ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿಯಿಂದ ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಪ್ರಯುಕ್ತ ವಿಶೇಷ ಪ್ರಾರ್ಥನೆ

ಇಂದು ಅಯೋಧ್ಯೆಯ ಶ್ರೀರಾಮನ ಜನ್ಮ ಸ್ಥಳದಲ್ಲಿಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಕಾರ್ಯ ನಡೆಯುತ್ತಿದ್ದು ಆ ಭೂಮಿ ಪೂಜೆ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ವಿಶೇಷ ಪ್ರಾರ್ಥನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ ರವರ ಸಮ್ಮುಖದಲ್ಲಿ ಸಲ್ಲಿಸಲಾಯಿತು ....

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಣ್ಯಭೂಮಿ ಅಯೋಧ್ಯೆಯಲ್ಲಿ ಇಂದು ನೆರವೇರಲಿರುವ ಪ್ರಭು ಶ್ರೀರಾಮಚಂದ್ರನ ಭವ್ಯಮಂದಿರದ ಭೂಮಿಪೂಜೆಯ ಅಂಗವಾಗಿ ನೆರವೇರಿದ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Ad Widget

ದ.ಕ.ಇಂದು ಭಾರಿ ಮಳೆ – ರೆಡ್ ಅಲರ್ಟ್ ಘೋಷಣೆ

 ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪೆರಾಜೆ ಮನೆ ಮೇಲೆ ಮರ ಬಿದ್ದು ಹಾನಿ

ಪೆರಾಜೆ ಗ್ರಾಮದ ದಾಸರಹಿತ್ಲು ಬಳಿ ನಿವಾಸಿ ಖದೀಜಮ್ಮ ರವರ ಮನೆಯ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ.

ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆಚರಿಸಿ, ಜತೆಗೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ : ಸನಾತನ ಸಂಸ್ಥೆ

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...

ಕೊಡಗು ಜಿಲ್ಲೆ ಕೋಕೆರಿ ಗ್ರಾಮದಲ್ಲಿ ಜೋಡಿ ಕೊಲೆ

ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಕೋಕೆರಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಹೆತ್ತ ತಂದೆ ತಾಯಿಯನ್ನು ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಈ ಕೃತ್ಯ ಸೋಮವಾರ ರಾತ್ರಿ ನಡೆದಿದ್ದು ಮೃತ ದುರ್ದೈವಿಗಳು ರಾಜು 70 ವರ್ಷಗೌರಿ 65 ವರ್ಷಎಂದು ತಿಳಿದುಬಂದಿದೆ. ಈ ಕೃತ್ಯವನ್ನು ಮಗ ಅಯ್ಯಪ್ಪ 26 ವರ್ಷ ಎಂಬಾತನಿಂದ ನಡೆದಿದೆ. ಸ್ಥಳಕ್ಕೆ ಪೊಲೀಸರು...

ರಾಮಮಂದಿರ ಶಿಲಾನ್ಯಾಸ ಅಂಗವಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ

ಆ.5 ರಂದು ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಶಿಲಾನ್ಯಾಸ ಹಾಗೂ ರಾಮಮಂದಿರ ನಿರ್ಮಾಣ ಕೆಲಸ ಯಾವುದೇ ವಿಘ್ನಗಳಿಲ್ಲದೇ ಸಾಂಗವಾಗಿ ನಡೆಯುವಂತಾಗಲು ವಿಶೇಷ ಪೂಜೆ ,ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು...

ಧ.ಗ್ರಾ.ಯೋಜನೆಯ ವಿಪತ್ತು ನಿರ್ವಹಣಾ ಸಮಿತಿಯ ತಾ. ಸಂಯೋಜಕರಾಗಿ ಸತೀಶ್ ಬಂಬುಳಿ ಆಯ್ಕೆ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿನೂತನ ಕಾರ್ಯಕ್ರಮ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ಸುಳ್ಯ ತಾಲ್ಲೂಕು ಸಮಿತಿಯ ಸಂಯೋಜಕರಾಗಿ ಗುತ್ತಿಗಾರು ವಲಯದ ನಾಲ್ಕೂರು ಹಾಲೆಮಜಲು ಒಕ್ಕೂಟ ಅಧ್ಯಕ್ಷರಾದ ಸತೀಶ್ ಬಂಬುಳಿ ಇವರು ಆಯ್ಕೆಯಾಗಿರುತ್ತಾರೆ.

ವಿ ಹೆಚ್ ಪಿ ವತಿಯಿಂದ ಬೆಳ್ಳಾರೆ ಠಾಣೆಯಲ್ಲಿ ರಕ್ಷಾಬಂಧನ

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ, ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಅಧ್ಯಕ್ಷರಾದ ಪ್ರಸಾದ್ ಕೆ ಬಿ , ಕಾರ್ಯದರ್ಶಿ ಮನು ಬಾಯಂಬಾಡಿ ಮತ್ತು ಪದಾಧಿಕಾರಿಗಳು ಹಾಗೂ ಬೆಳ್ಳಾರೆ ಆರಕ್ಷಕ ಠಾಣೆಯ ಸಬ್ಇನ್ ಸ್ಪೆಕ್ಟರ್ ಆಂಜನೇಯ ರೆಡ್ಡಿ ಜಿ...

“ಕರ್ನಾಟಕ ಕೇರಳ ಗಡಿ ಭಾಗದ ರಸ್ತೆಯನ್ನು ತೆರವುಗೊಳಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಗೆ ಮನವಿ “

ಕೊರೊನ ಮಹಾಮಾರಿ ಖಾಯಿಲೆಯಿಂದ ಹಾಗೂ ಲಾಕ್ ಡೌನ್ ಜಾರಿಯಲ್ಲಿದ್ದುದರಿಂದ ಕರ್ನಾಟಕ ಕೇರಳ ಗಡಿ ಭಾಗದ ರಸ್ತೆಗಳು ಸಂಪೂರ್ಣ ಬಂದ್ ಆಗಿರುವುದರಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗುತ್ತಿದ್ದು ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು, ಹಾಕಿರುವ ಮಣ್ಣನ್ನೂ , ಗೇಟ್ ತೆರೆದು ಸಾರ್ವಜನಿಕರಿಗೆ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರ್...
Loading posts...

All posts loaded

No more posts

error: Content is protected !!