- Saturday
- August 1st, 2026
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(04.09.2020 ಶುಕ್ರವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 395ಡಬಲ್ ಚೋಲ್ 300 - 395 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...
ಕೆಲವು ದಿನಗಳಿಂದ ಗೊಂದಲಕ್ಕೆ ಈಡಾಗಿರುವ ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾದಿಂದ ನಟಿ ರಾಗಿಣಿಯವರ ಆಪ್ತ ಅರೆಸ್ಟ್ ಆಗಿರುವ ಹಿನ್ನಲೆ ರಾಗಿಣಿಯವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಹೇಳಿ ತಪ್ಪಿಸಿ ಕೊಳ್ಳಲು ಯತ್ನಿಸಿದ ರಾಗಿಣಿ ಮನೆಗೆ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಎಂಟ್ರಿ ಕೊಟ್ಟು ಮೊಬೈಲ್ ಹಾಗೂ ಲ್ಯಾಪ್ಟಾಪ್ ನ್ನು ವಶಪಡಿಸಿಕೊಂಡು ವಿಚಾರಣೆ...
ಸುಳ್ಯ ಮೊಗರ್ಪಣೆ ನಿವಾಸಿ ಅಬೂಬಕ್ಕರ್ ಮುಕ್ರಿ ಯವರ ಪುತ್ರ ಖಾಲಿದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು . ಇವರು ಕಳೆದ ಕೆಲವು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ನ ಕಾರು ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಸ್ತುತ ಬೀಜಕೊಚ್ಚಿಯಲ್ಲಿ ನೆಲೆಸಿದ್ದರು.
ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇದರ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.12 ರಂದು ಕಂದ್ರಪ್ಪಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ತಿಳಿಸಿದ್ದಾರೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಯವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅವರಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನ.ಪಂ.ಸದಸ್ಯ ವಿನಯ ಕುಮಾರ್ ಕಂದಡ್ಕ, ಮಾಜಿ ನ.ಪಂ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಜಿನ್ನಪ್ಪ ಪೂಜಾರಿ, ಸುಧಾಕರ, ಬೂಡು ರಾಧಾಕೃಷ್ಣ...
ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ್ ಮಡಪ್ಪಾಡಿ ಆಯ್ಕೆಯಾಗಿದ್ದಾರೆ. ಇಂದು ಪುತ್ತೂರಿನ ಸುಭದ್ರ ಸಭಾಭವನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಬೈಠಕ್ ನಲ್ಲಿ , ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಕಾರಂತ್ ರವರು ಈ ಜವಾಬ್ದಾರಿಯನ್ನು ಘೋಷಣೆ ಮಾಡಿದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಮಾಯಿಪನ ಮನೆಯವರಾದ...
ಸುಳ್ಯ – ಸಂಪಾಜೆ ಫೀಡರ್ ನಲ್ಲಿ ಅಸಮರ್ಪಕ ವಿದ್ಯುತ್ ಕಡಿತ ಸಮಸ್ಯೆ ಪರಿಹರಿಸಲು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಗುಂಡಿಯವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸುಳ್ಯ ತಾಲೂಕು ಮೀಸಲು ವಿಧಾನ ಸಭಾ ಕ್ಷೇತ್ರವಾಗಿದ್ದು, ಇದೀಗ ಅಭಿವೃದ್ದಿ ಹೊಂದುತ್ತಾ ಇರುವ ತಾಲೂಕು ಆಗಿದೆ. ಪೂಜ್ಯ ಕುರುಂಜಿ ವೆಂಕಟ್ರಮಣ ಗೌಡರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಿಂದಾಗಿ ಹೆಸರು ವಾಸಿಯಾಗಿದೆ. ಆದರೆ ೧೯೪೭...
ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಇದರ ನೇತೃತ್ವದಲ್ಲಿ ತುಳುನಾಡ ಒಕ್ಕೂಟ ಸುಳ್ಯ ದ.ಕ ಇದರ ಉದ್ಘಾಟನೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮ ಸುಳ್ಯ ಪರಿವಾರಕಾನ ಸೆ. 6 ರಂದು ಅದಿತ್ಯವಾರ ಸಂಜೆ ಗಂಟೆ 4.30 ಕ್ಕೆ ಗ್ರಾಂಡ್ ಪರಿವಾರ್ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸ್ವಾಗತ ಬಶೀರ್ ಆರ್.ಬಿ. ಅಧ್ಯಕ್ಷರು , ಕಾರುಣ್ಯ...
ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಜುಲೈ ತಿಂಗಳಲ್ಲಿ ಅನೇಕ ಗಣ್ಯರ ಟ್ವಿಟರ್ ಖಾತೆಗಳು ಹ್ಯಾಕ್ ಆಗಿದ್ದವು. ಈ ಪೈಕಿ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯೂ ಒಂದು. ಮೋದಿ ಅವರ ವೆಬ್ಸೈಟ್ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು...
ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ಅವರ 24 ನೇ ಚಾತುರ್ಮಾಸ್ಯ ಸೆ.2 ರಂದು ಸಮಾಪನ ಗೊಂಡಿತು. ಈ ಹಿನ್ನೆಲೆಯಲ್ಲಿ ನಿನ್ನೆ ದಿನ ದರ್ಪಣ ತೀರ್ಥ ನದಿಯಲ್ಲಿ ಮೃತ್ತಿಕಾ ವಿಸರ್ಜನೆ ನಡೆಯಿತು. ಬಳಿಕ ಶ್ರೀಗಳು ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳುವ ಮೂಲಕ ಸೀಮೋಲ್ಲಂಘನೆ ಮಾಡಿದರು....
Loading posts...
All posts loaded
No more posts
