಕುತ್ತಮೊಟ್ಟೆ ಹಾಗೂ ನಿಶಾಬಿ ದಂಪತಿಗಳ ಪುತ್ರಿ ಫಾತಿಮತ್ ಬಶಾಹಿರ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 577 ಅಂಕವನ್ನು ಪಡೆದು ತೇರ್ಗಡೆ ಹೊಂದಿದ್ದಾರೆ. ಇವರು ಸುಳ್ಯ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದಾರೆ.

ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿರ; ಮಾಹಿತಿ ನೀಡಿದ ಮಗ ಅಭಿಜಿತ್​

ಬುಧವಾರ ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಣಬ್​ ಆರೋಗ್ಯ ತುಂಬಾನೇ ಗಂಭೀರವಾಗಿದೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಅಭಿಜಿತ್​ ತಂದೆಯ ಆರೋಗ್ಯ ಸ್ಥಿರವಾಗಿರುವ ಬಗ್ಗೆ ಮಾಹಿತಿ ಅವರ ಪುತ್ರ ಟ್ವೀಟರ್ ನಲ್ಲಿ ಸಂದೇಶ ನೀಡಿದ್ದಾರೆ.

ನಾಳೆ ಐವರ್ನಾಡು ಸಹಕಾರ ಸಂಘದ ವತಿಯಿಂದ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

ಐವರ್ನಾಡು ಪ್ರಾ. ಕೃ. ಪ. ಸಹಕಾರ ಸಂಘದ ವತಿಯಿಂದ ಆ. 13 ರಂದು ಅಪರಾಹ್ನ 2 ಗಂಟೆಗೆ ಯಂತ್ರದ ಮೂಲಕ ಅಡಿಕೆ ಮರ ಏರುವ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್ ಎನ್ ಮನ್ಮಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಗರಿಕಾ ಪೂಜಾರಿಕೋಡಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 615 ಅಂಕ

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯ ದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿನಿ ಸಾಗರಿಕಾ ಪಿ.ಎಚ್. ಪೂಜಾರಿಕೋಡಿ 615 ಅಂಕ ಪಡೆದು ಉತ್ತಮ ಸಾಧನೆ ಮಾಡಿರುತ್ತಾಳೆ.ಈಕೆ ನೋಟರಿ ಹಾಗೂ ವಕೀಲರಾಗಿರುವ ಗುತ್ತಿಗಾರು ಗ್ರಾಮದ ಹರೀಶ್ ಪೂಜಾರಿಕೋಡಿ ಮತ್ತು ಪ್ರೇಮ ದಂಪತಿಗಳ ಪುತ್ರಿ. ಇವರ ಇನ್ನೊಬ್ಬಳು ಪುತ್ರಿ ನಿಹಾರಿಕಾ ಪಿ.ಎಚ್. ಈ ಬಾರಿಯ ನವೋದಯ...

ಎಸ್.ಎಸ್.ಎಫ್ ಸುಳ್ಯ ಡಿವಿಷನ್ ವತಿಯಿಂದ ಅನುಷ್ ಎ.ಎಲ್ ರವರಿಗೆ ಸನ್ಮಾನ

ಎಸ್.ಎಸ್.ಎಲ್.ಸಿ 2019-20 ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನೀಯನಾದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನುಷ್ ಎ.ಎಲ್ ರವರ ಮನೆಗೆ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ನಿಯೋಗವು ಭೇಟಿ ನೀಡಿ ಸಮಿತಿಯ ವತಿಯಿಂದ ಶಾಲು ಹೊದಿಸಿ, ಹಾರಾರ್ಪಣೆ ಮಾಡಿ ಅಭಿನಂದನಾ ಫಲಕ ಹಾಗೂ ಸಿಹಿತಿಂಡಿ ನೀಡಿ ಸನ್ಮಾನಿಸಲಾಯಿತು....

ಅಜ್ಜಾವರ ಮೂಲದ ವ್ಯಕ್ತಿಗೆ ಪಾಸಿಟಿವ್- ಇಂದು ಸುಳ್ಯದಲ್ಲಿ ಒಟ್ಟು 4 ಪ್ರಕರಣ ಪತ್ತೆ

ಅಜ್ಜಾವರ ಬಯಂಬು ಮೂಲದ ವ್ಯಕ್ತಿಗೆ ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡವಾಗಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಆಗಿದ್ದಾರೆ. ಇಂದು ಒಟ್ಟು 4 ಪ್ರಕರಣ ಪತ್ತೆಯಾದಂತಾಗಿದೆ.

ವಾಲ್ತಾಜೆ ಯುವ ಸೇವಾ ಮತ್ತು ಕ್ರೀಡಾ ಸಂಘ ವತಿಯಿಂದ ಸಹಾಯಧನ ವಿತರಣೆ

ದೇವಚಳ್ಳ ಗ್ರಾಮದ ವಾಲ್ತಾಜೆ ಯುವ ಸೇವಾ ಮತ್ತು ಕ್ರೀಡಾ ಸಂಘದ ಸಕ್ರಿಯ ಸದಸ್ಯರಾಗಿದ್ದ ಸೀತಾರಾಮ್ ಮೀನಾಜೆಯವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಅವರಿಗೆ ಸಂತಾಪ ಸೂಚಿಸಿದ, ನಂತರ ಸಂಘದ ವತಿಯಿಂದ 50 ಕೆಜಿ ಅಕ್ಕಿ ಮತ್ತು 5000 ರೂ ಧನಸಹಾಯವನ್ನು ಅವರ ಮನೆಗೆ ತೆರಳಿ ಪತ್ನಿ ಲಲಿತ ಮಗಳು ರತಿಕ್ಷಾ ಅವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ...

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಇಶಾ ಡಿ.ಕೆ. 601 ಅಂಕ

ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಇಶಾ ಡಿ.ಕೆ., ಎಸ್ ಎಸ್ ಎಲ್.ಸಿ.ಪರಿಕ್ಷೆಯಲ್ಲಿ 601 ಅಂಕ (ಶೇ 96.16) ಗಳಿಸಿರುತ್ತಾಳೆ. ಈಕೆ ಸುಳ್ಯ ತಾಲೂಕು ಎಣ್ಮೂರು ಗ್ರಾಮದ ಗುತ್ತಿಗೆ ಮನೆ ದಿ.ಇಸ್ಮಾಯಿಲ್ ಮತ್ತು ಖದೀಜ ದಂಪತಿಗಳ ಪುತ್ರಿ.
Loading posts...

All posts loaded

No more posts

error: Content is protected !!