ಕೇರಳದ ಪ್ರಸಿದ್ಧ ಮಾತೃಭೂಮಿ ಪತ್ರಿಕೆಯ ಅಧ್ಯಕ್ಷ ಎಂ.ಪಿ.ವೀರೇಂದ್ರ ಕುಮಾರ್ ನಿಧನ

ಮಾಜಿ ಕೇಂದ್ರ ಸಚಿವ , ಸಮಾಜವಾದಿ ಮುಖಂಡ , ರಾಜ್ಯಸಭಾ ಸದಸ್ಯ ಹಾಗೂ ಲೇಖಕ ಎಂ.ಪಿ.ವೀರೇಂದ್ರ ಕುಮಾರ್ ಮೇ. 28 ರಾತ್ರಿ ನಿಧನರಾದರು . ಅವರಿಗೆ 84 ವರ್ಷ ವಯಸ್ಸಾಗಿತ್ತು . ಅವರು ಅಲ್ಪಕಾಲದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು . ಲೋಕತಾಂತ್ರಿಕ ಜನತಾದಳದ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದ ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು...

ಆಲೆಟ್ಟಿ ರಸ್ತೆಯ ನಾಗಪಟ್ಟಣ ಸೇತುವೆ ಬಳಿ ಕಾಂಕ್ರೀಟಿಕರಣ -೩೦ ಲಕ್ಷ- ೨೪೦ ಮೀ ರಸ್ತೆ

ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಪರ್ಕದ ರಸ್ತೆ ನಾಗಪಟ್ಟಣ ಸೇತುವೆ ತನಕದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕೆಲಸಕ್ಕೆ ಮೇ.29 ರಂದು ಶಾಸಕ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂಚಾಯತ್ ಅಧ್ಯಕ್ಷ ಹರೀಶ್ ರಂಗತ್ತಮಲೆ, ಕಲ್ಲುಮುಟ್ಲು ವಾರ್ಡಿನ ನ.ಪಂ.ಸದಸ್ಯೆ ಶ್ರೀಮತಿ ಸುಶೀಲ ಜಿನ್ನಪ್ಪ ಪೂಜಾರಿ, ಸುಳ್ಯ...
Ad Widget

ಕಲ್ಮಕಾರು ರಸ್ತೆ ಮರುಡಾಮರೀಕರಣ

ಕೊಲ್ಲಮೊಗ್ರದಿಂದ ಕಲ್ಮಕಾರುವರೆಗೆ ಸುಮಾರು 8 ಕಿ.ಮೀ. ರಸ್ತೆಯ ಮರುಡಾಮರೀಕರಣ ಆರಂಭವಾಗಿದೆ. ಇದಕ್ಕೆ ಶಾಸಕ ಎಸ್ ಅಂಗಾರ ಸೆಂಟ್ರಲ್ ರೋಡ್ ಫಂಡ್ (CRF) ನಿಂದ ರೂ ೭೫ ಲಕ್ಷ ಅನದಾನ ಒದಗಿಸಿದ್ದಾರೆ. ಈ ಮೊದಲು ಪ್ರಧಾನಮಂತ್ರಿ ಗ್ರಾಮ ಸಡಕ್ ಅಡಿಯಲ್ಲಿ ಅಭಿವೃದ್ಧಿ ಯಾಗಿದ್ದು ಕೆಲ ವರ್ಷಗಳಿಂದ ಗುಂಡಿ ಬಿದ್ದು ಸಂಚಾರಕ್ಕೆ ತೊಡಕಾಗಿತ್ತು.

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ- ಚುನಾವಣಾ ಅಯೋಗ ಆದೇಶ

ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...

ಜೂನ್ 1ರಿಂದ ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಆರಾಧನೆಗೆ ಅವಕಾಶ – ಸಿಎಂ

ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳ ದ್ವಾರಗಳು ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.ಜೂನ್ 1ರಿಂದ ಪೂಜಾ ಕಾರ್ಯಕ್ರಮಗಳಿಗೆ ದೇವಸ್ಥಾನಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಮಸೀದಿ ಚರ್ಚುಗಳನ್ನು ತೆರೆಯುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರದಂದು ಹೇಳಿಕೆಯನ್ನು ನೀಡಿದ್ದರು.ಇದೇ ವಿಷಯಕ್ಕೆ...

ಸೋಂಕು ಪೀಡಿತ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶ ನಿರ್ಬಂಧಿಸಿ-ಮಹತ್ವದ ಆದೇಶ

ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ...

ಕೇರ್ಪಳ ರಸ್ತೆಯ ಗುಂಡಿ ಮುಚ್ಚಲು ಒತ್ತಾಯ

ಬೂಡು ಕೇರ್ಪಳ ಸಂಪರ್ಕಿಸುವ ರಸ್ತೆಯಲ್ಲಿ ದುರ್ಗಾಪರಮೇಶ್ವರಿ ಕಲಾಮಂದಿರ ಎದುರು ಭಾರಿ ಹದಗೆಟ್ಟಿದ್ದು ಮಳೆಗಾಲದಲ್ಲಿ ನಡೆದಾಡಲು ಕಷ್ಟವಾಗಲಿದೆ. ಆದ್ದರಿಂದ ಈ ಕೂಡಲೇ ದುರಸ್ತಿಪಡಿಸಬೇಕೆಂದು ನ.ಪಂ.ಸದಸ್ಯ ರಿಯಾಜ್ ಕಟ್ಟೆಕಾರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕಾಪುಕಾಡು-ಜಾಲ್ಪಣೆ ರಸ್ತೆ ಮರು ಡಾಮರೀಕರಣ

ಮುಕ್ಕೂರು : ಮಳೆ ಹಾನಿ ಪರಿಹಾರ ಯೋಜನೆಯಡಿ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಂಪರ್ಕ ರಸ್ತೆಯ ಕಾಪುಕಾಡು- ಜಾಲ್ಪಣೆ ತನಕ 17 ಲಕ್ಷ ರೂ.ವೆಚ್ಚದಲ್ಲಿ ಮರು ಡಾಮರೀಕರಣಕ್ಕೆ ಮೇ 28 ರಂದು ಚಾಲನೆ ನೀಡಲಾಯಿತು.ಜಿ.ಪಂ.ಸದಸ್ಯ ಎಸ್.ಎನ್. ಮನ್ಮಥ ಕಾಮಗಾರಿಗೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ,ನ್ಯಾಯವಾದಿ ಗಣಪತಿ ಭಟ್...

ಬೆಳ್ಳಾರೆಯ ವ್ಯಕ್ತಿಗೆ ಕೊರೊನಾ ದೃಢ

   ಬೆಳ್ಳಾರೆಯಲ್ಲಿ ಕೆಲ ದಿನಗಳಿಂದ  ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಲದಿನಗಳ ಹಿಂದೆ ಇವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು,ಕೋವಿಡ್ 19 ಇರುವುದು ದೃಢಪಟ್ಟಿದೆ. ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.

ರೈತರು ಕೃಷಿ ಕಾರ್ಮಿಕರಿಗೆ ಸಹಾಯಧನಕ್ಕೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯ

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...
Loading posts...

All posts loaded

No more posts

error: Content is protected !!