- Tuesday
- March 10th, 2026
ಅಡ್ಕಾರ್ ಅಗ್ನಿಶಾಮಕ ವಾಹನ ಪಲ್ಟಿಅಡ್ಕಾರ್ ಬಳಿ ಅಗ್ನಿಶಾಮಕ ವಾಹನ ಪಲ್ಟಿಯಾದ ಘಟನೆ ಇಂದು ನಡೆದಿದೆ.ವಾಹನ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾಗಿದೆ. ಈ ವೇಳೆ ವಿದ್ಯುತ್ ಲೈನ್ ಪವರ್ ಆಫ್ ಇದ್ದುದರಿಂದ ಸಂಭಾವ್ಯ ಆಪಾಯ ತಪ್ಪಿದೆ.
ನಿವೃತ್ತ ಯೋಧ , ಗುತ್ತಿಗಾರು ಸಿಂಡಿಕೇಟ್ ಬ್ಯಾಂಕ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಗುತ್ತಿಗಾರು ನಿವಾಸಿ ಸುಬ್ರಹ್ಮಣ್ಯ ಶಾಸ್ತ್ರಿಯವರು ಇಂದು ಮುಂಜಾನೆ ವಾಕಿಂಗ್ ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ . ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು . ಶಾಸ್ತ್ರಿಯವರು ಪ್ರತಿದಿನ ಬೆಳಿಗ್ಗೆ 4.30 ಕ್ಕೆ ವಾಕಿಂಗ್ ಹೊರಡುತ್ತಿದ್ದರು . ವಳಲಂಬೆ...
ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ , ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆ ನಿವಾಸಿ ರೋಟರಿ ಶಾಲೆ ಸುಂದರಿಯವರ ಕೊರೋನ ಪರೀಕ್ಷೆಯ ವರದಿ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ . ಅವರು ವಾರದ ಹಿಂದೆ ಅಸೌಖ್ಯಕ್ಕೊಳಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ದಾಖಲಾಗಿದ್ದರು ಎಂದು ಹೇಳಲಾಗುತ್ತಿದೆ.. ಅದೇ ಸಮಯದಲ್ಲಿ ಆ ವಾರ್ಡಿನಲ್ಲಿ ಸೋಣಂಗೇರಿಯ ವೃದ್ಧರೊಬ್ಬರು ಕೂಡ...
ಸುಳ್ಯದ ಯುವಕನಿಗೆ ದುಬೈ ಮೂಲದ ಆನ್ ಲೈನ್ ಬಿಗ್ ಟಿಕೆಟ್ ಲಾಟರಿ ಮೂಲಕ 50,000 ದಿರಾಮ್ಸ್ ಅಂದರೆ ಸುಮಾರು 10 ಲಕ್ಷ ರೂಪಾಯಿ ಬಹುಮಾನ ಬಂದಿದೆ . ಸುಳ್ಯದ ಜಟ್ಟಿಪಳ್ಳದ ಮಹಮ್ಮದ್ ರಫೀಕ್ ಎಂಬವರಿಗೆ ಈ ಲಾಟರಿ ಬಂದಿದೆ ಎಂದು ತಿಳಿದುಬಂದಿದೆ. ಕಳೆದ ಹಲವು ವರ್ಷಗಳಿಂದ ಯುವಕ ದುಬೈನಲ್ಲಿ ಉದ್ಯೋಗಿಯಾಗಿದ್ದಾರೆ . ಈ ಹಿಂದೆ ಸುಳ್ಯದ...
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತವು ಪ್ರಕಟಣೆ ಹೊರಡಿಸಿದ್ದು , 33.ಕೆ.ವಿ ಪುತ್ತೂರು - ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜುಲೈ 04 ಶನಿವಾರ , ಜುಲೈ 07 ಮಂಗಳವಾರ ಹಾಗೂ ಜುಲೈ 09 ಗುರುವಾರ ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು .ಆದುದರಿಂದ 33/11 ಕೆ.ವಿ. ಕಡಬ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ವತಿಯಿಂದ 9 ತಿಂಗಳಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿ , ಬಾಣಂತಿಯರಿಗೆ ಪೌಷ್ಠಿಕ ಆಹಾರ ( ಅಕ್ಕಿ , ಹಾಲು ಹುಡಿ, ಸಕ್ಕರೆ , ಹೆಸರು , ಮೊಟ್ಟೆ , ಬೆಲ್ಲ , ನೆಲಕಡಲೆ ಇತ್ಯಾದಿ ) ವನ್ನು ಪಂಜ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾಯಿತು ....
ನವದೆಹಲಿ : ವಿಮಾನಯಾನ ನಿಯಂತ್ರಕ ಡಿಜಿಸಿಎ ಶುಕ್ರವಾರ ದೇಶದಲ್ಲಿ ನಿಗದಿತ ಅಂತರರಾಷ್ಟ್ರೀಯ ಪ್ರಯಾಣಿಕರ ಹಾರಾಟವನ್ನು ಜುಲೈ 31 ರವರೆಗೆ ವಿಸ್ತರಿಸುವುದಾಗಿ ತಿಳಿಸಿದೆ . ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ 23 ರಂದು ಭಾರತದಲ್ಲಿ ಪರಿಶಿಷ್ಟ ಅಂತಾರಾಷ್ಟ್ರೀಯ ಪ್ರಯಾಣಿಕರ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. 2020 ರ ಜುಲೈ 15 ರವರೆಗೆ ನಿಗದಿತ ಅಂತರರಾಷ್ಟ್ರೀಯ ಪ್ರಯಾಣಿಕರ ಹಾರಾಟವನ್ನು ಸ್ಥಗಿತಗೊಳಿಸಲಾಗುವುದು ಎಂದು...
ಗಗನ್ ಸ್ಟುಡಿಯೋ ಸ್ಥಳಾಂತರಗೊಂಡು ಸುಳ್ಯದಲ್ಲಿ ಶುಭಾರಂಭಸುಬ್ರಹ್ಮಣ್ಯ ದಲ್ಲಿ ಕಾರ್ಯಚರಿಸುತ್ತಿದ ಗಗನ್ ಸ್ಟುಡಿಯೋ ಸ್ಥಳಾಂತರಗೊಂಡು ಸುಳ್ಯದ ಅಂಬಟೆಡ್ಕ ದಲ್ಲಿರುವ ಜಾನಕಿ ಕಾಂಪ್ಲೆಕ್ಸ್ ನಲ್ಲಿ ಜು. 2 ರಂದು ಶುಭಾರಂಭಗೊಂಡಿತು. ಮಾಲಕರಾದ ಗಗನ್ ದೀಪ್ ನಡುಮನೆ, ಆಗಮಿಸಿ ಶುಭಹಾರೈಸಿದ ಎಲ್ಲರನ್ನು ಸ್ವಾಗತಿಸಿ, ವಂದಿಸಿದರು
ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 25 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮದ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
Loading posts...
All posts loaded
No more posts
