Ad Widget

ಎಪಿಎಂಸಿಯ ತರಬೇತಿ ಶಿಬಿರದಲ್ಲಿ ಶಿಲಾನ್ಯಾಸದ ನೇರಪ್ರಸಾರ

ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ನೈಪುಣ್ಯ ತರಬೇತಿ ಶಿಬಿರ ನಡೆಯಿತ್ತಿದ್ದು ಅಯೋಧ್ಯೆ ರಾಮ ಮಂದಿರ ಇದರ ಭೂಮಿ ಪೂಜೆಯನ್ನು ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು ಎಲ್ಲಾ ತರಬೇತಿ ಶಿಬಿರಾರ್ಥಿಗಳಿಗೂ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ನೇರ ಪ್ರಸಾರವನ್ನು ದೊಡ್ಡ ಪರದೆಯ ಮುಖಾಂತರ ವೀಕ್ಷಿಸಿದರು. ಈ...

ಮುಚ್ಚಿದ ಶಾಲೆಯನ್ನು ಮತ್ತೆ ತೆರೆಸಿದ ಅಶೋಕ್ ನೆಕ್ರಾಜೆ

ಒಬ್ಬ ಜನಪ್ರತಿನಿಧಿ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ ಸುಬ್ರಹ್ಮಣ್ಯ ಕ್ಷೇತ್ರದ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ.1963ರಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ದೇವರಹಳ್ಳಿ (ಕಲ್ಲಾಜೆ) ಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಯಿತು. ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಲ್ಲದೆ ಶಾಲೆ ಮುಚ್ಚಲ್ಪಟ್ಟಿತು. ಇತ್ತೀಚಿಗೆ ಊರವರು ಸುಬ್ರಹ್ಮಣ್ಯ ತಾಲೂಕ್ ಪಂಚಾಯತ್ ಕ್ಷೇತ್ರದ ಸದಸ್ಯ...
Ad Widget

ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ರಕ್ಷಾಬಂಧನ

ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯುವಸೇನೆ ಮುಕ್ಕೂರು ಪೆರುವಾಜೆ ಇದರ ಆಶ್ರಯದಲ್ಲಿ ಸಾಂಕೇತಿಕವಾಗಿ ರಕ್ಷಾಬಂಧನ ಹಬ್ಬ ಹಾಗೂ ಅಯೋಧ್ಯೆ ಶ್ರೀ ರಾಮ ಭೂಮಿ ಪೂಜೆಯ ಪ್ರಯುಕ್ತ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಜರಗಿತು.ಈ ಸಂದರ್ಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಂಘದ ಆಧ್ಯಕ್ಷರಾದ ಕುಂಬ್ರ ದಯಾಕರ್ ಆಳ್ವ, ಜ್ಯೋತಿ ಯುವಕ ಮಂಡಲದ ಅಧ್ಯಕ್ಷ ನಾರಾಯಣ ಕೊಂಡೇಪಾಡಿ, ಶ್ರೀ...

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸದ ಅಂಗವಾಗಿ ಬೆಳ್ಳಾರೆ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ್ದ ಪ್ರಮುಖರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರಸೇವೆ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಅಯೋಧ್ಯೆ ಹೋರಾಟದ ನೆನಪುಗಳನ್ನು ಹಂಚಿಕೊಂಡರು. ಕರಸೇವೆಯಲ್ಲಿ ಭಾಗಿಗಳಾಗಿದ್ದ ಶೇಷಪ್ಪ ಆಚಾರ್ಯ ಕೊಡಿಯಾಲ, ನಾರಾಯಣ ಆಚಾರ್ಯ ಬಾಳಿಲ,...

ಬಿಜೆಪಿ ವತಿಯಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ

ಅಯೋಧ್ಯೆ ಶ್ರೀ ರಾಮ ಮಂದಿರ ಪುನರ್ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸುವ ಈ ಸುಸಂದರ್ಭದಲ್ಲಿ ಭಾಜಪಾ ಸುಳ್ಯ ಮಂಡಲ ಹಾಗೂ ಭಾಜಪಾ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ, ಹಾಗೂ ಆಂಜನೇಯ ಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಬೂಡು ಭಗವತಿ ಕ್ಷೇತ್ರದಲ್ಲಿ ಪ್ರಾರ್ಥಿಸಿ ಕ್ಷೇತ್ರದಲ್ಲಿ ಈ ದಿನದ ಸವಿ ನೆನಪಿಗಾಗಿ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿಯಿಂದ ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಪ್ರಯುಕ್ತ ವಿಶೇಷ ಪ್ರಾರ್ಥನೆ

ಇಂದು ಅಯೋಧ್ಯೆಯ ಶ್ರೀರಾಮನ ಜನ್ಮ ಸ್ಥಳದಲ್ಲಿಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಕಾರ್ಯ ನಡೆಯುತ್ತಿದ್ದು ಆ ಭೂಮಿ ಪೂಜೆ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ವಿಶೇಷ ಪ್ರಾರ್ಥನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ ರವರ ಸಮ್ಮುಖದಲ್ಲಿ ಸಲ್ಲಿಸಲಾಯಿತು ....

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಣ್ಯಭೂಮಿ ಅಯೋಧ್ಯೆಯಲ್ಲಿ ಇಂದು ನೆರವೇರಲಿರುವ ಪ್ರಭು ಶ್ರೀರಾಮಚಂದ್ರನ ಭವ್ಯಮಂದಿರದ ಭೂಮಿಪೂಜೆಯ ಅಂಗವಾಗಿ ನೆರವೇರಿದ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದ.ಕ.ಇಂದು ಭಾರಿ ಮಳೆ – ರೆಡ್ ಅಲರ್ಟ್ ಘೋಷಣೆ

 ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪೆರಾಜೆ ಮನೆ ಮೇಲೆ ಮರ ಬಿದ್ದು ಹಾನಿ

ಪೆರಾಜೆ ಗ್ರಾಮದ ದಾಸರಹಿತ್ಲು ಬಳಿ ನಿವಾಸಿ ಖದೀಜಮ್ಮ ರವರ ಮನೆಯ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ.

ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆಚರಿಸಿ, ಜತೆಗೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ : ಸನಾತನ ಸಂಸ್ಥೆ

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...
Loading posts...

All posts loaded

No more posts

error: Content is protected !!