Ad Widget

ಕನಕಮಜಲು: ನಾಡಿಗೆ ಬಂದ ಕಾಳಿಂಗ ಸರ್ಪ ಮರಳಿ ಕಾಡಿಗೆ

ಕನಕಮಜಲ ಗ್ರಾಮದ ಪಂಜಿಗುಂಡಿ ಕಾಲನಿ ಬಳಿ ಮೇ ೧೬ ರಂದು ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ ವಾಗಿತ್ತು. ಸ್ಥಳೀಯ ನಿವಾಸಿಗಳು ಉರಗ ಪ್ರೇಮಿ ಜಾಲ್ಸೂರಿನ ಶ್ಯಾಮ್ ಭಟ್ ಅವರಿಗೆ ತಿಳಿಸಿರುತ್ತಾರೆ. ಸ್ಥಳಕ್ಕೆ ಆಗಮಿಸಿದ ಶ್ಯಾಮ್ ಭಟ್ ಕಾಳಿಂಗ ಸರ್ಪವನ್ನು ಮೇ.೧೭ ರಂದು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.

ಮಡಿಕೇರಿಯಿಂದ ಮಂಗಳೂರಿಗೆ ಕಾಲ್ನಡಿಗೆಯಲ್ಲಿ ಹೊರಟ ಕಾರ್ಮಿಕ : ಸುಳ್ಯದಲ್ಲಿ ಅಸ್ವಸ್ಥಗೊಂಡಾಗ ಉಪಚರಿಸಿದ ಸ್ಥಳೀಯರು

ಸುಳ್ಯದ ಕೆಲವು ಯುವಕರು ಮಾನವೀಯತೆ ಮೆರೆದು ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಅಸ್ವಸ್ಥಗೊಂಡು ಸುಳ್ಯದಲ್ಲಿ ಬಿದ್ದ ವ್ಯಕ್ತಿಯನ್ನು ಉಪಚರಿಸಿ ಸ್ವಗ್ರಾಮಕ್ಕೆ ತೆರಳಲು ವ್ಯವಸ್ಥೆ ಮಾಡಿದ ಘಟನೆ ಮೇ ೧೭ ನಡೆದಿದೆ. ಮಂಗಳೂರಿನ ಕಟೀಲು ನಿವಾಸಿ ನಾರಾಯಣ ರೈ ಯವರು ಮಡಿಕೇರಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ದೇಶದಾದ್ಯಂತ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ ಇತ್ತ ಊರಿಗೂ ತೆರಳಲಾಗದೆ...
Ad Widget

ಬಡ ಕುಟುಂಬದ ಮನೆಯ ಬೆಳಕಾದ ಗುತ್ತಿಗಾರು ಗ್ರಾ.ಪಂ.ನ ಕೋವಿಡ್ ಕಾರ್ಯಪಡೆ

ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...

ಅಮರ ಸಂಘಟನೆಯಿಂದ ‘ಅಮ್ಮ ಐ ಲವ್ ಯೂ ‘ ಅಭಿಯಾನ

ಮೇ 10 ರಂದು ವಿಶ್ವ ತಾಯಂದಿರ ದಿನದ ಪ್ರಯುಕ್ತ ಅಮರ ಸಂಘಟನಾ ಸಮಿತಿ ವತಿಯಿಂದ ವಿಶೇಷ ಅಭಿಯಾನವೊಂದನ್ನು ಆಯೋಜಿಸಲಾಗಿತ್ತು. "ಅಮ್ಮ ಐ ಲವ್ ಯೂ" ಎಂಬ ಶೀರ್ಷಿಕೆಯಡಿ ಸೆಲ್ಫಿ ಫೋಟೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಅಮರ ಮುಡ್ನೂರು ಹಾಗೂ ಪಡ್ನೂರಿನ ಅಮರ ಸಂಘಟನಾ ಸಮಿತಿ ನಡೆಸಿದ ಈ ಅಭಿಯಾನದಲ್ಲಿ ಸುಮಾರು ಇನ್ನೂರಕ್ಕೂ ಮಿಕ್ಕಿ ಸೆಲ್ಫಿ ಫೋಟೋಗಳು ಸಂಗ್ರಹವಾಗುವುದರ...
error: Content is protected !!