ಟವರ್ ನಿರ್ಮಾಣಕ್ಕೆ ಶಾಸಕರಿಂದ ಜಿಯೋ ಸಂಸ್ಥೆಗೆ ಪತ್ರ

ಸುಳ್ಯ ತಾಲೂಕಿನ ಮಡಪ್ಪಾಡಿ, ದೇವಚಳ್ಳ ಗ್ರಾಮದ ಕರಂಗಲ್ಲು, ಕೂತ್ಕುಂಜ ಗ್ರಾಮದ ಬಳ್ಳಕ, ಬಾಳುಗೋಡು ಪ್ರದೇಶಗಳಲ್ಲಿ ಸರಿಯಾದ ನೆಟ್ವರ್ಕ್ ಸಿಗದೇ ಇರುವುದರಿಂದ ಈ ಭಾಗದ ಜನರಿಗೆ, ಸಹಕಾರಿ ಸಂಘ, ಸ್ಥಳೀಯ ಸಂಸ್ಥೆ, ಧಾರ್ಮಿಕ ಸಂಸ್ಥೆಗಳಿಗೆ ತೊಂದರೆ ಉಂಟಾಗುತ್ತಿದ್ದು ಇದರಿಂದ ಈ ಪ್ರದೇಶದಲ್ಲಿ ಟವರ್ ಮುಖ್ಯವಾಗಿರುವುದರಿಂದ ಈ ಕುರಿತಂತೆ ಶಾಸಕ ಎಸ್.ಅಂಗಾರ ಜಿಯೋ ಕಂಪೆನಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸುಳ್ಯದ ಪ್ರತಿಷ್ಠಿತ ಮೊಬೈಲ್ ಸಂಸ್ಥೆಯೊಂದು ಪುಕ್ಕಟೆ ಪ್ರಚಾರ ಪಡೆಯುತ್ತಿದೆ – ಬಹುಮಾನ ಕೊಡದೇ ಮೋಸ ಮಾಡಿದೆ ಎಂಬ ಬರಹ ಜಾಲತಾಣದಲ್ಲಿ ವೈರಲ್ – ಸಂಸ್ಥೆಯ ಮಾಲಕರಿಂದ ಸ್ಪಷ್ಟನೆ

ಕಳೆದ ಕೆಲವು ದಿನಗಳ ಹಿಂದಿನಿಂದ ಸುಳ್ಯದ ಕೆಲವು ಮೊಬೈಲ್ ಅಂಗಡಿ ಗಳು ತಮ್ಮ ಸಂಸ್ಥೆಯ ಪ್ರಚಾರ ಪತ್ರದೊಂದಿಗೆ ಜಾಹೀರಾತನ್ನು ಪ್ರಕಟಿಸಿ ಈ ಜಾಹೀರಾತನ್ನು ಸಾರ್ವಜನಿಕರು ತಮ್ಮ ತಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಆಗಿಸಿ ಅದರಲ್ಲಿ 500 ಮತ್ತು 200 ವೀಕ್ಷಕರನ್ನು ಮಾಡಿದರೆ ಅವರಿಗೆ ಸಂಸ್ಥೆಯ ವತಿಯಿಂದ ಸೂಕ್ತ ಬಹುಮಾನ ನೀಡುವುದಾಗಿ ಪ್ರಚಾರಪಡಿಸಿದ್ದರು. ಕೆಲವು ಅಂಗಡಿಗಳು ಒಂದು...
Ad Widget

ಅತಿವೃಷ್ಟಿ ಪೀಡಿತ ತಾಲೂಕು ಪಟ್ಟಿಗೆ ಸುಳ್ಯ ಸೇರ್ಪಡೆ

ಇತ್ತೀಚೆಗೆ ಸರಕಾರ ಘೋಷಿಸಿದ ಅತಿವೃಷ್ಟಿ ಪೀಡಿತ ತಾಲೂಕು ಪಟ್ಟಿಯಲ್ಲಿ ಸುಳ್ಯ ವನ್ನು ಕೈಬಿಡಲಾಗಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಶಾಸಕ ಎಸ್ ಅಂಗಾರ ರವರು ಸಚಿವರು ಮುಖಾಂತರ ಒತ್ತಡ ತಂದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕನ್ನು ಸೇರ್ಪಡೆಗೊಳಿಸಿ ಸರಕಾರ ಆದೇಶ ಮಾಡಿದೆ.

ಕ್ರೀಡಾ ಕ್ಷೇತ್ರದ ಪ್ರಶಸ್ತಿ ಘೋಷಣೆ : ಸಾಧಕರಿಗೆ ನಮ್ಮದೊಂದು ಸೆಲ್ಯೂಟ್

ಮೂರು ವರ್ಷಗಳಿಂದ ಬಾಕಿಯುಳಿದಿದ್ದ ರಾಜ್ಯದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಾದ ಏಕಲವ್ಯ, ಕರ್ನಾಟಕ ಕ್ರೀಡಾರತ್ನ, ಜೀವಮಾನ ಸಾಧನೆ ಮತ್ತು ಕ್ರೀಡಾ ಪೋಷಕ ಪ್ರಶಸ್ತಿಗಳನ್ನು ರಾಜ್ಯದ ಕ್ರೀಡಾ ಇಲಾಖೆ ಸಚಿವರಾದ ಸಿ.ಟಿ.ರವಿ ಅವರು ನ.೧ರಂದು ಬಿಡುಗಡೆಗೊಳಿಸಿದ್ದರು. ನಂತರ ನ. ೨ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ನೇತೃತ್ವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ೨೦೧೭, ೨೦೧೮, ೨೦೧೯ನೇ ಸಾಲಿನ...

