- Wednesday
- July 29th, 2026
ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಪರ್ಕದ ರಸ್ತೆ ನಾಗಪಟ್ಟಣ ಸೇತುವೆ ತನಕದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕೆಲಸಕ್ಕೆ ಮೇ.29 ರಂದು ಶಾಸಕ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂಚಾಯತ್ ಅಧ್ಯಕ್ಷ ಹರೀಶ್ ರಂಗತ್ತಮಲೆ, ಕಲ್ಲುಮುಟ್ಲು ವಾರ್ಡಿನ ನ.ಪಂ.ಸದಸ್ಯೆ ಶ್ರೀಮತಿ ಸುಶೀಲ ಜಿನ್ನಪ್ಪ ಪೂಜಾರಿ, ಸುಳ್ಯ...
ಕೊಲ್ಲಮೊಗ್ರದಿಂದ ಕಲ್ಮಕಾರುವರೆಗೆ ಸುಮಾರು 8 ಕಿ.ಮೀ. ರಸ್ತೆಯ ಮರುಡಾಮರೀಕರಣ ಆರಂಭವಾಗಿದೆ. ಇದಕ್ಕೆ ಶಾಸಕ ಎಸ್ ಅಂಗಾರ ಸೆಂಟ್ರಲ್ ರೋಡ್ ಫಂಡ್ (CRF) ನಿಂದ ರೂ ೭೫ ಲಕ್ಷ ಅನದಾನ ಒದಗಿಸಿದ್ದಾರೆ. ಈ ಮೊದಲು ಪ್ರಧಾನಮಂತ್ರಿ ಗ್ರಾಮ ಸಡಕ್ ಅಡಿಯಲ್ಲಿ ಅಭಿವೃದ್ಧಿ ಯಾಗಿದ್ದು ಕೆಲ ವರ್ಷಗಳಿಂದ ಗುಂಡಿ ಬಿದ್ದು ಸಂಚಾರಕ್ಕೆ ತೊಡಕಾಗಿತ್ತು.
ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...
ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳ ದ್ವಾರಗಳು ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.ಜೂನ್ 1ರಿಂದ ಪೂಜಾ ಕಾರ್ಯಕ್ರಮಗಳಿಗೆ ದೇವಸ್ಥಾನಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಮಸೀದಿ ಚರ್ಚುಗಳನ್ನು ತೆರೆಯುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರದಂದು ಹೇಳಿಕೆಯನ್ನು ನೀಡಿದ್ದರು.ಇದೇ ವಿಷಯಕ್ಕೆ...
ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ...
ಬೂಡು ಕೇರ್ಪಳ ಸಂಪರ್ಕಿಸುವ ರಸ್ತೆಯಲ್ಲಿ ದುರ್ಗಾಪರಮೇಶ್ವರಿ ಕಲಾಮಂದಿರ ಎದುರು ಭಾರಿ ಹದಗೆಟ್ಟಿದ್ದು ಮಳೆಗಾಲದಲ್ಲಿ ನಡೆದಾಡಲು ಕಷ್ಟವಾಗಲಿದೆ. ಆದ್ದರಿಂದ ಈ ಕೂಡಲೇ ದುರಸ್ತಿಪಡಿಸಬೇಕೆಂದು ನ.ಪಂ.ಸದಸ್ಯ ರಿಯಾಜ್ ಕಟ್ಟೆಕಾರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮುಕ್ಕೂರು : ಮಳೆ ಹಾನಿ ಪರಿಹಾರ ಯೋಜನೆಯಡಿ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಂಪರ್ಕ ರಸ್ತೆಯ ಕಾಪುಕಾಡು- ಜಾಲ್ಪಣೆ ತನಕ 17 ಲಕ್ಷ ರೂ.ವೆಚ್ಚದಲ್ಲಿ ಮರು ಡಾಮರೀಕರಣಕ್ಕೆ ಮೇ 28 ರಂದು ಚಾಲನೆ ನೀಡಲಾಯಿತು.ಜಿ.ಪಂ.ಸದಸ್ಯ ಎಸ್.ಎನ್. ಮನ್ಮಥ ಕಾಮಗಾರಿಗೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ,ನ್ಯಾಯವಾದಿ ಗಣಪತಿ ಭಟ್...
ಬೆಳ್ಳಾರೆಯಲ್ಲಿ ಕೆಲ ದಿನಗಳಿಂದ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಲದಿನಗಳ ಹಿಂದೆ ಇವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು,ಕೋವಿಡ್ 19 ಇರುವುದು ದೃಢಪಟ್ಟಿದೆ. ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.
ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...
Loading posts...
All posts loaded
No more posts
