- Saturday
- May 2nd, 2026
ಸುಳ್ಯ ಪರಿಸರದಲ್ಲಿಂದು ಬಹುದಿನಗಳ ಬಳಿಕ ಸುರಿಯುತ್ತಿರುವ ಭಾರಿ ಮಳೆಯಿಂದ ಹಳೆಗೇಟು ಮುಖ್ಯ ರಸ್ತೆ ಕೆಸರುಮಯವಾಗಿದೆ.ಇಂದು ಸಂಜೆಯಿಂದ ಸುರಿಯುತ್ತಿರುವ ಬಾರಿ ಮಳೆಗೆ ಹಳೆಗೇಟು ಪೆಟ್ರೋಲ್ ಪಂಪ್ ಸಮೀಪ ಕಾಮಗಾರಿ ನಡೆಯುತ್ತಿದ್ದ ಸ್ಥಳ ದಿಂದ ಕೆಸರು ಮಣ್ಣು ನೀರಿನೊಂದಿಗೆ ರಸ್ತೆಗೆ ಹರಿದು ಬಂದಿದೆ. ರಸ್ತೆ ಸಂಪೂರ್ಣ ಕೆಸರು ನೀರಿನಿಂದ ತುಂಬಿದ್ದು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಳ್ಯ ಪೇಟೆಯಲ್ಲೂ...
ಕುಲ್ಕುಂದ ಶಿವರಾಯ(ನಿರಂಜನ)ರ ಜನ್ಮಶತಮಾನೋತ್ಸವದ ಅಂಗವಾಗಿ "ನಿರಂಜನ:ಬದುಕು-ಬರಹ" ವಿಷಯದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿ ವಿಚಾರ ಸಂಕಿರಣ ನಡೆಯಿತು.ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಕಾಲೇಜಿನ 'ಭಾಷಾ ಸಂಘ'ವು 'ಜಲಶ್ರೀ ಪ್ರತಿಷ್ಠಾನ ಕಡ್ಲಾರು' ಇದರ ಸಹಯೋಗದೊಂದಿಗೆ ವಿಚಾರ ಸಂಕಿರಣವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿತ್ತು.ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ...
ಕಡಬ ತಾಲೂಕಿನ ಬಿಳಿನೆಲೆ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಜಂಟಿ ಸರ್ವೆಯ ಕುರಿತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದ ದಿನೇಶ್ ರವರು ವಹಿಸಿ, ಜಂಟಿ ಸರ್ವೆಯ ವಿಚಾರವಾಗಿ ಪ್ರಾಸ್ತಾವಿಕ ಮಾಹಿತಿಯನ್ನು ನೀಡಿದರು. ಈ ಬಗ್ಗೆ ಹೋರಾಟದ ಪ್ರಮುಖರಾದ ಅಭಿಲಾಷ್ ಪಿ.ಕೆ...
ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ನವಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು, ಅಭಿಮಾನಿಗಳು ಆಮಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಅಚ್ರಪ್ಪಾಡಿ, ಸಂಘಟನಾ ಸಮಿತಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು, ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ನಡೆಯಲಿದೆ. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.2024ನೇ ಸಾಲಿನ ಪ್ರಶಸ್ತಿಗೆ...
ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ದಿನಾಂಕ ನವೆಂಬರ್ 11ರಿಂದ 17ರವರೆಗೆಕುರುಕ್ಷೇತ್ರ ವಿಶ್ವವಿದ್ಯಾನಿಲಯ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ದೇವಿಕಾ ದ್ವಿತೀಯ ಬಿಕಾಂ ಅವರು ಪಾಲ್ಗೊಳ್ಳಲಿದ್ದಾರೆ. ಇವರು ರಾಮಕುಂಜದ ಶ್ರೀ ಹೇಮಾಕ್ಷಾ ಹಾಗೂ ಶ್ರೀಮತಿ ಪ್ರಮೀಳಾ ಇವರ ಪುತ್ರಿ.ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗ...
ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನ.8 ರಿಂದ ಕರಿಮಣಿ ಮೇಳ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ. ಈ ಮೇಳದಲ್ಲಿ ಹಳೆಯ ಕರಿಮಣಿಯನ್ನು ಹೊಸತರ ಜೊತೆಗೆ ಬದಲಾವಣೆ ಮಾಡುವ ಅವಕಾಶ ಇದ್ದು, ಹಳೆಯ ಚಿನ್ನದ ಪ್ರತಿ ಗ್ರಾಂ ಗೆ ಹೆಚ್ಚುವರಿಯಾಗಿ ರೂ. 100 ದೊರೆಯಲಿದೆ. ಸಂಸ್ಥೆಯಲ್ಲಿ ಕರಿಮಣಿ ಸರಗಳ ವಿನೂತನ ಕಲೆಕ್ಷನ್ ಇದ್ದು,...
ಪೊಲೀಸ್ ಇಲಾಖೆ ವತಿಯಿಂದ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮ ಸುಳ್ಯ ತಾಲೂಕು ಕೇಂದ್ರದ ಗಾಂಧಿನಗರ ಜುಮ್ಮಾ ಮಸೀದಿ ಯಲ್ಲಿ ನಡೆಯಿತು. ಇಲಾಖೆ ವತಿಯಿಂದ ಮಾಹಿತಿ ನೀಡಿದ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಕುಮಾರ್ ಬಿ. ಪಿ. ಮಾತನಾಡಿ “ರಾಜ್ಯದಲ್ಲಿ ಜ್ಯಾರಿಯಲ್ಲಿರುವ ಗೋಹತ್ಯೆ ನಿಷೇದ ಕಾನೂನಿನ ಬಗ್ಗೆ” ವಿವರವಾಗಿ ತಿಳಿಸಿದರು.ಯುವ ಜನರಲ್ಲಿ ಹೆಚ್ಚಾಗುತ್ತಿರುವ ಮಾದಕ...
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
Loading posts...
All posts loaded
No more posts