ಪತ್ರಕರ್ತರ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ : ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 2 ಕೋಟಿ ಬಿಡುಗಡೆಗೆ ಸೂಚನೆ

ಮಂಗಳೂರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಳೆದ ಜನವರಿ 5 ರಂದು ಗ್ರಾಮ ವಾಸ್ತವ್ಯ ಮಾಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಇದಕ್ಕೆ...

ನಗರ ಪಂಚಾಯತ್ ಅಧ್ಯಕ್ಷರಾಗಿ ವಿನಯ ಕುಮಾರ್ ಕಂದಡ್ಕ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಪೆಲ್ತಡ್ಕ ಅವಿರೋಧ ಆಯ್ಕೆ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ ವಿನಯ ಕುಮಾರ್ ಕಂದಡ್ಕ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಪೆಲ್ತಡ್ಕ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷತೆಗೆ ಮತ್ತು ಉಪಾಧ್ಯಕ್ಷ ತೆಗೆ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ತಹಶೀಲ್ದಾರ್ ಅನಂತಶಂಕರ್ ಅಧಿಕೃತ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ, ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಉಪ...

ಜಾಲ್ಸೂರು ಎನ್ ಇ ಗ್ರೋಸರಿ ಶುಭಾರಂಭ

ಜಾಲ್ಸೂರು ಎನ್ ಇ ಸಂಕಿರಣದಲ್ಲಿ ಎನ್ ಇ ಸಹೋದರರ ಮಾಲಕತ್ವದ ಎನ್ ಇ ಗ್ರೋಸರಿ ಇಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಗೆ ಅಸ್ಸಯ್ಯದ್ ಎ ಎಸ್ ಆಟು ಕೊಯ ತಂಙಳ್ ಕುಂಬೋಳ್ ಆಶೀರ್ವದಿಸಿದರು. ಸ್ಥಳೀಯ ಮಸೀದಿ ಖತೀಬರಾದ ಅಬೂಬಕ್ಕರ್ ಫೈಝಿ ಕುಂಬಡಾಜೆ ದುವಾ ನೆರವೇರಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಬ್ಬಾಸ್ ಮುಸ್ಲಿಯಾರ್, ಹಾಜಿ ಅಬ್ದುಲ್ಲಾ ಕಟ್ಟೆ ಕಾರ್ಸ್,...

ವೆಂಕಟರಮಣ ಸೊಸೈಟಿ ವತಿಯಿಂದ ನಿತ್ಯಾನಂದ ಮುಂಡೋಡಿ ಯವರಿಗೆ ಸನ್ಮಾನ

ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾನ್ಯ ಸಭೆಯು ನ.3 ನಡೆಯಿತು. ಈ ಸಂದರ್ಭದಲ್ಲಿ ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಐದನೇ ಬಾರಿಗೆ ಆಯ್ಕೆಯಾದ ನಿತ್ಯಾನಂದ ಮುಂಡೋಡಿಯವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ್, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಕೆ.ಸಿ.ನಾರಾಯಣ ಗೌಡ, ಕೆ.ಸಿ.ಸದಾನಂದ...

ರಾಜ್ಯಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ವಿದ್ಯಾರ್ಥಿಗಳಿಗೆ ಬಹುಮಾನ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ರಿ) ಇದರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೋಸ್ಕರ ಅಂತರ್ಜಾಲ ಮೂಲಕ (ಝೂಮ್)ರಾಜ್ಯಮಟ್ಟದ ಕನ್ನಡ ಭಾಷಣ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯ ಪ್ರಥಮ ಬಹುಮಾನವನ್ನು ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಕೇರ್ಪಳದ ಕು. ಅನನ್ಯ ಕೆ.ಟಿ., ದ್ವಿತೀಯ ಬಹುಮಾನವನ್ನು ಸುಳ್ಯದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ...

ಮೊಗ್ರ : ಒಡಿಯೂರು ಸಂಘದ ಸದಸ್ಯರಿಂದ ಶ್ರಮದಾನ

ಮೊಗ್ರ ಒಡಿಯೂರು ಸಂಘದವರಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯ ಶ್ರಮದಾನ ಮೂಲಕ ಇಂದು ನಡೆಯಿತು. ಬಳ್ಪದ ಎಡೋಣಿಯಿಂದ ಮೊಗ್ರ ಶಾಲೆಯವರೆಗೆ ರಸ್ತೆಬದಿಯನ್ನು ಸ್ವಚ್ಚ ಮಾಡಲಾಯಿತು. ಹಾಗೂ 30ಕ್ಕೂ ಹೆಚ್ಚು ಸಂಘದ ಸದಸ್ಯರು ಸೇರಿ ಸಂಜೆಯವರೆಗೆ ಶ್ರಮದಾನ ನಡೆಸಿದರು.
Loading posts...

All posts loaded

No more posts

error: Content is protected !!