- Wednesday
- April 29th, 2026
ಕನಕಮಜಲ ಗ್ರಾಮದ ಪಂಜಿಗುಂಡಿ ಕಾಲನಿ ಬಳಿ ಮೇ ೧೬ ರಂದು ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ ವಾಗಿತ್ತು. ಸ್ಥಳೀಯ ನಿವಾಸಿಗಳು ಉರಗ ಪ್ರೇಮಿ ಜಾಲ್ಸೂರಿನ ಶ್ಯಾಮ್ ಭಟ್ ಅವರಿಗೆ ತಿಳಿಸಿರುತ್ತಾರೆ. ಸ್ಥಳಕ್ಕೆ ಆಗಮಿಸಿದ ಶ್ಯಾಮ್ ಭಟ್ ಕಾಳಿಂಗ ಸರ್ಪವನ್ನು ಮೇ.೧೭ ರಂದು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯದ ಕೆಲವು ಯುವಕರು ಮಾನವೀಯತೆ ಮೆರೆದು ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಅಸ್ವಸ್ಥಗೊಂಡು ಸುಳ್ಯದಲ್ಲಿ ಬಿದ್ದ ವ್ಯಕ್ತಿಯನ್ನು ಉಪಚರಿಸಿ ಸ್ವಗ್ರಾಮಕ್ಕೆ ತೆರಳಲು ವ್ಯವಸ್ಥೆ ಮಾಡಿದ ಘಟನೆ ಮೇ ೧೭ ನಡೆದಿದೆ. ಮಂಗಳೂರಿನ ಕಟೀಲು ನಿವಾಸಿ ನಾರಾಯಣ ರೈ ಯವರು ಮಡಿಕೇರಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ದೇಶದಾದ್ಯಂತ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ ಇತ್ತ ಊರಿಗೂ ತೆರಳಲಾಗದೆ...
ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...
